AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಕೊವಿಡ್​ನಿಂದ ಇನ್ನೂ ಸಣ್ಣ ಕೈಗಾರಿಕಾ ವಲಯ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಹೊರೆ ಹಾಕಿದ್ರೆ ಎಂಎಸ್​ಎಂಇ ಚೇತರಿಸಿಕೊಳ್ಳಲು ಹೇಗೆ ಸಾಧ್ಯ? ಈಗಾಗಲೇ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ
Ganapathi Sharma
|

Updated on:Jun 22, 2023 | 4:49 PM

Share

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಗ್ಯಾರಂಟಿ ಅನುಷ್ಠಾನ ಮಾಡಲು ವಿದ್ಯುತ್​ ದರ (Electricity Bill) ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ದೇಶದ ಪ್ರಮುಖ ಬೆನ್ನೆಲುಬು ಸಣ್ಣ ಕೈಗಾರಿಕೆಗಳು. ರಾಜ್ಯ ಸರ್ಕಾರದ ಬಳಿ ಸಂಕಷ್ಟ ಹೇಳಿಕೊಳ್ಳಲು ಸಣ್ಣ ಕೈಗಾರಿಕೆಗಳ ನಿಯೋಗ ಹೋಗಿತ್ತು. ಆದರೆ ಕೈಗಾರಿಕೋದ್ಯಮಿಗಳ ಸಂಕಷ್ಟ ಕೇಳದೆ ಪಾಠ ಮಾಡಿ ಕಳಿಸಿದ್ದಾರೆ ಎಂದು ದೂರಿದ್ದಾರೆ.

ವಿದ್ಯುತ್​ ದರ ಏರಿಕೆ ಬಗ್ಗೆ ಕೆಇಆರ್​ಸಿ ಸ್ವಂತ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಕಾಂಗ್ರೆಸ್​, ಬಿಜೆಪಿ ನಾಯಕರು ಪರಸ್ಪರ ಆರೋಪ ಮಾಡಿಕೊಳ್ತಿದ್ದಾರೆ. ಈಗ ಹಾಲಿನ ದರ ಸಹ 5 ರೂಪಾಯಿ ಜಾಸ್ತಿ ಮಾಡಲು ಹೊರಟಿದ್ದಾರೆ. ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಕಡಿತ ಮಾಡಲೂ ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊವಿಡ್​ನಿಂದ ಇನ್ನೂ ಸಣ್ಣ ಕೈಗಾರಿಕಾ ವಲಯ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಹೊರೆ ಹಾಕಿದ್ರೆ ಎಂಎಸ್​ಎಂಇ ಚೇತರಿಸಿಕೊಳ್ಳಲು ಹೇಗೆ ಸಾಧ್ಯ? ಈಗಾಗಲೇ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಕ್ಕಿ ಗ್ಯಾರಂಟಿಗೆ ದಿನಕ್ಕೊಂದು ನೆಪ; ಕೇಂದ್ರದ ಮೇಲೆ ಗೂಬೆ ಕೂರಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಹೆಚ್​​ಡಿ ಕುಮಾರಸ್ವಾಮಿ ಕಿಡಿ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಬುಧವಾರವಷ್ಟೇ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಚುನಾವಣಾ ತಂತ್ರಜ್ಞರ ಮಾತು ಕೇಳಿಕೊಂಡು ಉಚಿತ ಗ್ಯಾರಂಟಿಗಳನ್ನು ಕಾಂಗ್ರೆಸ್​​ನವರು ಘೋಷಿಸಿದ್ದರು. ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಲಿಲ್ಲ ಎಂದು ಟೀಕಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:49 pm, Thu, 22 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್