Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತನಾಡಲು ರೇವಣ್ಣ ಉದಾಸೀನ, ವಿಧಾನಸಭೆಯಲ್ಲಿ ನಾಯಕತ್ವದ ಕೊರತೆ ಎದುರಿಸಿದ ಜೆಡಿಎಸ್

ಹೀಗಾಗಿ ಸ್ಪೀಕರ್ ಗಮನಸೆಳೆಯಲು, ಸ್ಪೀಕರ್ ಮೇಲೆ ಒತ್ತಡ ಹಾಕಲು ಜೆಡಿಎಸ್ ಶಾಸಕರಿಗೆ ಸಾಧ್ಯವಾಗಲಿಲ್ಲ. ಜೆಡಿಎಸ್ ಹೋರಾಟ ತಾರ್ಕಿಕ ಅಂತ್ಯ ಕಾಣುವಲ್ಲಿ ವಿಫಲವಾಯಿತು.

ಮಾತನಾಡಲು ರೇವಣ್ಣ ಉದಾಸೀನ, ವಿಧಾನಸಭೆಯಲ್ಲಿ ನಾಯಕತ್ವದ ಕೊರತೆ ಎದುರಿಸಿದ ಜೆಡಿಎಸ್
ಮಾಜಿ ಸಚಿವ ರೇವಣ್ಣ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 20, 2021 | 3:06 PM

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರ ಪುಂಡಾಟಿಕೆ ಕುರಿತು ಜಾತ್ಯತೀಯ ಜನತಾದಳ (ಜೆಡಿಎಸ್) ಕಾರ್ಯಕರ್ತರು ಸೋಮವಾರ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಆದರೆ ನಾಯಕತ್ವ ಕೊರತೆಯ ಕಾರಣ ಜೆಡಿಎಸ್ ಸದಸ್ಯರಿಗೆ ತಮ್ಮ ವಾದವನ್ನು ಸಂಪೂರ್ಣವಾಗಿ ಮಂಡಿಸಲು ಅವಕಾಶವೇ ಸಿಗಲಿಲ್ಲ. ಪ್ರಸ್ತಾವವನ್ನು ಸ್ಪೀಕರ್ ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸುವಲ್ಲಿ ಜೆಡಿಎಸ್ ನಾಯಕರು ವಿಫಲರಾದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಂಶಂಪುರ ಗೈರು ಹಾಜರಾಗಿದ್ದರು. ಮತ್ತೋರ್ವ ಹಿರಿಯ ನಾಯಕ ಎಚ್​.ಡಿ.ರೇವಣ್ಣ ಸದನದಲ್ಲಿ ಉಪಸ್ಥಿತರಿದ್ದರು, ಆದರೆ ಮೇಲೆದ್ದು ಮಾತನಾಡುವ ಉತ್ಸಾಹ ತೋರಲಿಲ್ಲ. ಹೀಗಾಗಿ ಸ್ಪೀಕರ್ ಗಮನಸೆಳೆಯಲು, ಸ್ಪೀಕರ್ ಮೇಲೆ ಒತ್ತಡ ಹಾಕಲು ಜೆಡಿಎಸ್ ಶಾಸಕರಿಗೆ ಸಾಧ್ಯವಾಗಲಿಲ್ಲ. ಜೆಡಿಎಸ್ ಹೋರಾಟ ತಾರ್ಕಿಕ ಅಂತ್ಯ ಕಾಣುವಲ್ಲಿ ವಿಫಲವಾಯಿತು.

ಕನ್ನಡ ಧ್ವಜದ ಶಾಲು ಧರಿಸಿದ್ದ ಜೆಡಿಎಸ್ ಶಾಸಕರು ಪ್ರತಿಭಟನೆಗೆ ಮುಂದಾದರು. ಶಾಸಕ ಅನ್ನದಾನಿ ಈ ಹೋರಾಟಕ್ಕೆ ನೇತೃತ್ವ ನೀಡಿದ್ದರು. ಜೆಡಿಎಸ್​ನಿಂದ ಹೊರ ಹೋಗಲು ಸಿದ್ಧರಾಗಿದ್ದಾರೆ ಎಂದು ಹೇಳುತ್ತಿರುವ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಸಹ ಕನ್ನಡ ಧ್ವಜದ ಶಾಲು ಪ್ರದರ್ಶಿಸಿ ಅನ್ನದಾನಿ ಅವರ ಪ್ರಯತ್ನಕ್ಕೆ ಸಾಥ್ ನೀಡಿದರು. ಆದರೆ ಸದನದಲ್ಲಿ ಇದ್ದರೂ ಎಚ್​.ಡಿ.ರೇವಣ್ಣ ಮೇಲೆದ್ದು ನಿಲ್ಲಲು ಉತ್ಸಾಹ ತೋರಲಿಲ್ಲ. ಸದನ ಮುಂದೂಡುವ ಕೆಲವೇ ನಿಮಿಷಗಳ ಮೊದಲು ಎದ್ದು ನಿಂತರಾದರೂ ಏನೂ ಪ್ರಯೋಜನವಾಗಲಿಲ್ಲ.

ಭತ್ಯೆ ಪಡೆಯಲು ಸದನಕ್ಕೆ ಹೋಗಬೇಕೆ: ಎಚ್​ಡಿಕೆ ಪ್ರಶ್ನೆ ಕೇವಲ ಟಿಎ, ಡಿಎ ಪಡೆಯುವುದಕ್ಕೆ ನಾನು ಸದನಕ್ಕೆ ಹೋಗಬೇಕೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್​.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಐದು ದಿನದ ಅಧಿವೇಶನದಲ್ಲಿ ಏನು ಚರ್ಚೆಯಾಗಿದೆ ಎಂದು ಪ್ರಶ್ನಿಸಿದ ಅವರು, ಒಂದು ದಿನ ಭೈರತಿ ಬಸವರಾಜ್ ವಿರುದ್ಧ ಪ್ರತಿಭಟನೆ ಮಾಡಿದರು. ಇನ್ನೊಂದು ದಿನ ತಹಶೀಲ್ದಾರರ ವಿರುದ್ಧ ಪ್ರತಿಭಟನೆ ಮಾಡಿದರು. ಅದನ್ನೆಲ್ಲಾ ನೋಡುವುದಕ್ಕೆ ನಾನು ಅಲ್ಲಿಗೆ ಹೋಗಬೇಕಿತ್ತಾ ಎಂದು ಕೇಳಿದರು.

ಅಧಿವೇಶನ ನಡೆಯದಂತೆ ಕಾಂಗ್ರೆಸ್ ಹುನ್ನಾರ: ಬಿಜೆಪಿ ನಾಯಕ ಆರೋಪ ಬೆಳಗಾವಿ ಅಧಿವೇಶನ ಸಮರ್ಪಕ ರೀತಿಯಲ್ಲಿ ನಡೆಯದಂತೆ ಕಾಂಗ್ರೆಸ್ ಹುನ್ನಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಹೇಳಿದರು. ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಕರೆಯಲಾಗಿದೆ. ಆದರೆ ಅಧಿವೇಶನ ಸುಗಮವಾಗಿ ನಡೆಯಲು ಕಾಂಗ್ರೆಸ್ ಅವಕಾಶ ನೀಡುತ್ತಿಲ್ಲ. ಭೈರತಿ ಬಸವರಾಜ್ ಬಗ್ಗೆ ಭೂಕಬಳಿಕೆ ಆರೋಪ ಮಾಡುತ್ತಿದ್ದಾರೆ. ಭೈರತಿಯಿಂದ ಅನ್ಯಾಯವಾಗಿಲ್ಲವೆಂದು ಮಾಲೀಕರೇ ಹೇಳುತ್ತಿದ್ದಾರೆ/ ಕಾಂಗ್ರೆಸ್ ನಾಯಕರ ದ್ವಂದ್ವ ನೀತಿ ನಮಗೆ ಅರ್ಥವಾಗುತ್ತಿಲ್ಲ ಎಂದರು. ಕಾಂಗ್ರೆಸ್ ಶಾಸಕರು ಸದನದಲ್ಲಿ ಪ್ರಶ್ನೆ ಕೇಳಿದರೆ ಸರ್ಕಾರ ಉತ್ತರ ಕೊಡತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಕೋನರೆಡ್ಡಿ: ಸ್ವಾಗತಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ, ನಿರ್ದೇಶಕ; ಸಿಟಿ ರವಿ ಹೇಳಿಕೆ

Published On - 3:06 pm, Mon, 20 December 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!