AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಾಡಿನ ಜನತೆಯನ್ನು ಭಿಕಾರಿ ಮಾಡುವುದು ನಿಲ್ಲಿಸಿ, ಜನರಿಗೆ ಸ್ವಂತ ದುಡಿಮೆ ಕೊಡಬೇಕಿದೆ: ಮಾಜಿ ಸಿಎಂ ಕುಮಾರಸ್ವಾಮಿ

ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ಆಕಸ್ಮಿಕವಾಗಿ ಮುಖ್ಯಮಂತ್ರಿಯೂ ಆದೆ. ಸಿಎಂ ಆಗಿ ಕೆಲಸ ಮಾಡಿದ್ದೇನೆ. ಬೇರೆಯವರ ರೀತಿ ದುರಂಹಕಾರ ತೋರಿಸಲಿಲ್ಲ. ಅದೆಂತಹುದೋ ಪುಕ್ಕಟ್ಟೆ ಅಕ್ಕಿ ಅಂತೆ! ಐದು ಕೆಜಿ ಅಕ್ಕಿಯನ್ನು ಹತ್ತು ಕೆಜಿ ಅಂತೆಲ್ಲ ನಾನು ಹೇಳೋದಿಲ್ಲ - ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಈ ನಾಡಿನ ಜನತೆಯನ್ನು ಭಿಕಾರಿ ಮಾಡುವುದು ನಿಲ್ಲಿಸಿ, ಜನರಿಗೆ ಸ್ವಂತ ದುಡಿಮೆ ಕೊಡಬೇಕಿದೆ:  ಮಾಜಿ ಸಿಎಂ  ಕುಮಾರಸ್ವಾಮಿ
ಈ ನಾಡಿನ ಜನತೆಯನ್ನು ಭಿಕಾರಿ ಮಾಡುವುದು ನಿಲ್ಲಿಸಿ, ಜನರಿಗೆ ಸ್ವಂತ ದುಡಿಮೆ ಕೊಡಬೇಕಿದೆ: ಮಾಜಿ ಸಿಎಂ ಕುಮಾರಸ್ವಾಮಿ
TV9 Web
| Edited By: |

Updated on:Jun 04, 2022 | 4:12 PM

Share

ಧಾರವಾಡ: ಧಾರವಾಡದಲ್ಲಿ ನಡೆದ ಪಶ್ಚಿಮ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಪ್ರಚಾರ ಸಭೆಯಲ್ಲಿ (Legislative Council Election) ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (Ex CM HD Kumaraswamy) ಅವರು ಸಿದ್ದರಾಮಯ್ಯ (Siddaramaiah) ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಹೆಸರು ಹೇಳದೇ ಅಕ್ಕಿ ಯೋಜನೆ ಪ್ರಸ್ತಾಪಿಸಿ, ಈ ನಾಡಿನ ಜನತೆಯನ್ನು ಭಿಕಾರಿ ಮಾಡುವುದು ನಿಲ್ಲಿಸಿ, ಜನರಿಗೆ ಸ್ವಂತ ದುಡಿಮೆ ಕೊಡಬೇಕಿದೆ ಎಂದಿದ್ದಾರೆ.

2023ಕ್ಕೆ ಯಾರು ಏನೇ ಹೇಳಲಿ ಜೆಡಿಎಸ್ ಪಕ್ಷ ಮತ್ತೆ ಬರುತ್ತೆ. 2023ರಲ್ಲಿ ನಾಡಿನ ಜನರ ಜೀವನ ಸರಿಪಡಿಸುವ ಸರ್ಕಾರ ಬರುತ್ತೆ. ಅಂತಹ ಒಂದು ಆತ್ಮವಿಶ್ವಾಸ ಇದೆ. ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ಆಕಸ್ಮಿಕವಾಗಿ ಮುಖ್ಯಮಂತ್ರಿಯೂ ಆದೆ. ಸಿಎಂ ಆಗಿ ಕೆಲಸ ಮಾಡಿದ್ದೇನೆ. ಬೇರೆಯವರ ರೀತಿ ದುರಂಹಕಾರ ತೋರಿಸಲಿಲ್ಲ. ಅದೆಂತಹುದೋ ಪುಕ್ಕಟ್ಟೆ ಅಕ್ಕಿ ಅಂತೆ! ಐದು ಕೆಜಿ ಅಕ್ಕಿಯನ್ನು ಹತ್ತು ಕೆಜಿ ಅಂತೆಲ್ಲ ನಾನು ಹೇಳೋದಿಲ್ಲ. ಈ ನಾಡಿನ ಜನತೆಯನ್ನು ಭಿಕಾರಿ ಮಾಡುವುದು ನಿಲ್ಲಿಸಿ, ನಾಡಿನ ಜನರಿಗೆ ಸ್ವಂತ ದುಡಿಮೆ ಕೊಡಬೇಕಿದೆ. ಮತ್ತೊಬ್ಬರಿಗೆ ಸಹಾಯ ಮಾಡೋ ಶಕ್ತಿ ಕೊಡುವುದು ನನ್ನ ಕಾರ್ಯಕ್ರಮ. ಎಷ್ಟು ದಿನ ಪುಕ್ಕಟ್ಟೆ ಅಕ್ಕಿ ಕೊಟ್ಟು ಅದೇ ಜಾಗದಲ್ಲಿ ಇಡ್ತೀರಿ? ಅವರನ್ನು ಆರ್ಥಿಕವಾಗಿ, ಶಕ್ತಿಯುತವಾಗಿ ಬೆಳೆಸಲು ಸಾಧ್ಯವಿಲ್ಲವಾ? ಜನರಿಗೆ ಶಕ್ತಿ ತುಂಬಿಸುವುದು ನನ್ನ ಕಾರ್ಯಕ್ರಮ. ಅವರನ್ನು ಆರ್ಥಿಕವಾಗಿ ಬೆಳೆಸಲು ಸಾಧ್ಯ ಇಲ್ಲವಾ? ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಪ್ರಶ್ನಿಸಿದರು.

ಹೊರಟ್ಟಿಗೆ ಬೇರೆ ಕಡೆ ಹೋದರೆ ಅನುಕೂಲ ಎನ್ನುವ ಭಾವನೆ ಇತ್ತೇನೋ…

ಹೊರಟ್ಟಿ ಪಕ್ಷ ಬಿಟ್ಟ ವಿಚಾರ ಪ್ರಸ್ತಾಪಿಸಿದ ಕುಮಾರಸ್ವಾಮಿ, ಪಕ್ಷ ಬಿಡುತ್ತೇನೆ ಅಂದವರಿಗೆ ಏನು ಹೇಳಬೇಕು? ಹೋಗುತ್ತೇನೆ ಅನ್ನೋರನ್ನು ತಡೆಯಲು ಆಗುತ್ತಾ? ಒಳ್ಳೆ ಭವಿಷ್ಯಕ್ಕೆ ಹೋಗಿರಬಹುದು. ವೈಯಕ್ತಿಕವಾಗಿ ಯಾರ ಭವಿಷ್ಯ ಹಾಳಾಗಲಿ ಎಂದು ಬಯಸೋಲ್ಲ. ಬೇರೆ ಕಡೆ ಹೋದರೆ ಅನುಕೂಲ ಎನ್ನುವ ಭಾವನೆ ಇತ್ತು. ಹಾಗಿದ್ದಾಗ ಅವರ ಭವಿಷ್ಯ ನಾನೇಕೆ ಹಾಳು ಮಾಡಲಿ? ಎಂದು ಭಾಷಣದಲ್ಲಿ ಕುಮಾರಸ್ವಾಮಿ ಹೇಳಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Sat, 4 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ