AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಡೀಲ್ ಮಾಡ್ತಿದ್ರು, ಯಾರು ಕಮಿಷನ್ ತಗೊಳ್ತಿದ್ರು ಎಲ್ಲ ಟೈಂ ಬಂದಾಗ ಹೇಳ್ತೀನಿ: ಜಮೀರ್ ವಿರುದ್ಧ ರೇವಣ್ಣ ಗರಂ

ಕುಮಾರಸ್ವಾಮಿಯಿಂದ ಅನುಕೂಲ ಪಡೆದವರು ಈಗ ಮಾತಾಡ್ತಿದ್ದಾರೆ ಎಂದು ಹಳೆಯ ವಿದ್ಯಮಾನಗಳನ್ನು ನೆನಪಿಸಿಕೊಂಡರು.

ಯಾರು ಡೀಲ್ ಮಾಡ್ತಿದ್ರು, ಯಾರು ಕಮಿಷನ್ ತಗೊಳ್ತಿದ್ರು ಎಲ್ಲ ಟೈಂ ಬಂದಾಗ ಹೇಳ್ತೀನಿ: ಜಮೀರ್ ವಿರುದ್ಧ ರೇವಣ್ಣ ಗರಂ
ಎಚ್​.ಡಿ.ರೇವಣ್ಣ ಮತ್ತು ಜಮೀರ್ ಅಹಮದ್ ಖಾನ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 18, 2021 | 8:26 PM

Share

ಹಾಸನ: ಯಾರ್ಯಾರ ಬಳಿ ಯಾರು ಡೀಲ್ ಮಾಡುತ್ತಿದ್ದರು. ಯಾರ ಬಳಿ ಯಾರು ಕಮಿಷನ್ ತಗೊಳ್ತಿದ್ರು ಎಲ್ಲವೂ ನನಗೆ ಗೊತ್ತಿಲ್ಲ. ಸಮಯ ಬಂದಾಗ ಎಲ್ಲವನ್ನೂ ಹೇಳ್ತೀನಿ ಎಂದು ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಎಚ್​.ಡಿ.ಕುಮಾರಸ್ವಾಮಿ ಬಗ್ಗೆ ಶಾಸಕ ಜಮೀರ್ ಅಹಮದ್ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಮೀರ್ ಅವರ ವರ್ತನೆಯ ಬಗ್ಗೆ ಹರಿಹಾಯ್ದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭ ಬಸ್ ಓಡಿಸಿಕೊಂಡಿದ್ದವರು ಯಾರು ಎಂದು ಪ್ರಶ್ನಿಸಿದ ಅವರು, ನಾನು ಆಗಲೇ ಹೇಳಿದ್ದೆ, ಬೇಡ ಕಣಯ್ಯ ಆ ಬಸ್ ಹತ್ತಬೇಡ ಅಂತ. ರಾಜ್ಯದಲ್ಲಿ ಬಿಜೆಪಿ ಬರಬಾರದು ಎಂದಿದ್ದರೆ ಅವರೂ ಅಂದೇ ಕುಮಾರಸ್ವಾಮಿಗೆ ಹೇಳಬಹುದಿತ್ತಲ್ಲವಾ? ಯಾರಾದ್ರೂ ಹೊಗಳಿದರೆ ಕುಮಾರಸ್ವಾಮಿ ಕರಗಿಬಿಡ್ತಾರೆ. ಕುಮಾರಸ್ವಾಮಿಯಿಂದ ಅನುಕೂಲ ಪಡೆದವರು ಈಗ ಮಾತಾಡ್ತಿದ್ದಾರೆ ಎಂದು ಹಳೆಯ ವಿದ್ಯಮಾನಗಳನ್ನು ನೆನಪಿಸಿಕೊಂಡರು.

ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಲು ಎರಡೂ ರಾಜಕೀಯ ಪಕ್ಷಗಳು ಏನು ಮಾಡಿದವು ಎಂದು ಬಹಿರಂಗವಾಗಿ ಹೇಳಿಬಿಡಲಿ. ಏನೂ ಮಾಡಿರಲಿಲ್ಲ ಎಂದಾದರೆ ದೇವರ ಮುಂದೆ ಪ್ರಮಾಣ ಮಾಡಲಿ. ಯಾವಾಗ ಯಾರಿಂದ ಅನುಕೂಲ ಬೇಕೋ ತೆಗೆದುಕೊಳ್ಳುವ ಕಾಂಗ್ರೆಸ್ ಪಕ್ಷ ನಂತರ ಅವರನ್ನೇ ಒದ್ದು ಬಿಡುತ್ತದೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್​ಗೆ ಇಂಥ ಪರಿಸ್ಥಿತಿ ಬಂದಿದೆ. ನಾವೇನು ನಮ್ಮನೆ ಬಾಗಿಲಿಗೆ ಬನ್ನಿ ಅಂತ ಕಾಂಗ್ರೆಸ್​ನ ಕರೆದಿದ್ವಾ? ಆಗ ಅವರೇ ಬಂದು ದೇವೇಗೌಡರ ಕಾಲು ಹಿಡಿದುಕೊಂಡ್ರು. ಆಮೇಲೆ ಅವರೇ ಸರ್ಕಾರವನ್ನೂ ತೆಗೆದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಹಳ್ಳಿಯ ರೈತನ ಮಗ ದೇವೇಗೌಡ ಬರಬೇಕಾಯ್ತು. ಇಬ್ರಾಹಿಂ ಅವರನ್ನು ಕಾಂಗ್ರೆಸ್ ದುಡಿಸಿಕೊಂಡು ಮೂಲೆಗುಂಪು ಮಾಡಿತ್ತು. ಆದರೆ ದೇವೇಗೌಡರು ಅವರನ್ನು ಕರೆತಂದು ಕೇಂದ್ರ ಮಂತ್ರಿ ಮಾಡಿದರು ಎಂದು ನೆನಪಿಸಿಕೊಂಡರು.

ನಾವು ಅಲ್ಪ ಸಂಖ್ಯಾತ ಅಭ್ಯರ್ಥಿ ಹಾಕಿದ್ಸಕ್ಕೆ ನಿಮಗ್ಯಾಕೆ ಭಯವಾಗಬೇಕು ಎಂದು ಪ್ರಶ್ನಿಸಿದ ರೇವಣ್ಣ, ಈ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾಂಗ್ರೆಸ್​ನ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಕಾರಣ. ಇವರು ಹೇಳುವ ಸುಳ್ಳು ಜಾಸ್ತಿ ದಿನ ನಡೆಯೋದಿಲ್ಲ. ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಶೇ 40ರಷ್ಟಿದೆ. ಅಲ್ಲಿ ಅವರೇ ಕಾಂಗ್ರೆಸ್​ ಬೇಡ ಅಂತ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆ ರಾಜಕೀಯ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Siddaramaiah: ಸಿದ್ದರಾಮಯ್ಯ ಸಮ್ಮುಖದಲ್ಲೇ ‘ಮುಂದಿನ ಮುಖ್ಯಮಂತ್ರಿ’ ಎಂದು ಪುನರುಚ್ಚರಿಸಿದ ಶಾಸಕ ಜಮೀರ್ ಅಹಮದ್! ಇದನ್ನೂ ಓದಿ: ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗಲೂ ಕುಮಾರಸ್ವಾಮಿ ವಿಷ ಕಾರುತ್ತಿದ್ದರು: ಜಮೀರ್ ಅಹ್ಮದ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!