AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌ ಕಣ್ಣೀರೋತ್ಸವ ಎಂದ ಬಿಜೆಪಿಗೆ ತಿರುಗೇಟು ನೀಡಿದ ಜನತಾದಳ

ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಪೇಜ್ ವ್ಯಂಗ್ಯವಾಡಿದೆ. ಜೊತೆಗೆ ಜೆಡಿಎಸ್‌ ಕಣ್ಣೀರೋತ್ಸವ ಎಂದು ಹ್ಯಾಶ್‌ಟ್ಯಾಗ್​ನ್ನು ಬಳಸಿದೆ.

ಜೆಡಿಎಸ್‌ ಕಣ್ಣೀರೋತ್ಸವ ಎಂದ ಬಿಜೆಪಿಗೆ ತಿರುಗೇಟು ನೀಡಿದ ಜನತಾದಳ
jds Vs Bjp
TV9 Web
| Edited By: |

Updated on:Aug 02, 2022 | 3:06 PM

Share

ಮಂಡ್ಯದ ನಾಗಮಂಗಲದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರ ಆರೋಗ್ಯ ಸ್ಥಿತಿಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಎಚ್. ಡಿ ರೇವಣ್ಣ ಕಣ್ಣೀರು ಹಾಕಿದ್ದರು. ಇದನ್ನು ಬಿಜೆಪಿ  ವ್ಯಂಗ್ಯವಾಗಿ ಟ್ವೀಟ್ ಮಾಡಿದೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಪೇಜ್ ವ್ಯಂಗ್ಯವಾಡಿದೆ. ಜೊತೆಗೆ ಜೆಡಿಎಸ್‌ ಕಣ್ಣೀರೋತ್ಸವ ಎಂದು ಹ್ಯಾಶ್‌ಟ್ಯಾಗ್​ನ್ನು ಬಳಸಿದೆ. ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್‌ ಪಕ್ಷ ಮುಳುಗುವ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಜೆಡಿಎಸ್ ನಾಯಕ ಕಾಲೆಳೆದಿದೆ.

ಈ ಟ್ವೀಟ್​ ಗೆ ತಿರುಗೇಟು ನೀಡಿರುವ ಜನತಾ ದಳ ಟ್ವೀಟ್ ಪೇಜ್, ಅರವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ತಂದೆಯ ವಯೋ ಸಹಜ ಅನಾರೋಗ್ಯ ಕಂಡು ಯಾವುದೇ ಮಕ್ಕಳಿಗೂ ನೋವಾಗದೇ ಇರದು, ಇಂತಹ‌ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಒಂದೆರಡು ಹನಿ ಕಣ್ಣೀರು ಹಾಕಿದ್ದಾರೆ, ಇದರಲ್ಲಿ ವ್ಯಂಗ್ಯ ಮಾಡುವಂತದ್ದೇನೂ ಇಲ್ಲ. ಆದರೆ ಎಲ್ಲದಕ್ಕೂ ವ್ಯಂಗ್ಯ ಮಾಡೋದು ಈ ಮಾನಗೆಟ್ಟ ಬಿಜೆಪಿ (BJP4Karnataka) ಕ್ಕೇ ಹೊಸದೇನೂ ಅಲ್ಲ ಎಂದು ಬರೆದುಕೊಂಡಿದ್ದಾರೆ.

Published On - 3:04 pm, Tue, 2 August 22

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ