AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಟ್ವೀಟಾಸ್ತ್ರ! ಬಿಜೆಪಿಗೆ ಜೆಡಿಎಸ್ ಘಟಕ ತಿರುಗೇಟು

ಮಾಜಿ ಮುಖ್ಯಮಂತ್ರಿಗಳು ಎತ್ತಿದ್ದು ವೈಯಕ್ತಿಕ ವಿಷಯಗಳನ್ನಲ್ಲ. ಆದರೆ ಬಿಜೆಪಿ ಅವರ ವೈಯಕ್ತಿಕ ವಿಚಾರಗಳಲ್ಲಿ ಮೂಗು ತೂರಿಸಿದೆ.

ಮುಂದುವರಿದ ಟ್ವೀಟಾಸ್ತ್ರ! ಬಿಜೆಪಿಗೆ ಜೆಡಿಎಸ್ ಘಟಕ ತಿರುಗೇಟು
ಬಿಜೆಪಿ ಮತ್ತು ಜೆಡಿಎಸ್ ಚಿಹ್ನೆ
TV9 Web
| Edited By: |

Updated on:Oct 20, 2021 | 5:56 PM

Share

ಬೆಂಗಳೂರು: ಜಿಡಿಎಸ್ ಮತ್ತು ಬಿಜೆಪಿ ನಡುವಿನ ಟ್ವೀಟ್ ಸಮರ ಮುಂದುವರಿದಿದೆ. ಟ್ವೀಟ್ ಮೂಲಕ ಬಿಜೆಪಿಗೆ ಜೆಡಿಎಸ್ ಘಟಕ ತಿರುಗೇಟು ನೀಡಿದೆ. ಆರ್​ಎಸ್​ಎಸ್​ ಎನ್ನುವುದು ಅಧಿಕೃತ ಸಂಸ್ಥೆಯೇ? ಅದು ಎಲ್ಲಿ? ಯಾವಾಗ ನೋಂದಣಿ ಆಗಿದೆ? ಅದರ ಅಧಿಕೃತ ಕಚೇರಿ ಎಲ್ಲಿದೆ? ಅದರ ಕೆಲಸ ಸಮಾಜ ಸೇವೆಯೋ ಅಥವಾ ರಾಜಕೀಯವೋ? ಅಥವಾ ಹಣ ಮಾಡುವುದೋ? ಅಂತ ಜೆಡಿಎಸ್ ಘಟಕ ಪ್ರಶ್ನಿಸಿದೆ.

ಗುರುದಕ್ಷಿಣೆ ಸೇರಿ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ದೇಶ-ವಿದೇಶಗಳಿಂದ ಕೋಟ್ಯಂತರ ರೂ. ದೇಣಿಗೆ ಬರುತ್ತಿದೆ. ಅದಕ್ಕೆ ಸಂಘ ಲೆಕ್ಕ ಕೊಟ್ಟಿದ್ಯಾ? ತನ್ನ ವಹಿವಾಟಿನ ಬಗ್ಗೆ ಬ್ಯಾಲೆನ್ಸ್ಶೀಟ್ ಇಟ್ಟುಕೊಂಡಿದ್ಯಾ? ಅದನ್ನು ಪರಿಶೀಲನೆ ಮಾಡಿದ ಲೆಕ್ಕಪರಿಶೋಧಕರು ಯಾರು? ಶಾಲೆಗಳಲ್ಲಿ ಬಾಲ ಸ್ವಯಂಸೇವಕರ ಬ್ರೈನ್ ವಾಶ್ ಸುಳ್ಳೇ? ಶಿಕ್ಷಣದ ನೆಪದಲ್ಲಿ ಮತಾಂಧತೆಯ ವಿಷಪ್ರಾಶನ ಪೊಳ್ಳಾ? ಸಂಘದ ಶಾಖೆಗಳಲ್ಲಿ ತ್ರಿಶೂಲ, ಖಡ್ಗಗಳನ್ನಿಡುವುದು ಅಕ್ರಮ. ಇದಕ್ಕೆ ಪರವಾನಗಿ ಪಡೆಯಲಾಗಿದೆಯಾ? ಇಂಥ ಹಲವು ಪ್ರಶ್ನೆಗಳನ್ನು ಕುಮಾರಸ್ವಾಮಿ ಕೇಳಿದ್ದರು. ಇದಕ್ಕೆ ಉತ್ತರಿಸುವ ಎದೆಗಾರಿಕೆ ಯಾಕೆ ಬಿಜೆಪಿ ತೋರಲಿಲ್ಲ ಅಂತ ಜೆಡಿಎಸ್ ಟ್ವೀಟ್ ಮೂಲಕ ಕೇಳಿದೆ.

ಮಾಜಿ ಮುಖ್ಯಮಂತ್ರಿಗಳು ಎತ್ತಿದ್ದು ವೈಯಕ್ತಿಕ ವಿಷಯಗಳನ್ನಲ್ಲ. ಆದರೆ ಬಿಜೆಪಿ ಅವರ ವೈಯಕ್ತಿಕ ವಿಚಾರಗಳಲ್ಲಿ ಮೂಗು ತೂರಿಸಿದೆ. ಸದನದಲ್ಲಿ ಖಾಸಗಿ ಬದುಕಿನ ಬಗ್ಗೆ ಮಾತನಾಡುವ ಎದೆಗಾರಿಕೆ ತೋರಿದ ಕುಮಾರಸ್ವಾಮಿಯವರೆಲ್ಲಿ? ಅದೇ ಸದನದಲ್ಲಿ ನೀಚ ಕೃತ್ಯ ಎಸಗಿದ ಬಿಜೆಪಿ ನಾಯಕರು ಎಲ್ಲಿ? ಎಂದು ಪ್ರಶ್ನಿಸಿದ ರಾಜ್ಯ ಜೆಡಿಎಸ್ ಘಟಕ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಹೇಳಿದೆ.

ಇದನ್ನೂ ಓದಿ

ಪ್ರತಿಷ್ಠಿತ ಆಶಸ್ ಸರಣಿಗೂ ಮುನ್ನ ಕಾಂಗರೂಗಳಿಗೆ ಆಘಾತ; ತಂಡದ ಸ್ಟಾರ್ ಬೌಲರ್​ ಕ್ರಿಕೆಟ್​ಗೆ ವಿದಾಯ

‘ಕೋಟಿಗೊಬ್ಬ 3’ ಸಿನಿಮಾ ಕಲೆಕ್ಷನ್​ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಬಾಲಿವುಡ್​ ನಟ

Published On - 5:52 pm, Wed, 20 October 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು