AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghulam Nabi Azad: ಹೊಸ ಪಕ್ಷ, ಧ್ವಜದ ಬಗ್ಗೆ ಜಮ್ಮು ಕಾಶ್ಮೀರದ ಜನರು ತೀರ್ಮಾನಿಸುತ್ತಾರೆ: ಗುಲಾಂ ನಬಿ ಆಜಾದ್

ಕಾಂಗ್ರೆಸ್​ನೊಂದಿಗಿನ ತಮ್ಮ 50 ವರ್ಷಗಳ ಸುದೀರ್ಘ ನಂಟು ಮುರಿದುಕೊಂಡ ನಂತರ ಗುಲಾಂ ನಬಿ ಆಜಾದ್ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದಾರೆ.

Ghulam Nabi Azad: ಹೊಸ ಪಕ್ಷ, ಧ್ವಜದ ಬಗ್ಗೆ ಜಮ್ಮು ಕಾಶ್ಮೀರದ ಜನರು ತೀರ್ಮಾನಿಸುತ್ತಾರೆ: ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್ (ಸಂಗ್ರಹ ಚಿತ್ರ) Image Credit source: India Today
TV9 Web
| Edited By: |

Updated on:Sep 04, 2022 | 2:20 PM

Share

ಜಮ್ಮು: ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಭಾನುವಾರ ಹೊಸ ಪಕ್ಷ ರಚಿಸುವ ಘೋಷಣೆ ಮಾಡಿದರು. ಜಮ್ಮುವಿನ ಸೈನಿಕ್ ಕಾಲೊನಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಹೆಸರನ್ನು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಜನರು ಪಕ್ಷದ ಹೆಸರು ಮತ್ತು ಧ್ವಜದ ಬಗ್ಗೆ ತೀರ್ಮಾನಿಸುತ್ತಾರೆ. ನಾನು ನನ್ನ ಪಕ್ಷವು ಎಲ್ಲರಿಗೂ ಅರ್ಥವಾಗುವ, ಹಿಂದೂಸ್ತಾನಿ ಹೆಸರು ಹೊಂದಿರಬೇಕು ಎಂದು ಬಯಸುತ್ತೇನೆ ಎಂದು ಆಜಾದ್ ಹೇಳಿದರು.

ಜಮ್ಮು ವಿಮಾನ ನಿಲ್ದಾಣದಿಂದ ಸಮಾವೇಶದ ಸ್ಥಳಕ್ಕೆ ಮೆರವಣಿಗೆಯಲ್ಲಿ ತೆರಳಿದ ಅವರು, ಸ್ಥಳೀಯ ಜಮ್ಮು ನಿವಾಸಿಗಳ ಡೋಗ್ರಾ ಶೈಲಿಯ ರುಮಾಲು ಧರಿಸಿದ್ದರು. ಗುಲಾಮ್ ನಬಿ ಆಜಾದ್ 2005ರಿಂದ 2008ರವರೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಆಗಿದ್ದರು. ನಾನು ಸದಾ ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ಇದ್ದೇನೆ. ಇಂದು ನಾನು ಮುಖ್ಯಮಂತ್ರಿ ಅಥವಾ ಸಚಿವ ಆಗಿಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯನಾಗಿ ನಿಮ್ಮೆದುರು ಬಂದಿದ್ದೇನೆ. ಕಳೆದ ಒಂದು ವಾರದಲ್ಲಿ ಹಲವು ಜನರು ಕಾಂಗ್ರೆಸ್​ಗೆ ರಾಜೀನಾಮೆ ಕೊಟ್ಟು ನನ್ನನ್ನು ಬೆಂಬಲಿಸಿದ್ದಾರೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

ತಮ್ಮೊಂದಿಗೆ ಕೈಜೋಡಿಸಿದ ಐವರು ಮಾಜಿ ಸಚಿವರನ್ನು ಆಜಾದ್ ಹೊಗಳಿದರು. ಸಭೆಯಲ್ಲಿ ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಎಂದು ಘೋಷಿಸಲಾಯಿತು. ‘ಈ ವೇದಿಕೆಯ ಮೇಲೆ ಇಂದು ಪಿಡಿಪಿ, ಬಿಜೆಪಿ ಮತ್ತ ನ್ಯಾಷನಲ್ ಕಾನ್ಫರೆನ್ಸ್​ನ ನಾಯಕರಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರು ಕೈಜೋಡಿಸಲಿದ್ದಾರೆ’ ಎಂದು ಮಾಜಿ ಸಚಿವ ಹಾಗೂ ಆಜಾದ್ ಆಪ್ತ ಜುಗಲ್ ಕಿಶೋರ್ ಹೇಳಿದರು.

ಕಾಂಗ್ರೆಸ್​ನೊಂದಿಗಿನ ತಮ್ಮ 50 ವರ್ಷಗಳ ಸುದೀರ್ಘ ನಂಟು ಮುರಿದುಕೊಂಡ ನಂತರ ಗುಲಾಂ ನಬಿ ಆಜಾದ್ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದಾರೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೊಸ ಪಕ್ಷವು ಸ್ಪರ್ಧಿಸಲಿದೆ ಎಂದು ಆಜಾದ್ ಘೋಷಿಸಿದರು. ಆಜಾದ್ ಅವರು ಹೊಸ ಪಕ್ಷ ಆರಂಭಿಸುವ ಸೂಚನೆ ನೀಡಿದ ನಂತರ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಆಜಾದ್ ಅವರೊಂದಿಗೆ ಕೈಜೋಡಿಸಿದರು.

Published On - 2:20 pm, Sun, 4 September 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು