AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನಮ್ಮ ಅಭ್ಯರ್ಥಿಯೇ ಮೇಯರ್: ಯುಟಿ ಖಾದರ್, ಜಗದೀಶ್ ಶೆಟ್ಟರ್ ವಿಶ್ವಾಸ!

Kalaburagi: ನಾವು 80 ಶಾಸಕರಿದ್ರೂ 30 ಸ್ಥಾನದ ಜೆಡಿಎಸ್​ಗೆ ಈ ಮೊದಲು ಸಿಎಂ ಸ್ಥಾನ ನೀಡಿದ್ದೆವು. 30 ಸ್ಥಾನದ ಜೆಡಿಎಸ್​ಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೆವು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಮ್ಮ ಅಭ್ಯರ್ಥಿಯೇ ಮೇಯರ್: ಯುಟಿ ಖಾದರ್, ಜಗದೀಶ್ ಶೆಟ್ಟರ್ ವಿಶ್ವಾಸ!
ಜಗದೀಶ್ ಶೆಟ್ಟರ್, ಯುಟಿ ಖಾದರ್
TV9 Web
| Edited By: |

Updated on: Sep 12, 2021 | 10:18 PM

Share

ಮಂಗಳೂರು: ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರವಾಗಿ ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯೇ ಮೇಯರ್ ಆಗುವ ವಿಶ್ವಾಸವಿದೆ. ಜನಸಾಮಾನ್ಯರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಕೊಟ್ಟಿದ್ದಾರೆ. ಸಿದ್ಧಾಂತದ ಪ್ರಕಾರ ಜೆಡಿಎಸ್​ನವರು ಕಾಂಗ್ರೆಸ್ ಬೆಂಬಲಿಸಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರೆಯಲು ಸಾಧ್ಯವಿಲ್ಲ. ಜೆಡಿಎಸ್​ನವರು ಅದನ್ನು ಮರೀತಾರೆ ಅಂತಾನೂ ಹೇಳೋಕೆ ಸಾಧ್ಯವಿಲ್ಲ. ನಾವು 80 ಶಾಸಕರಿದ್ರೂ 30 ಸ್ಥಾನದ ಜೆಡಿಎಸ್​ಗೆ ಈ ಮೊದಲು ಸಿಎಂ ಸ್ಥಾನ ನೀಡಿದ್ದೆವು. 30 ಸ್ಥಾನದ ಜೆಡಿಎಸ್​ಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೆವು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆ ಸಂದರ್ಭದಲ್ಲೂ ಹೆಚ್.ಡಿ. ದೇವೇಗೌಡಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಉಪಕಾರ ಖಂಡಿತವಾಗಿಯೂ ಜೆಡಿಎಸ್ ಮರೆಯಲ್ಲ. ಉಪಕಾರ ಮಾಡಿದವರನ್ನು ಮರೆಯಲ್ಲ ಎಂಬ ವಿಶ್ವಾಸವಿದೆ. ಕಲಬುರಗಿಯಲ್ಲಿ ಜೆಡಿಎಸ್​​ ನಮ್ಮನ್ನ ಬೆಂಬಲಿಸುವ ವಿಶ್ವಾಸ ಇದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮೇಯರ್, ಉಪಮೇಯರ್ ನಾವೇ ಆಗ್ತೇವೆ: ಜಗದೀಶ್ ಶೆಟ್ಟರ್ ಇತ್ತ ಬೆಳಗಾವಿಯಲ್ಲಿ ಮೇಯರ್​, ಉಪಮೇಯರ್​ ನಾವೇ ಆಗ್ತೇವೆ. ಜನರು ಈ ಬಾರಿಯೂ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಜೆಡಿಎಸ್ ಬೆಂಬಲಕ್ಕೆ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿಯೂ ಮೇಯರ್, ಉಪಮೇಯರ್ ನಾವೇ ಆಗುತ್ತೇವೆ ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬರಲು ಹಣದ ಆಫರ್ ಕೊಟ್ಟಿರಲಿಲ್ಲ: ಯುಟರ್ನ್ ಹೊಡೆದ ಶ್ರೀಮಂತ ಪಾಟೀಲ್

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ಗೆ ಬಿಜೆಪಿಗಿಂತ ಹೆಚ್ಚು ಮತ, ಆದರೆ ಗೆದ್ದ ಅಭ್ಯರ್ಥಿಗಳಲ್ಲಿ ಅವರ ಸಂಖ್ಯೆ ಹೆಚ್ಚು: ಡಿಕೆ ಶಿವಕುಮಾರ್

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ