AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನರು, ಸಿಖ್ಖರು ಹಾಗೂ ಬೌದ್ಧರು ಹಿಂದೂಗಳ ವಿರೋಧಿ ಅಲ್ಲ: ತೋಂಟದಾರ್ಯ ಮಠದ ಡಾ ಸಿದ್ದರಾಮಶ್ರೀ

ಜೈನರು, ಸಿಖ್ಖರು ಹಾಗೂ ಬೌದ್ಧರು ಹಿಂದೂಗಳ ವಿರೋಧಿ ಅಲ್ಲ. ಹಿಂದೂ ಎಂಬುದು ಧರ್ಮವೇ ಅಲ್ಲ, ಹಿಂದೂ ಜೀವನ ಪದ್ಧತಿಯಷ್ಟೇ. ನಾವು ಸ್ವತಂತ್ರ ಧರ್ಮ ಪಡೆದರೆ ಹಿಂದೂ ವಿರೋಧಿ ಆಗುವುದಿಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ.ಸಿದ್ದರಾಮಶ್ರೀ ಹೇಳಿದ್ದಾರೆ.

ಜೈನರು, ಸಿಖ್ಖರು ಹಾಗೂ ಬೌದ್ಧರು ಹಿಂದೂಗಳ ವಿರೋಧಿ ಅಲ್ಲ: ತೋಂಟದಾರ್ಯ ಮಠದ ಡಾ ಸಿದ್ದರಾಮಶ್ರೀ
ತೋಂಟದಾರ್ಯ ಮಠದ ಡಾ.ಸಿದ್ದರಾಮಶ್ರೀ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 09, 2023 | 4:27 PM

Share

ಧಾರವಾಡ: ಜೈನರು, ಸಿಖ್ಖರು ಹಾಗೂ ಬೌದ್ಧರು ಹಿಂದೂಗಳ ವಿರೋಧಿ ಅಲ್ಲ. ಹಿಂದೂ ಎಂಬುದು ಧರ್ಮವೇ ಅಲ್ಲ, ಹಿಂದೂ ಜೀವನ ಪದ್ಧತಿಯಷ್ಟೇ ಎಂದು ಗದಗ ತೋಂಟದಾರ್ಯ ಮಠದ ಡಾ.ಸಿದ್ದರಾಮಶ್ರೀ (Thontadarya Mutt Siddaramashree) ಹೇಳಿದ್ದಾರೆ. ನಗರದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಆಗುತ್ತದೆ. ಲಿಂಗಾಯತ ಸ್ವತಂತ್ರ ಧರ್ಮ, ಬಸವಣ್ಣ ಅದರ ಸ್ಥಾಪಕರು. ವಚನ ಸಾಹಿತ್ಯವೇ ಲಿಂಗಾಯತ ಸ್ವತಂತ್ರ ಧರ್ಮದ ಸಂವಿಧಾನ ಎಂದು ಹೇಳಿದರು.

ಹಿಂದೂ ಧರ್ಮದಲ್ಲಿ ಯಾವುದೇ ನಿರ್ದಿಷ್ಟವಾದ ಗ್ರಂಥ ಇಲ್ಲ. ಹಿಂದೂ ಧರ್ಮದಲ್ಲಿ ಓರ್ವ ಪ್ರವರ್ತಕ, ಪ್ರವಾದಿ ಇಲ್ಲ. ಹಿಂದೂಗಳು 33 ಕೋಟಿ ದೇವರನ್ನೂ ಪೂಜೆ ಮಾಡುತ್ತಾರೆ. ಭಗವದ್ಗೀತೆಯ ಯಾವ ಶ್ಲೋಕದಲ್ಲಿಯೂ ಹಿಂದೂ ಪದ ಇಲ್ಲ. ನಾವು ಸ್ವತಂತ್ರ ಧರ್ಮ ಪಡೆದರೆ ಹಿಂದೂ ವಿರೋಧಿ ಆಗುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಅಮರನಾಥ ಯಾತ್ರೆ ಕೈಗೊಂಡಿದ್ದ 300 ಕನ್ನಡಿಗರು ಸೇಫ್: ಹೆಚ್​ಕೆ ಪಾಟೀಲ್

ವೀರಶೈವ ಬೇರೆ ಲಿಂಗಾಯತವೇ ಬೇರೆ ಎಂದ ಸಿದ್ದರಾಮ ಸ್ವಾಮೀಜಿ

ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ವಿಚಾರವಾಗಿ ಮಾತನಾಡಿದ ಅವರು, ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಬೇಕು. ಈ ಸಂಬಂಧ ಕೇಂದ್ರಕ್ಕೆ ಮತ್ತೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಬೇಕು. ಲಿಂಗಾಯತ ಧರ್ಮದ ಒಳಪಂಗಡಗಳ ಬಗ್ಗೆ ಅಧ್ಯಯನ ನಡೆಯಬೇಕು ಎಂದರು.

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಹೋರಾಟ ಮಾಡುತ್ತಿದ್ದೇವೆ. ವೀರಶೈವ ಲಿಂಗಾಯತ ಯಾವ ದಾಖಲೆಯಲ್ಲೂ ಇಲ್ಲ. ವೀರಶೈವ ಬೇರೆ ಲಿಂಗಾಯತವೇ ಬೇರೆ. ಎರಡನ್ನೂ ಸೇರಿಸಿ ಒಬಿಸಿ ಪಟ್ಟಿಗೆ ಸೇರಿಸಿ ಎಂದು ಅನ್ನೋದು ಸರಿಯಲ್ಲ. ರಾಜ್ಯ ಸರ್ಕಾರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು.

ಇದನ್ನೂ ಓದಿ: ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಟನಲ್‌ನಲ್ಲಿ ನೀರು ಸೋರಿಕೆ: ಸುರಂಗ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿದ ಜಿಲ್ಲಾಡಳಿತ

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ಮುಂದುವರಿಸುತ್ತೇವೆ

2016ರಲ್ಲಿ ಸ್ವತಂತ್ರ ಧರ್ಮ ಮಾನ್ಯತೆಗೆ ಹೋರಾಟ ಮಾಡಿದ್ದೆವು. ಸದ್ಯ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ಈ ಹಿಂದೆ ಹೋರಾಟ ಮಾಡಿದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು. ನ್ಯಾ.ನಾಗಮೋಹನ ದಾಸ್ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದ್ದರು. ಬಳಿಕ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಕೇಂದ್ರ ಸರ್ಕಾರ ಆ ಪ್ರಸ್ತಾವನೆ ಪರಿಶೀಲಿಸದೆ ವಾಪಸ್ ಕಳುಹಿಸಿದೆ. ಈಗ ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!