Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಫಲಿತಾಂಶದ ನಂತರ ನನ್ನ ರಾಜೀನಾಮೆ ನಿರ್ಧಾರ ಬದಲಿಸಿದ್ದು ಪ್ರಧಾನಿ ನರೇಂದ್ರ ಮೋದಿ

ಹಲವು ವರ್ಷಗಳ ಹಿಂದಿನ ಈ ಬೆಳವಣಿಗೆಗೆ ಇದೀಗ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ತಾವೇಕೆ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ.

ಲೋಕಸಭೆ ಫಲಿತಾಂಶದ ನಂತರ ನನ್ನ ರಾಜೀನಾಮೆ ನಿರ್ಧಾರ ಬದಲಿಸಿದ್ದು ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ ಮತ್ತು ದೇವೇಗೌಡ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 05, 2021 | 5:23 PM

ಮಂಡ್ಯ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬಹುಮತ ಬಂದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಜೆಡಿಎಸ್ ನಾಯಕ ಎಚ್​.ಡಿ.ದೇವೇಗೌಡ ನಂತರ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ದೇವೇಗೌಡರು ಘೋಷಿಸಿದ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂಬ ಟೀಕೆಗಳೂ ಆ ಸಂದರ್ಭದಲ್ಲಿ ಕೇಳಿಬಂದಿದ್ದವು. ಹಲವು ವರ್ಷಗಳ ಹಿಂದಿನ ಈ ಬೆಳವಣಿಗೆಗೆ ಇದೀಗ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ತಾವೇಕೆ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ನಾಶ ಮಾಡುತ್ತೇವೆ ಎನ್ನುವವರ ವಿರುದ್ಧ ಎದ್ದು ನಿಲ್ಲುತ್ತೇವೆ ಎಂದು ಘೋಷಿಸಿದರು. ಬಿಜೆಪಿ ಬಹುಮತ ಗಳಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಕಳೆದ ಲೋಕಸಭೆ ಚುನಾವಣೆಯಲ್ಲಿ ಘೋಷಿಸಿದ್ದೆ. ಫಲಿತಾಂಶ ಪ್ರಕಟವಾದ ನಂತರ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಬರುವಂತೆ ನನಗೆ ಪತ್ರ ಬರೆದಿದ್ದರು. ದೆಹಲಿಗೆ ಹೋದಾಗ ರಾಜೀನಾಮೆ ತೆಗೆದುಕೊಳ್ಳಿ ಎಂದು ಹೇಳಿದ್ದೆ. ರಾಜಕೀಯದಲ್ಲಿ ಹೀಗೆ ಮಾತನಾಡುವುದು ಮಾಮೂಲಿ. ಇದನ್ನೆಲ್ಲ ಸೀರಿಯಸ್​ ಆಗಿ ತೆಗೆದುಕೊಳ್ಳಬೇಡಿ ಎಂದು ಮೋದಿ ನನ್ನ ಮನವೊಲಿಸಿದ್ದರು ಎಂದು ನೆನಪಿಸಿಕೊಂಡರು.

ರೈತನ ಮಗನಾದ ಪ್ರಧಾನಿಯಾಗಿ ಮಾಡಿರುವ ಕೆಲಸಗಳ ಬಗ್ಗೆ ಪುಸ್ತಕವೊಂದು ಬಿಡುಗಡೆಗೆ ಸಿದ್ಧವಾಗುತ್ತಿದೆ. ನಾನು ಏನು ಮಾಡಿದೆ ಎಂದು ಪ್ರಶ್ನಿಸುವವರಿಗೆ ಅದರಲ್ಲಿ ಉತ್ತರ ಸಿಗುತ್ತದೆ. ನಾನು ದೆಹಲಿಗೆ ಹೋದಾಗ ಒಂದು ಲೋಟ ಕಾಫಿ ಕೊಡಲಿಲ್ಲ. ನಾನು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯನಾದಾಗ ರಾಜ್ಯದಲ್ಲಿ ಆಡಳಿತ ನಡೆಸಿದವರಿಂದಾಗಿ ಆಡಳಿತ ನಡೆಸಿದವರಿಂದ ನಮ್ಮ ಪಕ್ಷ 2 ಸ್ಥಾನಕ್ಕೆ ಕುಸಿಯಿತು. ನನ್ನ ರಾಜಕೀಯ ಜೀವನಕ್ಕೆ ಶಕ್ತಿ ತುಂಬಿದ್ದು ಹಾಸನ ಮತ್ತು ಮಂಡ್ಯ ಜಿಲ್ಲೆಗಳು. ನಾನು ಮುಖ್ಯಮಂತ್ರಿ ಆಗಲು ನಾಡಿನ ಸಮಸ್ತ ಜನರ ಕೊಡುಗೆಯಿದೆ. 2023-2024ರ ಚುನಾವಣೆಗಳಲ್ಲೂ ನಾನು ಸುಮ್ಮನೇ ಕೂರುವುದಿಲ್ಲ. ನನ್ನ ಹೋರಾಟದ ಸಂಕಲ್ಪವನ್ನು ಯಾರೂ ಕಿತ್ತುಕೊಳ್ಳಲು ಆಗುವುದಿಲ್ಲ ಎಂದರು.

ಜೆಡಿಎಸ್ ಪಕ್ಷವು ಕೇವಲ ಹಳೇ ಮೈಸೂರು ಭಾಗಕ್ಕೆ ಸೀಮಿತ ಎಂದುಕೊಂಡಿರುವವರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಕ್ಷೇತ್ರಗಳಲ್ಲಿಯೂ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇನೆ. ನಾನು ಮುಖ್ಯಮಂತ್ರಿ ಆಗಲು ಹೈದ್ರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಭಾಗದ ಜನರ ಕೊಡುಗೆಯೂ ಸಾಕಷ್ಟಿದೆ. 2023, 2024ರಲ್ಲಿಯೂ ನಾನು ಸುಮ್ಮನೆ ಕೂರುವುದಿಲ್ಲ. ನನ್ನ ಹೊರಾಟದ ಸಂಕಲ್ಪವನ್ನು ಯಾರೂ ಕಿತ್ತುಕೊಳ್ಳಲು ಆಗುವುದಿಲ್ಲ. ನಮ್ಮ ಪಕ್ಷವನ್ನು ನಾಶ ಮಾಡುತ್ತೇವೆ ಎನ್ನುವವರ ವಿರುದ್ಧ 2023ಕ್ಕೆ ಎದ್ದು ನಿಲ್ಲುತ್ತೇವೆ ಎಂದರು.

ಇಂದು ದೇಶದ ಪ್ರಧಾನಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಹೇಗಿದ್ದರು ಎಂಬುದು ನನಗೆ ಗೊತ್ತಿದೆ. ಎರಡೂ ಹುದ್ದೆಗಳನ್ನು ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರಲ್ಲಿ ಆಗಿರುವ ವ್ಯತ್ಯಾಸಗಳನ್ನು ಗಮನಿಸಿದ್ದೇನೆ. ಪ್ರಧಾನಿ ಮೋದಿ ಅವರ ವಿಚಾರದಲ್ಲಿ ನಾನು ಈಗ ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಮಾತನಾಡುವವರು, ಗೋದ್ರಾ ಹತ್ಯಾಕಾಂಡದ ಬಗ್ಗೆ ನಾನು ಸಂಸತ್ತಿನಲ್ಲಿ ಏನೆಲ್ಲಾ ಮಾತನಾಡಿದ್ದೇನೆ ಎಂಬ ದಾಖಲೆಗಳನ್ನು ನೋಡಲಿ ಎಂದರು.

ಇದನ್ನೂ ಓದಿ: ಬಾಯಿತಪ್ಪಿ ನರೇಂದ್ರ ಮೋದಿಯನ್ನು ಹೊಗಳಿದ ಸಿದ್ದರಾಮಯ್ಯ: ಸಾಲಮನ್ನಾ ಮಾಡಿದ್ದು ಮೋದಿ ಇದನ್ನೂ ಓದಿ: ನಾನು ದೆಹಲಿಗೆ ಹೋದಾಗ ನನಗಾರೂ ಒನ್ ಗ್ಲಾಸ್ ಕಾಫಿ ಕೊಡಲಿಲ್ಲ: ಮಂಡ್ಯದಲ್ಲಿ ದೇವೇಗೌಡ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್