AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರು ದೆಹಲಿಯಿಂದ ಬಂದ ನಂತರ ಮೇಲ್ಮನೆ ಚುನಾವಣೆ ಮೈತ್ರಿ ಬಗ್ಗೆ ನಿರ್ಧಾರ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ದೆಹಲಿಯಿಂದ ಬಂದ ಮೇಲೆ ವಿಧಾನ ಪರಿಷತ್‌ ಚುನಾವಣೆಯ ಮೈತ್ರಿ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮೇಲ್ಮನೆ ಚುನಾವಣೆ ಹಿನ್ನೆಲೆಯಲ್ಲಿ ಬಿಡದಿಯ ತಮ್ಮ ತೋಟದಲ್ಲಿ ರಾಮನಗರ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳ ಮತದಾರರ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಜೆಡಿಎಸ್‌ ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ. ಆದರೆ, […]

ದೇವೇಗೌಡರು ದೆಹಲಿಯಿಂದ ಬಂದ ನಂತರ ಮೇಲ್ಮನೆ ಚುನಾವಣೆ ಮೈತ್ರಿ ಬಗ್ಗೆ ನಿರ್ಧಾರ: ಎಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 01, 2021 | 8:46 PM

ಬೆಂಗಳೂರು: ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ದೆಹಲಿಯಿಂದ ಬಂದ ಮೇಲೆ ವಿಧಾನ ಪರಿಷತ್‌ ಚುನಾವಣೆಯ ಮೈತ್ರಿ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮೇಲ್ಮನೆ ಚುನಾವಣೆ ಹಿನ್ನೆಲೆಯಲ್ಲಿ ಬಿಡದಿಯ ತಮ್ಮ ತೋಟದಲ್ಲಿ ರಾಮನಗರ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳ ಮತದಾರರ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಜೆಡಿಎಸ್‌ ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ. ಆದರೆ, ಕಾಂಗ್ರೆಸ್​ನವರು ನಮಗೆ ಜೆಡಿಎಸ್‌ ಪಕ್ಷದ ಮತಗಳ ಅಗತ್ಯವಿಲ್ಲ. ಅವರ ಜತೆ ಹೊಂದಾಣಿಕೆ ಪ್ರಶ್ನೆ ಇಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ. ಬೇಡ ಎಂದವರ ಮನೆ ಬಾಗಿಲಿಗೆ ಹೋಗಲಿಕ್ಕೆ ಆಗುತ್ತದೆಯೇ? ಹೀಗಾಗಿ ಯಡಿಯೂರಪ್ಪ ಅವರ ಮನವಿ ಬಗ್ಗೆ ಏನು ತೀರ್ಮಾನ ಕೈಗೊಳ್ಳಬೇಕೋ ಎಂಬುದನ್ನು ಶೀಘ್ರವೇ ನಿರ್ಧಾರ ಮಾಡುತ್ತೇವೆ ಎಂದು ಅವರು ಹೇಳಿದರು.

ಮೋದಿ ಅವರ ಜತೆ ಗೌಡರು ಚುನಾವಣೆ ಹೊಂದಾಣಿಕೆ ಬಗ್ಗೆ ಚರ್ಚೆ ನಡೆಸಿರಬಹುದೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಎಚ್​ಡಿಕೆ, ಮೊದಲಿನಿಂದಲೂ ಪ್ರಧಾನ ಮಂತ್ರಿಗಳು ಮತ್ತು ದೇವೇಗೌಡರ ನಡುವೆ ಉತ್ತಮ ಬಾಂಧವ್ಯವಿದೆ. ಗೌಡರ ಬಗ್ಗೆ ಮೋದಿ ಅವರಿಗೆ ವಿಶೇಷ ಗೌರವವಿದೆ. ಅವರಿಬ್ಬರೂ ಭೇಟಿಯಾಗುವುದು ಹೊಸದೇನಲ್ಲ. ನಾನು ಸಿಎಂ ಆಗಿದ್ದಾಗ ಭೇಟಿಯಾಗಿದ್ದ ಸಂದರ್ಭದಿಂದಲೂ ನನಗೆ ಗೊತ್ತಿದೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳು ಹಾಗೂ ಹಾಸನಕ್ಕೆ ಐಐಟಿ ತರುವ ವಿಚಾರದ ಬಗ್ಗೆ ಮೋದಿ ಅವರ ಜತೆ ಚರ್ಚೆ ನಡೆಸಲು ಹೋಗಿದ್ದಾರೆಂಬ ಮಾಹಿತಿ ಗಮನಿಸಿದ್ದೇನೆ. ಜತೆಗೆ ವಿಧಾನ ಪರಿಷತ್‌ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಿರಬಹುದು. ಗೌಡರು ದೆಹಲಿಯಿಂದ ವಾಪಸ್‌ ಬಂದ ಮೇಲೆ ಅವರೊಂದಿಗೆ ಚರ್ಚೆ ನಡೆಸಿ ಮಾಹಿತಿ ನೀಡುವೆ ಎಂದರು.

ಬಳ್ಳಾರಿ ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯ ಬಗ್ಗೆ ಕಾಂಗ್ರೆಸ್‌ ವತಿಯಿಂದ ದೂರು ನೀಡಲಾಗಿದೆ. ಯಾತಕ್ಕಾಗಿ ದೂರು ನೀಡಲಾಗಿದೆಯೋ ನನಗೆ ಗೊತ್ತಿಲ್ಲ. ನಾನೆಂದೂ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಚುನಾವಣೆ ನಡೆಸಿದವನಲ್ಲ. ನಮ್ಮ ಕಾರ್ಯಕರ್ತರ ವಿಶ್ವಾಸದಲ್ಲಿ ಮಾತ್ರ ಕೆಲಸ ಮಾಡಿದವನು ನಾನು. ಹೀಗಾಗಿ ವೈಯಕ್ತಿಕ ದ್ವೇಷದ ಮೇಲೆ ಆ ಅಧಿಕಾರಿ ವಿರುದ್ಧ ದೂರು ಕೊಟ್ಟಿರಬಹುದು. ಸತ್ಯಾಂಶ ಏನೆಂಬುದು ತನಿಖೆಯಿಂದ ಹೊರಬರಲಿ. ನಮ್ಮ ಅಭ್ಯರ್ಥಿಗೆ ನಮ್ಮ ಕಾರ್ಯಕರ್ತರು ಮತ ಹಾಕಿಸಲಿಕ್ಕೆ ಸಾಧ್ಯವೋ ಅಥವಾ ಅಧಿಕಾರಿ ಹಾಕಿಸಲಿಕ್ಕೆ ಸಾಧ್ಯವೋ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ಕನಕಪುರದಲ್ಲಿ ಗುಪ್ತ ಮತದಾರರು ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನನ್ನ ನೇರ ಪಾತ್ರ ಇರಲಿಲ್ಲ. ಹಿಂದೆ ನಮ್ಮ ಪಕ್ಷದಲ್ಲಿದ್ದ ನಾಯಕರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ನಡೆಸಿದ್ದರು. ಈ ಬಾರಿ ಖುದ್ದು ನಾನೇ ಕೆಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೇನೆ. ಜತೆಗೆ ಮಾಗಡಿ ಶಾಸಕರಾದ ಮಂಜುನಾಥ್‌ ಹಾಗೂ ರಾಮನಗರ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು, ಚನ್ನಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಕನಕಪುರ ಕ್ಷೇತ್ರಕ್ಕೂ ಹೆಚ್ಚಿನ ಗಮನ ಕೊಟ್ಟಿದ್ದೇವೆ. ಅಲ್ಲಿ ನಮ್ಮ ಪಕ್ಷಕ್ಕೆ ‘ಗುಪ್ತ ಮತದಾರರು’, ಅಂದರೆ ನಮ್ಮ ಅಭಿಮಾನಿಗಳು ಸಾಕಷ್ಟು ಪ್ರಮಾಣದಲ್ಲಿ ಇದ್ದಾರೆ. ಆ ಭಾಗದಲ್ಲಿ ಮುಕ್ತ ಚುನಾವಣೆ ನಡೆಸಲು ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಎಲ್ಲ ಕ್ಷೇತ್ರಗಳ ಮತದಾರರ ಸಭೆಯಲ್ಲಿ ನಾನು ಪಾಲ್ಗೊಂಡಿದ್ದೆ. ರಾಜ್ಯದ ಆರು ಕ್ಷೇತ್ರಗಳಲ್ಲಿ ಮಾತ್ರ ನಮ್ಮ ಅಭ್ಯರ್ಥಿಗಳಿದ್ದು, ಅಷ್ಟೂ ಕಡೆ ನಾವು ಗೆಲ್ಲಲಿದ್ದೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಈ ಚುನಾವಣೆ ಮುಂದಿನ 2023ರ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಈ ಚುನಾವಣೆಯ ಫಲಿತಾಂಶವು ಮುಂದಿನ ಚುನಾವಣೆಗೆ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲಿದೆ ಎಂದರು ಅವರು. ನಮ್ಮ ಪಕ್ಷಕ್ಕೆ ಅನೇಕ ಕ್ಷೇತ್ರಗಳಲ್ಲಿ ನೆಲೆ ಇದೆ. ಆದರೆ ಅದು ಚುನಾವಣೆ ಗೆಲ್ಲುವ ಮಟ್ಟದಲ್ಲಿ ಇಲ್ಲ. ಅದರ ಹೊರತಾಗಿ ಯಾರನ್ನು ಗೆಲ್ಲಿಸಬಹುದೆಂಬ ತೀರ್ಮಾನ ಮಾಡುವ ಶಕ್ತಿಯಂತೂ ಇದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗುರಿ 123 ಸ್ಥಾನ. ಆ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರ್ಯಕ್ರಮಗಳಿರುತ್ತವೆ ಎಂದು ತಿಳಿಸಿದರು.

ಎಸ್ಆರ್ ವಿಶ್ವನಾಥ್‌ ಹತ್ಯೆಗೆ ಸಂಚು ಪ್ರಕರಣ; ಸತ್ಯ ಹೊರಬರಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ನನಗೆ ವಾಸ್ತವ ಅಂಶಗಳೇನು ಎನ್ನುವುದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿಯನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಸರಿಯಾದ ತನಿಖೆಯ ಮೂಲಕ ಸತ್ಯ ಆಚೆಗೆ ಬರಲಿ. ಒಂದು ವೇಳೆ ಹತ್ಯೆ ಸಂಚು ನಿಜವೇ ಆಗಿದ್ದರೆ ಕಠಿಣವಾಗಿ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು. ರಾಜಕಾರಣವೇ ಬೇರೆ. ಆದರೆ ಅದರ ನೆಪದಲ್ಲಿ ಭೂ ವ್ಯವಹಾರವೋ ಅಥವಾ ಇನ್ನವುದೋ ವ್ಯವಹಾರಗಳನ್ನು ನಡೆಸಬೇಕಾದರೆ ಹತ್ಯೆ ಮಾಡುವಂಥ ಹಂತಕ್ಕೆ ಯಾರೂ ತೆಗೆದುಕೊಂಡು ಹೋಗಬಾರದು. ಸರಕಾರ ನಿರ್ಲಕ್ಷ್ಯ ಮಾಡಿದೆ ದಕ್ಷ ಅಧಿಕಾರಿಗಳ ಮೂಲಕ ತನಿಖೆ ನಡೆಸಿ ಜನರ ಮುಂದೆ ಇಡಬೇಕು ಎಂದು ಅವರು ಒತ್ತಾಯಿಸಿದರು.

ರಾಮನಗರ ನನ್ನ ಕರ್ಮಭೂಮಿ ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷವು ಬಯಸಿದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕರ್ತರ ಒಲವು, ಪಕ್ಷದ ಆದೇಶ ಬಂದರೆ ಸ್ಪರ್ಧಿಸಲು ತಯಾರಿದ್ದೇನೆ ಎಂದು ಹೇಳಿದ್ದಾರೆ. ಅದು ಇನ್ನೂ ಎರಡು ವರ್ಷದ ಮಾತು ಎಂದರು.

ನಿಖಿಲ್‌ ಅವರು ರಾಮನಗರ ಅಥವಾ ಮಂಡ್ಯ ಜಿಲ್ಲೆಗಳ ಪೈಕಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಮನಗರ ನಮ್ಮ ಕರ್ಮಭೂಮಿ. ನಮ್ಮ ಹೃದಯದಲ್ಲಿರುವ ನೆಲೆ. ಈ ಭೂಮಿ ಮೇಲೆ ಇರುವವರೆಗೂ ಇಲ್ಲೇ ಇರುತ್ತೇವೆ. ಮಣ್ಣಾದರೂ ಈ ಮಣ್ಣಲ್ಲೇ ಮಣ್ಣಾಗುವೆ. ನಮ್ಮ ಮತ್ತು ರಾಮನಗರದ ನಡುವೆ ವಿಶೇಷ ಬಾಂಧವ್ಯವಿದೆ. ಅದನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ. ಉಸಿರಿರುವ ತನಕವಷ್ಟೇ ಅಲ್ಲ ಉಸಿರು ನಿಂತ ಮೇಲೆಯೂ ರಾಮನಗರವೇ ನಮ್ಮ ಕರ್ಮಭೂಮಿ ಆಗಿರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿಲ್ಲ, ಕಾಂಗ್ರೆಸ್ ನಮ್ಮ ಬೆಂಬಲ ಕೇಳಿಲ್ಲ: ಎಚ್​ಡಿ ಕುಮಾರಸ್ವಾಮಿ ಇದನ್ನೂ ಓದಿ: ಸಂಕಷ್ಟ ಎದುರಿಸುತ್ತಿದೆ ಜೆಡಿಎಸ್: ತುಮಕೂರು ಸಮಾವೇಶದಲ್ಲಿ ಎಚ್​ಡಿ ಕುಮಾರಸ್ವಾಮಿ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್