Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಡಿಎ ಮೈತ್ರಿಕೂಟ ಸಭೆಯಿಂದ ದೂರ ಉಳಿದ ಕುಮಾರಸ್ವಾಮಿ, ಸಂಚಲನ ಮೂಡಿಸಿದ ದಳಪತಿಗಳ ನಡೆ

ವಿರೋಧ ಪಕ್ಷಗಳ ನಾಯಕರು ಒಂದೇ ವೇದಿಕೆಗೆ ಬರುತ್ತಿದ್ದಂತೆಯೇ ಬಿಜೆಪಿ ಕೂಡ ತನ್ನ ಬಳಗವನ್ನ ಭದ್ರ ಮಾಡಿಕೊಳ್ಳುತ್ತಿದ್ದು, ಜೆಡಿಎಸ್​ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಎನ್​ಡಿಎ ಮೈತ್ರಿಕೂಟ ಸಭೆಯಿಂದ ದೂರ ಉಳಿದ ಕುಮಾರಸ್ವಾಮಿ, ಸಂಚಲನ ಮೂಡಿಸಿದ ದಳಪತಿಗಳ ನಡೆ
ಹೆಚ್​​ಡಿ ಕುಮಾರಸ್ವಾಮಿ
Follow us
Sunil MH
| Updated By: ರಮೇಶ್ ಬಿ. ಜವಳಗೇರಾ

Updated on: Jul 18, 2023 | 9:48 AM

ಬೆಂಗಳೂರು, (ಜುಲೈ 18): ಬಿಜೆಪಿ (BJP) ಸೋಲುಣಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸ್ತಿವೆ. ಇದಕ್ಕೆ ಕೌಂಟರ್ ಕೊಡಲು ಬಿಜೆಪಿ ಸಹ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಇಂದು ಶ್ರೀಜುಲೈ 18) ಸಂಜೆ ದೆಹಲಿಯಲ್ಲಿ ಎನ್‌ಡಿಎ ಒಕ್ಕೂಟದ ಸಭೆ (NDA Meeting)ನಡೆಯಲಿದ್ದು, ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಮುಂದಾಗಿವೆ. ಇನ್ನು ಇತ್ತ ಬೆಂಗಳೂರಿನಲ್ಲಿ 24 ಪಕ್ಷಗಳ ಶಕ್ತಿ ಪ್ರದರ್ಶನವಾದ್ರೆ, ಅತ್ತ ದೆಹಲಿಯಲ್ಲಿ 38 ಪಕ್ಷಗಳ ಶಕ್ತಿ ಪ್ರದರ್ಶನವಾಗೋ ಸಾಧ್ಯತೆ ಇದೆ. ಇನ್ನು ಜೆಡಿಎಸ್-ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಾರೆ ಎನ್ನುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಆದ್ರೆ, ಕಹಾನಿ ಮೇ ಟೆಸ್ಟ್ ಅಂದ್ರೆ, ಇಂದಿನ ಎನ್‌ಡಿಎ ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯುವುದು ಫಿಕ್ಸ್, BJP ಜತೆ ಮೈತ್ರಿ ಹಿಂದಿದೆ ಜೆಡಿಎಸ್​ ಲೆಕ್ಕಾಚಾರ!

ಕಾದು ನೋಡುವ ತಂತ್ರ ಮೊರೆ ಹೊದ ಜೆಡಿಎಸ್

ಹೌದು…ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆಯೂ ಚರ್ಚೆ ನಡೆಯಲಿದೆಯಂತೆ, ಹೆಚ್‌ಡಿಕೆ ಸಭೆಯಲ್ಲಿ ಭಾಗಿಯಾಗ್ತಾರಂತೆ ಅನ್ನೋ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಎಬ್ಬಿಸಿತ್ತು. ಆದ್ರೆ, ಎನ್​ಡಿಎ ಮೈತ್ರಿಕೂಟ ಸಭೆಗೆ ಜೆಡಿಎಸ್​ಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಖುದ್ದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಎನ್‌ಡಿಎ ಸಭೆಗೆ ನನಗೆ ಆಹ್ವಾನ ಬಂದಿಲ್ಲ ಎಂದಿದ್ದರು. ಇದರೊಂದಿಗೆ ಇತ್ತ ಮಹಾಘಟಬಂಧನ್​​ ಸಭೆಗೂ ಆಹ್ವಾನವಿಲ್ಲ, ಅತ್ತ ಎನ್​ಡಿಎ ಮೈತ್ರಿಕೂಟದ ಸಭೆಗೂ ಆಹ್ವಾನ ಬಂದಿಲ್ಲ. ಈ ಹಿನ್ನೆಯಲ್ಲಿ ಕುಮಾರಸ್ವಾಮಿ ನಡೆ ಯಾವ ಕಡೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಹೌದು…ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿರುವ ದಳಪತಿಗಳು ಇಂದಿನ ಎನ್​ಡಿಎ ಮೈತ್ರಿಕೂಟ ಸಭೆಗೆ ಆಹ್ವಾನ ಬರದಿರುವುದರಿಂದ ಕುಮಾರಸ್ವಾಮಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಸಭೆಯಿಂದ ಅಂತರ ಕಾಯ್ದುಕೊಂಡಿರುವ ಹೆಚ್​ಡಿ ದೇವೇಗೌಡ, ಹೆಚ್​ಡಿ ಕುಮಾರಸ್ವಾಮಿ, ಇಂದಿನ ಸಭೆಯ ನಿರ್ಧಾರ ನೊಡಿಕೊಂಡು ಮೈತ್ರಿ ಬಗ್ಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ನಿನ್ನೆ(ಜುಲೈ 17) ಮೈತ್ರಿ ವಿಚಾರವಾಗಿ ಕುಮಾರಸ್ವಾಮಿ ಪಕ್ಷದ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ.

ನಾವು ಬಿಜೆಪಿ ಜೊತೆ ಹೋದರೆ ಕೆಲ ಸಮುದಾಯದ ವಿರೋಧವನ್ನ ಕಟ್ಟಿಕೊಳ್ಳಬೇಕು. ಇದರಿಂದ ಪಕ್ಷಕ್ಕೆ ಹೊಡೆತ ಆಗಬಹುದು. ಹೀಗಾಗಿ ಎಚ್ಚರಿಕೆಯಿಂದ ಹೆಚ್ಚೆ ಇಡಬೇಕು ಎಂದು ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರಿಂದ ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕೋ ಬೇಡ್ವಾ ಎನ್ನುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ