AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್, ಕಾಂಗ್ರೆಸ್​ ಶಾಸಕರ ಕ್ಷೇತ್ರಕ್ಕೆ ಮನೆಗಳು ವರ್ಗಾವಣೆ

ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಅಂಬೇಡ್ಕರ್ ವಸತಿ ಯೋಜನೆ ಮನೆಗಳನ್ನು ಇದೀಗ ಏಕಾಏಕಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೆರಳಿದ ಜೆಡಿಎಸ್ ಶಾಸಕ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ವಿಧಾನಸೌಧದಲ್ಲಿ ಧರಣಿಗೆ ತೀರ್ಮಾನಿಸಿದ್ದಾರೆ.

ಜೆಡಿಎಸ್​ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್, ಕಾಂಗ್ರೆಸ್​ ಶಾಸಕರ ಕ್ಷೇತ್ರಕ್ಕೆ ಮನೆಗಳು ವರ್ಗಾವಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 31, 2023 | 2:47 PM

Share

ಬೆಂಗಳೂರು, (ಆಗಸ್ಟ್ 31): ಜೆಡಿಎಸ್​ (JDS) ಶಾಸಕರಿಗೆ ರಾಜ್ಯ ಸರ್ಕಾರ ಶಾಕ್​ ಕೊಟ್ಟಿದೆ. ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಕಾಂಗ್ರೆಸ್(Congress)ಶಾಸಕರು ಗೆದ್ದಿರುವ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತುರುವೇಕೆರೆಗೆ ಮಂಜೂರು ಆಗಿದ್ದ 3,375 ಮನೆಗಳನ್ನು ಕಾಂಗ್ರೆಸ್ ಶಾಸಕ ರಂಗನಾಥ್​ ಅವರ ಕುಣಿಗಲ್​ ವಿಧಾನಸಭಾ ಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇದರಿಂದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್​ ವಿರುದ್ಧ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಸಿಡಿದೆದ್ದಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ. ನಾಳೆ(ಸೆಪ್ಟೆಂಬರ್ 01) ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧ ಸಚಿವರ ಕಚೇರಿ ಎದುರು ಧರಣಿ ನಡೆಸಲು ತೀರ್ಮಾನಿಸಿದ್ದಾರೆ.

ಚುನಾವಣೆಗೂ ಮುಂಚೆ ತುರುವೆಕೆರೆ ಕ್ಷೇತ್ರಕ್ಕೆ ಮಂಜೂರಾಗಿದ್ದ ಅಂಬೇಡ್ಕರ್ ವಸತಿ ಯೋಜನೆ ಮನೆಗಳು ಈ ಸಂದರ್ಭದಲ್ಲಿ ಬಿಜೆಪಿ ಶಾಸಕಕರಿದ್ದು. ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಅವರು ಆ ಮನೆಗಳನ್ನು ಹಂಚಿಕೆ ಮಾಡಿದ್ದರು. ಆದ್ರೆ, ಆ ಮನೆಗಳನ್ನು ಇದೀಗ ಏಕಾಏಕಿ ಬೇರೆ ವಿಧಾನಸಭಾ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲೇ ‘ಗೃಹಲಕ್ಷ್ಮೀ’ಗೆ ಚಾಲನೆ ಹಿಂದೆ ‘ಕೈ’ ಮಾಸ್ಟರ್ ಪ್ಲ್ಯಾನ್, ಈ 4 ಕ್ಷೇತ್ರಗಳು ಟಾರ್ಗೆಟ್!

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ, ನನ್ನ ಕ್ಷೇತ್ರದಲ್ಲಿ ವಿಚಾರದಲ್ಲಿ ತಲೆ ಹಾಕಲು ಅವರು ಯಾರು? ಆಡಳಿತ ಪಕ್ಷ ಶಾಸಕ ಕೀಳುಮಟ್ಟಕ್ಕೆ ಇಳಿಯಬಾರದು. ತಮ್ಮ ಕ್ಷೇತ್ರಗಳಿಗೆ ಮನೆ ತೆಗೆದುಕೊಂಡು ಹೋಗುವ ತಾಕತ್ ಅವರಿಗಿಲ್ಲವಾ ಎಂದು ಕುಣಿಗಲ್ ಶಾಸಕ ಡಾ ರಂಗನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ಸಿಎಂ ನಡುವಳಿಕೆ ಸರಿಯಾಗಿಲ್ಲ. ಸೌಜನ್ಯಕ್ಕೂ ನಾನು ಕೊಟ್ಟ ಪತ್ರಕ್ಕೆ ಸಹಿ ಹಾಕಿಲ್ಲ. ಜಿಲ್ಲಾವರು ಶಾಸಕರ ಸಭೆ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಶಾಸಕರ ಸಭೆಗೆ ನಮ್ಮನ್ನು ಕರೆಯಬೇಕಿತ್ತು. ಅವರ ಪಕ್ಷದ ಶಾಸಕರ ಸಭೆ ಎನ್ನುವುದಾದರೆ ಕಾಂಗ್ರೆಸ್ ಕಚೇರಿಯಲ್ಲಿ ಮಾಡಿಕೊಳ್ಳಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ