AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಹೆಂಗೆ ಅಂದ್ರೆ ಬುಸ್…ಬುಸ್…ಎಂದ ಜಮೀರ್ ಅಹಮದ್​ಗೆ ಜೆಡಿಎಸ್ ಸರಣಿ ಟ್ವೀಟ್ ಏಟು

ಕುಮಾರಸ್ವಾಮಿ ಹೆಂಗೆ ಅಂದ್ರೆ ಬುಸ್… ಬುಸ್… ತರ ಎಂದು ಹಾವಿನ ಹೆಡೆ ತರ ಕೈತೋರಿಸಿ ವ್ಯಂಗ್ಯವಾಡಿದ್ದ ಜಮೀರ್ ಅಹಮದ್ ಖಾನ್​ಗೆ ಜೆಡಿಎಸ್​ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಕುಮಾರಸ್ವಾಮಿ ಹೆಂಗೆ ಅಂದ್ರೆ ಬುಸ್…ಬುಸ್…ಎಂದ ಜಮೀರ್ ಅಹಮದ್​ಗೆ ಜೆಡಿಎಸ್ ಸರಣಿ ಟ್ವೀಟ್ ಏಟು
ಕುಮಾರಸ್ವಾಮಿ, ಜಮೀರ್ ಅಹಮದ್​
TV9 Web
| Edited By: |

Updated on: Feb 05, 2023 | 3:53 PM

Share

ಬೆಂಗಳೂರು: ಕುಮಾರಸ್ವಾಮಿ )HD Kumaraswamy) ಹೆಂಗೆ ಅಂದ್ರೆ ಬುಸ್… ಬುಸ್… ತರ, ಅವನು ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ ಎಂದು ಕೈಯಿಂದ ಹಾವಿನ ಹೆಡೆ ತೋರಿಸಿ ಶಾಸಕ ಜಮೀರ್ ಅಹಮದ್ ಖಾನ್(zameer ahmed khan) ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಕಿಡಿಕಾರಿದ್ದರು. ಹುಮ್ನಾಬಾದ್​ನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಹೆಚ್ಡಿಕೆ ವಿರುದ್ಧ ಕಿಡಿ ಕಾರಿದ ಜಮೀರ್, ನಾನು ದಿನದ 24 ಗಂಟೆಯಲ್ಲಿ 16 ಗಂಟೆ ಅವನ ಜೊತೆ ಇದ್ದವನು, ಇವತ್ತು ಸಿ.ಎಂ ಇಬ್ರಾಹಿಂ ಮತ್ತು ಅವರ ಪುತ್ರನನ್ನ ಕುಮಾರಸ್ವಾಮಿ ಮುಗಿಸಲು ಹೊರಟಿದ್ದಾರೆ ಎಂದಿದ್ದರು. ಇದಕ್ಕೆ ಇದೀಗ ಜೆಡಿಎಸ್​ ಸರಣಿ ಟ್ವೀಟ್ ಮೂಲಕ ಜಮೀರ್ ಅಹಮದ್ ಗೆ ತಿರುಗೇಟು ನೀಡಿದೆ.

ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ ಎಂದು ಟಾಂಗ್ ಕೊಟ್ಟಿದೆ.

ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ.

ಇಬ್ರಾಹಿಂ ಅವರನ್ನು ಕಾಂಗ್ರೆಸ್ ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ ಎಂದು ತಿರುಗೇಟು ನೀಡಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?