AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಕೊವಿಡ್​ನಿಂದ ಇನ್ನೂ ಸಣ್ಣ ಕೈಗಾರಿಕಾ ವಲಯ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಹೊರೆ ಹಾಕಿದ್ರೆ ಎಂಎಸ್​ಎಂಇ ಚೇತರಿಸಿಕೊಳ್ಳಲು ಹೇಗೆ ಸಾಧ್ಯ? ಈಗಾಗಲೇ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ
ಗಣಪತಿ ಶರ್ಮಾ
|

Updated on:Jun 22, 2023 | 4:49 PM

Share

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಗ್ಯಾರಂಟಿ ಅನುಷ್ಠಾನ ಮಾಡಲು ವಿದ್ಯುತ್​ ದರ (Electricity Bill) ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ದೇಶದ ಪ್ರಮುಖ ಬೆನ್ನೆಲುಬು ಸಣ್ಣ ಕೈಗಾರಿಕೆಗಳು. ರಾಜ್ಯ ಸರ್ಕಾರದ ಬಳಿ ಸಂಕಷ್ಟ ಹೇಳಿಕೊಳ್ಳಲು ಸಣ್ಣ ಕೈಗಾರಿಕೆಗಳ ನಿಯೋಗ ಹೋಗಿತ್ತು. ಆದರೆ ಕೈಗಾರಿಕೋದ್ಯಮಿಗಳ ಸಂಕಷ್ಟ ಕೇಳದೆ ಪಾಠ ಮಾಡಿ ಕಳಿಸಿದ್ದಾರೆ ಎಂದು ದೂರಿದ್ದಾರೆ.

ವಿದ್ಯುತ್​ ದರ ಏರಿಕೆ ಬಗ್ಗೆ ಕೆಇಆರ್​ಸಿ ಸ್ವಂತ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಕಾಂಗ್ರೆಸ್​, ಬಿಜೆಪಿ ನಾಯಕರು ಪರಸ್ಪರ ಆರೋಪ ಮಾಡಿಕೊಳ್ತಿದ್ದಾರೆ. ಈಗ ಹಾಲಿನ ದರ ಸಹ 5 ರೂಪಾಯಿ ಜಾಸ್ತಿ ಮಾಡಲು ಹೊರಟಿದ್ದಾರೆ. ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಕಡಿತ ಮಾಡಲೂ ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊವಿಡ್​ನಿಂದ ಇನ್ನೂ ಸಣ್ಣ ಕೈಗಾರಿಕಾ ವಲಯ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಹೊರೆ ಹಾಕಿದ್ರೆ ಎಂಎಸ್​ಎಂಇ ಚೇತರಿಸಿಕೊಳ್ಳಲು ಹೇಗೆ ಸಾಧ್ಯ? ಈಗಾಗಲೇ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಕ್ಕಿ ಗ್ಯಾರಂಟಿಗೆ ದಿನಕ್ಕೊಂದು ನೆಪ; ಕೇಂದ್ರದ ಮೇಲೆ ಗೂಬೆ ಕೂರಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಹೆಚ್​​ಡಿ ಕುಮಾರಸ್ವಾಮಿ ಕಿಡಿ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಬುಧವಾರವಷ್ಟೇ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಚುನಾವಣಾ ತಂತ್ರಜ್ಞರ ಮಾತು ಕೇಳಿಕೊಂಡು ಉಚಿತ ಗ್ಯಾರಂಟಿಗಳನ್ನು ಕಾಂಗ್ರೆಸ್​​ನವರು ಘೋಷಿಸಿದ್ದರು. ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಲಿಲ್ಲ ಎಂದು ಟೀಕಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:49 pm, Thu, 22 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ