AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಆಪರೇಷನ್ ಹಸ್ತ: ಕಾಂಗ್ರೆಸ್ ಕೊಟ್ಟ ಆಹ್ವಾನ ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಕಾಂಗ್ರೆಸ್ ಆಪರೇಷನ್ ಹಸ್ತ ಅಸ್ತ್ರ ಪ್ರಯೋಗಿಸುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು, ನಾಯಕರುಗಳಿಗೆ ಗಾಳ ಹಾಕಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್​ ಶಾಸಕರೊಬ್ಬರಿಗೆ ಕಾಂಗ್ರೆಸ್​ ಸೇರುವಂತೆ ಆಹ್ವಾನ ಕೊಡಲಾಗಿದೆ. ಈ ಬಗ್ಗೆ ಸ್ವತಃ ಶಾಸಕ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಯಾರು ಶಾಸಕ? ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಮುಂದುವರೆದ ಆಪರೇಷನ್ ಹಸ್ತ: ಕಾಂಗ್ರೆಸ್ ಕೊಟ್ಟ ಆಹ್ವಾನ ಬಹಿರಂಗಪಡಿಸಿದ ಜೆಡಿಎಸ್ ಶಾಸಕ
ಕಾಂಗ್ರೆಸ್-ಜೆಡಿಎಸ್
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Oct 04, 2023 | 9:46 AM

Share

ಬೆಂಗಳೂರು, (ಅಕ್ಟೋಬರ್ 04): ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ (JDS BJP alliance) ಕಾಂಗ್ರೆಸ್ ಆಪರೇಷನ್ ಹಸ್ತ (Congress Operation Hastha) ಅಸ್ತ್ರ ಪ್ರಯೋಗಿಸುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು, ನಾಯಕರುಗಳಿಗೆ ಗಾಳ ಹಾಕಿದೆ. ಈ ಮೊದಲು ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವು ನಾಯಕರಿಗೆ ಗಾಳ ಹಾಕಿತ್ತು. ಇದೀಗ ಆಪರೇಷನ್ ಹಸ್ತ ಜೆಡಿಎಸ್​ನತ್ತ ತಿರುಗಿದೆ. ಹೌದು.. ತುರುವೇಕೆರೆ ಕ್ಷೇತ್ರದ ಜೆಡಿಎಸ್​ ಶಾಸಕ ಎಂ.ಟಿ. ಕೃಷ್ಣಪ್ಪ (MT Krishnappa) ಅವರಿಗೆ ಕಾಂಗ್ರೆಸ್​ ಸೇರುವಂತೆ ಆಹ್ವಾನ ಕೊಡಲಾಗಿದೆ. ಈ ಬಗ್ಗೆ ಸ್ವತಃ ಶಾಸಕ ಕೃಷ್ಣಪ್ಪ ಅವರೇ ಇದೀಗ ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ತುಮಕೂರಿನ ತುರುವೇಕೆರೆಯಲ್ಲಿ ಮಾತನಾಡಿರುವ ಎಂ.ಟಿ. ಕೃಷ್ಣಪ್ಪ, ಕಾಂಗ್ರೆಸ್ ಪಕ್ಷದಿಂದ ನನಗೂ ಆಹ್ವಾನ ಬಂದಿದ್ದು ನಿಜ. ಆದ್ರೆ, ಕಾಂಗ್ರೆಸ್ ಏಕೆ ಹೋಗೋಣ? ಹೋಗುವಂತದ್ದು ಏನು ಇದೆ ಹೇಳಿ? ಕಾಂಗ್ರೆಸ್ ನವರೆ 136ಜನ ಇದ್ದು, ಓವರ್ ಲೋಡ್ ಆಗಿದೆ. ನಾವು ಎಲ್ಲಿ ಹೋಗಿ ಕುತಿಕೊಳ್ಳುವುದು ಎಂದು ಹೇಳಿದರು. ಈ ಮೂಲಕ ಕಾಂಗ್ರೆಸ್ ಆಹ್ವಾನವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜೆಡಿಎಸ್ ಫಿನಿಶ್ ಆಗುತ್ತೆ ಎಂದುಕೊಂಡಿದ್ದಾರೆ; ಕಾಂಗ್ರೆಸ್ ವಿರುದ್ಧ ದೇವೇಗೌಡ ತೀವ್ರ ವಾಗ್ದಾಳಿ

ರಾಜ್ಯ ಕಾಂಗ್ರೆಸ್​​ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಮುಳುಗಿ ಹೋಗಿದೆ. ಒಂದು‌ ಕಡೆ ವರ್ಗಾವಣೆ ದಂಧೆ, ಮತ್ತೊಂದು ಕಡೆ ಕಮಿಷನ್ ದಂಧೆ ನಡೆಸುತ್ತಿದೆ ಎಂದು ಕಿಡಿಕಾರಿದ ಕೃಷ್ಣಪ್ಪ, ಕೇಳಿದ ಎಲ್ಲಾ ಕೆಲಸವನ್ನು ಡಿ.ಕೆ.ಶಿವಕುಮಾರ್​​ ಮಾಡಿಕೊಡುತ್ತಾರೆ. ವಿಧಾನಸೌದದಲ್ಲಿ ಡಿಸಿಎಂ ಡಿಕೆ ಚೇಂಬರ್​​ಗೆ ಹೋಗಿ ಮಾತಾಡ್ತೇನೆ. ಕಾಂಗ್ರೆಸ್​ಗೆ ಹೋಗುವಂತಹದ್ದು ಏನಿದೆ ಹೇಳಿ. ಕಾಂಗ್ರೆಸ್​ನಲ್ಲೇ 136 ಶಾಸಕರಿದ್ದು ಓವರ್​ ಲೋಡ್​ ಆಗಿ ಬಿಟ್ಟಿದೆ. ಸರ್ಕಾರ ಬಿದ್ದು ಹೋಗಲ್ಲ. ಬದಲಿಗೆ ಪಂಚರ್ ಆಗಿ ಮೂಲೆ‌ಯಲ್ಲಿ ನಿಂತಿಕೊಳ್ಳುತ್ತೆ ಎಂದು ಲೇವಡಿ ಮಾಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ