AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​-ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ, ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಿದ್ದರು. ಈಗ ಪಕ್ಷ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಜೆಡಿಎಸ್​-ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on: Mar 10, 2024 | 1:45 PM

Share

ಬೆಂಗಳೂರು, ಮಾರ್ಚ್​ 10: ಜೆಡಿಎಸ್​-ಬಿಜೆಪಿ (JDS-BJP) ಅಪವಿತ್ರ ಮೈತ್ರಿ ಮಾಡಿಕೊಂಡಿವೆ. ಮುಂದಿನ ಜನ್ಮ ಇದ್ದರೇ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು (HD Devegowda) ಹೇಳಿದ್ದರು. ಈಗ ಪಕ್ಷ ಉಳಿಸಲು ಬಿಜೆಪಿ ಜೊತೆಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ಮಾಡಿದರು. ಬೆಂಗಳೂರಿನ ಸೂಲಿಕೆರೆ ಮೈದಾನದಲ್ಲಿ ನಡೆದ ಶಿಕ್ಷಕರ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ಅವರು, ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ, ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಿದ್ದರು. ಈಗ ಪಕ್ಷ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್​ಡಿ ಕುಮಾರಸ್ವಾಮಿಯನ್ನು ಯಾರು ಅಧಿಕಾರದಿಂದ ಇಳಿಸಿದರೂ ಅವರ ಜೊತೆಯೇ ಸೇರಿಕೊಂಡಿದ್ದಾರೆ. ದೇವೇಗೌಡರು, ಅವರ ಕುಟುಂಬದ ರಾಜಕಾರಣ ಉಳಿಯಬೇಕಾದರೆ ಏನು ಬೇಕಾದರೂ ಮಾಡುತ್ತಾರೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಏನೇ ತೀರ್ಮಾನ ಮಾಡಿದರೂ ಜನ ಕಣ್ಣು ಮುಚ್ಕೊಂಡು ಬೆಂಬಲಿಸುತ್ತಾರೆ ಅಂದುಕೊಂಡಿದ್ದಾರೆ ಎಂದರು.

ನಮ್ಮ ಗೌಡರಿಗೆ ಅದೇನು ಆಗಿದ್ಯೋ‌ ಗೊತ್ತಿಲ್ಲ. ಮೋದಿ ಗೆದ್ದರೆ ವಿದೇಶಕ್ಕೆ ಹೋಗುತ್ತೇನೆ ಅಂದಿದ್ದರು. ಈಗ ಅದೇನ್ ಹೊಗಳುವುದು, ಹಳೇ ಸಂಬಂಧ ಅಂತೆ. ನೆವರ್ ಎಕ್ಸಪೆಕ್ಟೆಡ್ ಫ್ರಾಮ್ ದೇವೇಗೌಡ. ಅವರು ಪ್ರಧಾನಿಯಾಗಿದ್ದವರು. ಈ ರೀತಿ ಮಾಡುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರೆಂಟಿ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಶಿಕ್ಷಕರ ಚುನಾವಣೆ ಬಹಳ ಪ್ರಮುಖ ಚುನಾವಣೆ. ಈ ಚುನಾವಣೆ ಲೋಕಸಭೆ ಚುನಾವಣೆಯ ದಿಕ್ಸೂಚಿ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದರು. ನರೇಂದ್ರ ಮೋದಿ ಹೆಸರಲ್ಲಿ ಗೆದ್ದು ಬಿಡುತ್ತೇವೆ ಅಂತ ಬಿಜೆಪಿ ನಾಯಕರು ಅಂದುಕೊಂಡಿದ್ದಾರೆ. ಪಿ ರಾಜೀವ್​ ಹೇಳಿದ್ದ, ಅಭ್ಯರ್ಥಿ ಮುಖ್ಯವಲ್ಲ ಮೋದಿ ಹೆಸರಲ್ಲಿ ಗೆಲ್ಲುತ್ತೇವೆ ಎಂದಿದ್ದರು. ಆದರೆ ಈಗ ಏನಾಯ್ತು? ಎಂದು ಪ್ರಶ್ನಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರು ರಾಜ್ಯ ಪ್ರವಾಸ ಮಾಡಿದ್ದೇ ಮಾಡಿದ್ದು, ಆದರೆ ಏನಾಯ್ತು, ನಾವು 136‌ ಸೀಟು ಗೆದ್ವಿ. ಇವರು 4 ವರ್ಷ ಲೂಟಿ ಮಾಡಿದ್ದಾರೆ. 28ಕ್ಕೆ 28 ಗೆದ್ದು ಬಿಡುತ್ತೇವೆ ಅಂತಿದ್ದಾರೆ. 2023-24 ರಲ್ಲಿ ಕರ್ನಾಟಕದಲ್ಲಿ 4 ಲಕ್ಷ 36 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ. ರಾಜ್ಯಕ್ಕೆ ವಾಪಾಸ್ 50 ಸಾವಿರ ಕೋಟಿ ವಾಪಾಸ್ ಬಂದಿದೆ. ಅಂದರೆ 100 ರೂಪಾಯಿ ನೀಡಿದರೇ 13 ರೂ. ವಾಪಸ್​ ಬರುತ್ತೆ. ನಮ್ಮ ದುಡ್ಡನ್ನು ಉತ್ತರ ಭಾರತದ ರಾಜ್ಯಗಳಿಗೆ ಕೊಡುತ್ತಾರೆ. ಕೊಡಿ ನಾನೇನು ಬೇಡ ಅನ್ನಲ್ಲ. ಆದರೆ ಈ ತಾರತಮ್ಯ ಏಕೆ? ಎಂದು ಪ್ರಶ್ನೆ ಮಾಡಿದರು.

ಪುಟ್ಟಣ್ಣ ಶಿಕ್ಷಕರ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಕೂಡಲೇ ಸಭೆ ಮಾಡಿ ನಿಮ್ಮ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. 7ನೇ ವೇತನ ಆಯೋಗ, ಪಿಂಚಣಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ