AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​-ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ, ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಿದ್ದರು. ಈಗ ಪಕ್ಷ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಜೆಡಿಎಸ್​-ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Anil Kalkere
| Edited By: ವಿವೇಕ ಬಿರಾದಾರ|

Updated on: Mar 10, 2024 | 1:45 PM

Share

ಬೆಂಗಳೂರು, ಮಾರ್ಚ್​ 10: ಜೆಡಿಎಸ್​-ಬಿಜೆಪಿ (JDS-BJP) ಅಪವಿತ್ರ ಮೈತ್ರಿ ಮಾಡಿಕೊಂಡಿವೆ. ಮುಂದಿನ ಜನ್ಮ ಇದ್ದರೇ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು (HD Devegowda) ಹೇಳಿದ್ದರು. ಈಗ ಪಕ್ಷ ಉಳಿಸಲು ಬಿಜೆಪಿ ಜೊತೆಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ಮಾಡಿದರು. ಬೆಂಗಳೂರಿನ ಸೂಲಿಕೆರೆ ಮೈದಾನದಲ್ಲಿ ನಡೆದ ಶಿಕ್ಷಕರ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ಅವರು, ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ, ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಿದ್ದರು. ಈಗ ಪಕ್ಷ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್​ಡಿ ಕುಮಾರಸ್ವಾಮಿಯನ್ನು ಯಾರು ಅಧಿಕಾರದಿಂದ ಇಳಿಸಿದರೂ ಅವರ ಜೊತೆಯೇ ಸೇರಿಕೊಂಡಿದ್ದಾರೆ. ದೇವೇಗೌಡರು, ಅವರ ಕುಟುಂಬದ ರಾಜಕಾರಣ ಉಳಿಯಬೇಕಾದರೆ ಏನು ಬೇಕಾದರೂ ಮಾಡುತ್ತಾರೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಏನೇ ತೀರ್ಮಾನ ಮಾಡಿದರೂ ಜನ ಕಣ್ಣು ಮುಚ್ಕೊಂಡು ಬೆಂಬಲಿಸುತ್ತಾರೆ ಅಂದುಕೊಂಡಿದ್ದಾರೆ ಎಂದರು.

ನಮ್ಮ ಗೌಡರಿಗೆ ಅದೇನು ಆಗಿದ್ಯೋ‌ ಗೊತ್ತಿಲ್ಲ. ಮೋದಿ ಗೆದ್ದರೆ ವಿದೇಶಕ್ಕೆ ಹೋಗುತ್ತೇನೆ ಅಂದಿದ್ದರು. ಈಗ ಅದೇನ್ ಹೊಗಳುವುದು, ಹಳೇ ಸಂಬಂಧ ಅಂತೆ. ನೆವರ್ ಎಕ್ಸಪೆಕ್ಟೆಡ್ ಫ್ರಾಮ್ ದೇವೇಗೌಡ. ಅವರು ಪ್ರಧಾನಿಯಾಗಿದ್ದವರು. ಈ ರೀತಿ ಮಾಡುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರೆಂಟಿ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಶಿಕ್ಷಕರ ಚುನಾವಣೆ ಬಹಳ ಪ್ರಮುಖ ಚುನಾವಣೆ. ಈ ಚುನಾವಣೆ ಲೋಕಸಭೆ ಚುನಾವಣೆಯ ದಿಕ್ಸೂಚಿ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದರು. ನರೇಂದ್ರ ಮೋದಿ ಹೆಸರಲ್ಲಿ ಗೆದ್ದು ಬಿಡುತ್ತೇವೆ ಅಂತ ಬಿಜೆಪಿ ನಾಯಕರು ಅಂದುಕೊಂಡಿದ್ದಾರೆ. ಪಿ ರಾಜೀವ್​ ಹೇಳಿದ್ದ, ಅಭ್ಯರ್ಥಿ ಮುಖ್ಯವಲ್ಲ ಮೋದಿ ಹೆಸರಲ್ಲಿ ಗೆಲ್ಲುತ್ತೇವೆ ಎಂದಿದ್ದರು. ಆದರೆ ಈಗ ಏನಾಯ್ತು? ಎಂದು ಪ್ರಶ್ನಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರು ರಾಜ್ಯ ಪ್ರವಾಸ ಮಾಡಿದ್ದೇ ಮಾಡಿದ್ದು, ಆದರೆ ಏನಾಯ್ತು, ನಾವು 136‌ ಸೀಟು ಗೆದ್ವಿ. ಇವರು 4 ವರ್ಷ ಲೂಟಿ ಮಾಡಿದ್ದಾರೆ. 28ಕ್ಕೆ 28 ಗೆದ್ದು ಬಿಡುತ್ತೇವೆ ಅಂತಿದ್ದಾರೆ. 2023-24 ರಲ್ಲಿ ಕರ್ನಾಟಕದಲ್ಲಿ 4 ಲಕ್ಷ 36 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ. ರಾಜ್ಯಕ್ಕೆ ವಾಪಾಸ್ 50 ಸಾವಿರ ಕೋಟಿ ವಾಪಾಸ್ ಬಂದಿದೆ. ಅಂದರೆ 100 ರೂಪಾಯಿ ನೀಡಿದರೇ 13 ರೂ. ವಾಪಸ್​ ಬರುತ್ತೆ. ನಮ್ಮ ದುಡ್ಡನ್ನು ಉತ್ತರ ಭಾರತದ ರಾಜ್ಯಗಳಿಗೆ ಕೊಡುತ್ತಾರೆ. ಕೊಡಿ ನಾನೇನು ಬೇಡ ಅನ್ನಲ್ಲ. ಆದರೆ ಈ ತಾರತಮ್ಯ ಏಕೆ? ಎಂದು ಪ್ರಶ್ನೆ ಮಾಡಿದರು.

ಪುಟ್ಟಣ್ಣ ಶಿಕ್ಷಕರ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಕೂಡಲೇ ಸಭೆ ಮಾಡಿ ನಿಮ್ಮ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. 7ನೇ ವೇತನ ಆಯೋಗ, ಪಿಂಚಣಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Anil Kalkere
Anil Kalkere
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!