AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್ ಮಾಡಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ

ರಾಮನಗರದಲ್ಲಿರುವ ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಅನ್ನು ಕನಕಪುರಕ್ಕೆ ಸ್ಥಳಾಂತರಿಸಲು ಡಿಸಿಎಂ ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸಿ ರಾಮನಗರದ ಜನರು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಬಂದ್​ಗೆ ಕರೆ ಕೊಡಲಾಗಿದೆ. ಇದನ್ನು ಬೆಂಬಲಿಸಿ ಜೆಡಿಎಸ್ ನಾಯಕ, ನಟ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್ ಮಾಡಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್
Sunil MH
| Edited By: |

Updated on:Sep 08, 2023 | 3:15 PM

Share

ಬೆಂಗಳೂರು, ಸೆ.8: ರಾಮನಗರದಲ್ಲಿರುವ (Ramanagara) ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಅನ್ನು ಕನಕಪುರಕ್ಕೆ ಸ್ಥಳಾಂತರಿಸಲು ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸಿ ರಾಮನಗರದ ಜನರು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಬಂದ್​ಗೆ ಕರೆ ಕೊಡಲಾಗಿದೆ. ಇದನ್ನು ಬೆಂಬಲಿಸಿ ಜೆಡಿಎಸ್ ನಾಯಕ, ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಟ್ವೀಟ್ ಮಾಡಿದ್ದಾರೆ.

ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

2006-07ರಲ್ಲೇ 310 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು. ಮತ್ತೆ 25-3-2019 ರಂದು ಸಿಎಂ ಆಗಿದ್ದ ಕುಮಾರಣ್ಣ ಅವರು ಆ ಯೋಜನೆಯ ವೆಚ್ಚವನ್ನು 540 ಕೋಟಿ ರೂ.ಎ ಹೆಚ್ಚಿಸಿದ್ದರು ಎಂದರು.

ಇದನ್ನೂ ಓದಿ: ರೈತರು ಸಾವಿಗೆ ಶರಣಾಗುತ್ತಿರುವ ಬಗ್ಗೆ ಶಿವಕುಮಾರ್, ಇನ್ನೊಬ್ಬ ಮಂತ್ರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ: ಬಸನಗೌಡ ಯತ್ನಾಳ್

ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಅಂದು ಡಿಕೆ ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. 13-12-2018 ರಲ್ಲಿ 450 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು ಎಂದರು.

ಬಳಿಕ ಬಿಜೆಪಿ ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ 610 ಕೋಟಿ ರೂ. ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರಕಾರವು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ? ಎಂದು ನಿಖಿಲ್ ಪ್ರಶ್ನಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Fri, 8 September 23

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ