AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುತೇಕ ಉಪಚುನಾವಣೆಗಳಲ್ಲಿ ನಾವು ಸೋತಿದ್ದೇವೆ, ಕಷ್ಟದಲ್ಲಿದ್ದೇವೆ: ಎಚ್​ಡಿ ಕುಮಾರಸ್ವಾಮಿ

ಬಿಜೆಪಿ ಸರ್ಕಾರವು ತೆರಿಗೆ ಹಣದಲ್ಲಿಯೂ ಲೂಟಿ ಹೊಡೆಯುತ್ತಿದೆ. ಸಮ್ಮಿಶ್ರ ಸರ್ಕಾರ ನಡೆಸುವಾಗ ಪಟ್ಟ ಯಾತನೆ ನನಗೊಬ್ಬನಿಗೆ ಗೊತ್ತು ಎಂದು ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ಬಹುತೇಕ ಉಪಚುನಾವಣೆಗಳಲ್ಲಿ ನಾವು ಸೋತಿದ್ದೇವೆ, ಕಷ್ಟದಲ್ಲಿದ್ದೇವೆ: ಎಚ್​ಡಿ ಕುಮಾರಸ್ವಾಮಿ
ಹೆಚ್‌.ಡಿ.ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 19, 2021 | 4:30 PM

ವಿಜಯಪುರ: ಉಪಚುನಾವಣೆಯಲ್ಲಿ ಯಾವ ಪಕ್ಷ ಗೆದ್ದರೂ-ಸೋತರೂ ಸರ್ಕಾರ ಬದಲಾಗುವುದಿಲ್ಲ. ನಾವು ಕಷ್ಟದಲ್ಲಿದ್ದೇವೆ, ಹೀಗಾಗಿಯೇ ನಿಮ್ಮ ಬಳಿ ಬಂದಿದ್ದೇನೆ. ಬಹುತೇಕ ಉಪ ಚುನಾವಣೆಗಳಲ್ಲಿ ನಾವು ಸೋತಿದ್ದೇವೆ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಬೊಮ್ಮನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಪರ ಪ್ರಚಾರ ನಡೆಸಿದರು.

ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದಿದ್ದೇನೆ. ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದೆ, ಆದರೆ ಪ್ರಚಾರ ಸಿಗಲಿಲ್ಲ. ಬಿಜೆಪಿ ಸರ್ಕಾರವು ತೆರಿಗೆ ಹಣದಲ್ಲಿಯೂ ಲೂಟಿ ಹೊಡೆಯುತ್ತಿದೆ. ಸಮ್ಮಿಶ್ರ ಸರ್ಕಾರ ನಡೆಸುವಾಗ ಪಟ್ಟ ಯಾತನೆ ನನಗೊಬ್ಬನಿಗೆ ಗೊತ್ತು. ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸಿದ್ರೆ ನಮ್ಮ ಬಲ ಹೆಚ್ಚಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್‌ನವರು ನರೇಂದ್ರ ಮೋದಿ ಅವರನ್ನು ಹೆಬ್ಬೆಟ್ ಪ್ರಧಾನಿ ಎನ್ನುತ್ತಾರೆ. ಬಿಜೆಪಿಯವರು ರಾಹುಲ್ ಗಾಂಧಿಯನ್ನು ಪಪ್ಪು ಎಂದು ಕರೆಯುತ್ತಾರೆ. ಆದರೆ ನಾನು ಅಭಿವೃದ್ಧಿ ಪರವಾದ ರಾಜಕೀಯ ಮಾಡುತ್ತಿದ್ದೇನೆ. ಇಂಥ ಹೇಳಿಕೆಗಳನ್ನು ಕೊಡುವುದಿಲ್ಲ ಎಂದು ತಮ್ಮ ಕಾರ್ಯತಂತ್ರವನ್ನು ವಿವರಿಸಿದರು.

ಸಿಂದಗಿಯ ನಮ್ಮ ಶಾಸಕ ಮನಗೂಳಿ ಮತ್ತು ದೇವೇಗೌಡರಿಗೆ ಅವಿನಾಭಾವ ಸಂಬಂಧವಿತ್ತು. ಮನಗೂಳಿ ಇದ್ದಾಗಲು ಅವರಿಬ್ಬರ ಪುತ್ರರು ಜಗಳ ಮಾಡಿದ್ದರು. ಈಗಿನ ಕಾಂಗ್ರೆಸ್ ಅಭ್ಯರ್ಥಿ ಮನಗೂಳಿ ಅವರ ಲೆಟರ್ ಹೆಡ್ ಮಾರಾಟ ಮಾಡಿಕೊಂಡಿದ್ದ. ನನಗೆ ಸಿದ್ದರಾಮಯ್ಯ ಅವರ ಭಯವಿಲ್ಲ, ಆದರೆ ಅವರಿಗೆ ನನ್ನ ಭಯವಿದೆ. ಅವರೇ ಪದೇಪದೆ ನಮ್ಮ ಹೆಸರು ಪ್ರಸ್ತಾಪಿಸುತ್ತಾರೆ. ಅವರು ಸುಮ್ಮನಾದರೆ ನಾನೂ ಸುಮ್ಮನಾಗುವೆ ಎಂದು ಹೇಳಿದರು.

ನನಗೆ ಆರ್‌ಎಸ್‌ಎಸ್ ಸಹವಾಸ ಬೇಡ. ಅಲ್ಲಿಗೆ ಹೋಗಿ ಬಂದವರು ಏನು ಮಾಡಿದ್ದಾರೆ ಎಂಬುದು ಗೊತ್ತಿದೆ. ಆರ್​ಎಸ್​ಎಸ್​ ಶಾಖೆಯಿಂದ ಬಂದವರು ವಿಧಾನಸಭೆಯಲ್ಲಿ ಏನು ಮಾಡಿದ್ದಾರೆ ಎಂದು ಗೊತ್ತಿದೆ. ಇದನ್ನೇ ತಾನೆ ಅವರು ಆರ್​ಎಸ್​ಎಸ್​ ಶಾಖೆಯಲ್ಲಿ ಕಲಿಸಿದ್ದು. ಅದನ್ನು ಕಲಿಯುವ ಅವಶ್ಯಕತೆ ನನಗಿಲ್ಲ. ಬಡವರ ಶಾಖೆಯಲ್ಲಿ ಕಲಿತದ್ದೇ ನನಗೆ ಸಾಕು ಎಂದು ನುಡಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಡ್ರಗ್ ಪೆಡ್ಲರ್ ಎಂದು ದೂರಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ನಿಟ್ಟಿನಲ್ಲಿ ಆರೋಪ ಮಾಡುವುದು ಸರಿಯಲ್ಲ. ನಾನು ಎಂದಿಗೂ ಅಂಥ ಕೀಳು ರಾಜಕೀಯಕ್ಕೆ ಹೋಗುವುದಿಲ್ಲ ಎಂದರು.

ಇದನ್ನೂ ಓದಿ: ನನ್ನ ತೋಟದ ಮನೆಯಲ್ಲಿ ವೃದ್ಧಾಶ್ರಮ ಅಥವಾ ಅನಾಥಾಶ್ರಮ ನಿರ್ಮಿಸುವೆ: ಎಚ್​ಡಿಕೆ ಇದನ್ನೂ ಓದಿ: ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗಲೂ ಕುಮಾರಸ್ವಾಮಿ ವಿಷ ಕಾರುತ್ತಿದ್ದರು: ಜಮೀರ್ ಅಹ್ಮದ್

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ