AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು

ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ. ಮಂಜುನಾಥ್ ಅವರನ್ನು ರಾಜಕಾರಣಕ್ಕೆ ಸೆಳೆಯುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯಲು ಜೆಡಿಎಸ್ , ಬಿಜೆಪಿ ಮೈತ್ರಿ ಚಿಂತನೆ ನಡೆಸಿದೆ. ಮಂಜುನಾಥ್​ರನ್ನು ರಾಜಕಾರಣಕ್ಕೆ ಕರೆತರುವ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ವಿಚಾರವಾಗಿ ಜೆಡಿಎಸ್​​ ತೆರೆಯ ಮರೆಯ ಯತ್ನ ನಡೆಸುತ್ತಿದೆ.

ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು
ಡಾ. ಸಿಎನ್ ಮಂಜುನಾಥ್
ಸುನಿಲ್​ ಎಮ್​ ಹೆಚ್​
| Edited By: |

Updated on: Feb 06, 2024 | 9:51 AM

Share

ಬೆಂಗಳೂರು, ಫೆಬ್ರವರಿ 6: ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರಾಗಿದ್ದ ಡಾ. ಸಿಎನ್ ಮಂಜುನಾಥ್ (Dr CN Manjunath) ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರಲು ಜೆಡಿಎಸ್ (JDS) ನಾಯಕರು ಕಸರತ್ತು ನಡೆಸುತ್ತಿರುವುದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಮಂಜುನಾಥ್ ಮನವೊಲಿಕೆಗೆ ದಳಪತಿಗಳು ಮುಂದಾಗಿದ್ದಾರೆ. ಜತೆಗೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಜುನಾಥ್ ಅವರನ್ನು ಸ್ಪರ್ಧಿಸುವಂತೆ ಮಾಡಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಜೆಡಿಎಸ್ ಅಥವಾ ಬಿಜೆಪಿಯಿಂದ ಲೋಕಸಭಾ ಅಭ್ಯರ್ಥಿಯನ್ನಾಗಿ ಮಾಡುವುದು ದಳಪತಿಗಳ ಲೆಕ್ಕಾಚಾರವಾಗಿದೆ. ಬೆಂಗಳೂರು ಗ್ರಾಮಾಂತರ ಅಥವಾ ಬೆಂಗಳೂರು ಉತ್ತರದಿಂದ ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ಕಮಲದಳ ನಾಯಕರು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡು ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಿಂದ ಜೆಡಿಎಸ್ ಅಥವಾ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಂಜುನಾಥ್ ಕಣಕ್ಕಿಳಿದರೆ ಗೆಲುವಿನ ಹಾದಿ ಸುಗಮ ಎಂಬುದು ಉಭಯ ಪಕ್ಷಗಳ ನಾಯಕರ ಅಂದಾಜು.

ಡಾ. ಮಂಜುನಾಥ್ ರಾಜ್ಯದಾದ್ಯಂತ ಮನೆಮಾತಾಗಿದ್ದಾರೆ. ಮಂಜುನಾಥ್ ಅವರದು ಉತ್ತಮವಾದ ವ್ಯಕ್ತಿತ್ವ. ಮಂಜುನಾಥ್ ರಾಜಕೀಯಕ್ಕೆ ಬಂದರೆ ಎನ್​​ಡಿಎ ಮೈತ್ರಿಗೆ ಒಂದು ಆಸ್ತಿ ಆದಂತೆ ಎಂಬ ಲೆಕ್ಕಾಚಾರ ಬಿಜೆಪಿ, ಜೆಡಿಎಸ್ ನಾಯಕರದ್ದಾಗಿದೆ.

ಬಿಜೆಪಿ ಜತೆ ಜೆಡಿಎಸ್ ಚರ್ಚೆ

ಡಾ. ಮಂಜುನಾಥ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಾಡುವ ಬಗ್ಗೆ ಬಿಜೆಪಿ ನಾಯಕರ ಜೊತೆ ಜೆಡಿಎಸ್ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಮಂಜುನಾಥ್ ಮನವೊಲಿಕೆಗೆ ದಳಪತಿಗಳು ಸಾಕಷ್ಟು ಪ್ರಯತ್ನವನ್ನೂ ನಡೆಸುತ್ತಿದ್ದಾರೆ. ಆದರೆ, ಸದ್ಯ ರಾಜಕೀಯ ಪ್ರವೇಶಿಸುವ ಬಗ್ಗೆ ಅವರು ಯಾವುದೇ ನಿರ್ಧಾರ ತಿಳಿಸಿಲ್ಲ. ಆದರೆ, ಸದ್ಯದ ಬೆಳವಣಿಗೆಗಳು ಕುತೂಹಲ ಕೆರಳಿಸಿವೆ.

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರ ಅಧಿಕಾರವಧಿ ಜನವರಿ 30ರಂದ ಕೊನೆಗೊಂಡಿತ್ತು. ಅವರನ್ನು ಸಂಸ್ಥೆಯಿಂದ ಗೌರವ ಪೂರ್ವಕವಾಗಿ ಬೀಳ್ಕೊಡಲಾಗಿತ್ತು. ಬೀಳ್ಕೊಡುಗೆ ಸಮಾರಂಭದ ಬಳಿಕ ಮಾತನಾಡಿದ್ದ ಅವರು, ಜಯದೇವ ಹೃದ್ರೋಗ ಆಸ್ಪತ್ರೆಯು ಜನರ ಆಸ್ಪತ್ರೆಯಾಗಿದೆ. ಇದನ್ನು ಪಂಚಾತಾರ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಹೊಂದಿದ್ದೆವು. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವವನ್ನು ಬೆಳಸಲಾಗಿದೆ. ಇಷ್ಟು ವರ್ಷದ ಸೇವೆ ಸಂತೋಷ ತಂದಿದೆ. ನಿವೃತ್ತಿ ಬಳಿಕವೂ ವೈದ್ಯಕೀಯ ಸೇವೆ ಮುಂದುವರಿಸುತ್ತೇನೆ. ಸದಾ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?

ಸದ್ಯ ನಿವೃತ್ತರಾಗಿರುವ ಅವರು ರಾಜಕೀಯಕ್ಕೆ ಧುಮುಕಲಿದ್ದಾರೆಯೇ ಎಂಬ ಕುತೂಹಲಕ್ಕೆ ನಂತರದ ದಿನಗಳಲ್ಲಿ ನಡೆದ ವಿದ್ಯಮಾನಗಳು ಕಾರಣವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್