AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಆಪರೇಷನ್ ಹಸ್ತ: ಕಾಂಗ್ರೆಸ್ ಕೊಟ್ಟ ಆಹ್ವಾನ ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಕಾಂಗ್ರೆಸ್ ಆಪರೇಷನ್ ಹಸ್ತ ಅಸ್ತ್ರ ಪ್ರಯೋಗಿಸುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು, ನಾಯಕರುಗಳಿಗೆ ಗಾಳ ಹಾಕಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್​ ಶಾಸಕರೊಬ್ಬರಿಗೆ ಕಾಂಗ್ರೆಸ್​ ಸೇರುವಂತೆ ಆಹ್ವಾನ ಕೊಡಲಾಗಿದೆ. ಈ ಬಗ್ಗೆ ಸ್ವತಃ ಶಾಸಕ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಯಾರು ಶಾಸಕ? ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಮುಂದುವರೆದ ಆಪರೇಷನ್ ಹಸ್ತ: ಕಾಂಗ್ರೆಸ್ ಕೊಟ್ಟ ಆಹ್ವಾನ ಬಹಿರಂಗಪಡಿಸಿದ ಜೆಡಿಎಸ್ ಶಾಸಕ
ಕಾಂಗ್ರೆಸ್-ಜೆಡಿಎಸ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Oct 04, 2023 | 9:46 AM

Share

ಬೆಂಗಳೂರು, (ಅಕ್ಟೋಬರ್ 04): ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ (JDS BJP alliance) ಕಾಂಗ್ರೆಸ್ ಆಪರೇಷನ್ ಹಸ್ತ (Congress Operation Hastha) ಅಸ್ತ್ರ ಪ್ರಯೋಗಿಸುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು, ನಾಯಕರುಗಳಿಗೆ ಗಾಳ ಹಾಕಿದೆ. ಈ ಮೊದಲು ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವು ನಾಯಕರಿಗೆ ಗಾಳ ಹಾಕಿತ್ತು. ಇದೀಗ ಆಪರೇಷನ್ ಹಸ್ತ ಜೆಡಿಎಸ್​ನತ್ತ ತಿರುಗಿದೆ. ಹೌದು.. ತುರುವೇಕೆರೆ ಕ್ಷೇತ್ರದ ಜೆಡಿಎಸ್​ ಶಾಸಕ ಎಂ.ಟಿ. ಕೃಷ್ಣಪ್ಪ (MT Krishnappa) ಅವರಿಗೆ ಕಾಂಗ್ರೆಸ್​ ಸೇರುವಂತೆ ಆಹ್ವಾನ ಕೊಡಲಾಗಿದೆ. ಈ ಬಗ್ಗೆ ಸ್ವತಃ ಶಾಸಕ ಕೃಷ್ಣಪ್ಪ ಅವರೇ ಇದೀಗ ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ತುಮಕೂರಿನ ತುರುವೇಕೆರೆಯಲ್ಲಿ ಮಾತನಾಡಿರುವ ಎಂ.ಟಿ. ಕೃಷ್ಣಪ್ಪ, ಕಾಂಗ್ರೆಸ್ ಪಕ್ಷದಿಂದ ನನಗೂ ಆಹ್ವಾನ ಬಂದಿದ್ದು ನಿಜ. ಆದ್ರೆ, ಕಾಂಗ್ರೆಸ್ ಏಕೆ ಹೋಗೋಣ? ಹೋಗುವಂತದ್ದು ಏನು ಇದೆ ಹೇಳಿ? ಕಾಂಗ್ರೆಸ್ ನವರೆ 136ಜನ ಇದ್ದು, ಓವರ್ ಲೋಡ್ ಆಗಿದೆ. ನಾವು ಎಲ್ಲಿ ಹೋಗಿ ಕುತಿಕೊಳ್ಳುವುದು ಎಂದು ಹೇಳಿದರು. ಈ ಮೂಲಕ ಕಾಂಗ್ರೆಸ್ ಆಹ್ವಾನವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜೆಡಿಎಸ್ ಫಿನಿಶ್ ಆಗುತ್ತೆ ಎಂದುಕೊಂಡಿದ್ದಾರೆ; ಕಾಂಗ್ರೆಸ್ ವಿರುದ್ಧ ದೇವೇಗೌಡ ತೀವ್ರ ವಾಗ್ದಾಳಿ

ರಾಜ್ಯ ಕಾಂಗ್ರೆಸ್​​ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಮುಳುಗಿ ಹೋಗಿದೆ. ಒಂದು‌ ಕಡೆ ವರ್ಗಾವಣೆ ದಂಧೆ, ಮತ್ತೊಂದು ಕಡೆ ಕಮಿಷನ್ ದಂಧೆ ನಡೆಸುತ್ತಿದೆ ಎಂದು ಕಿಡಿಕಾರಿದ ಕೃಷ್ಣಪ್ಪ, ಕೇಳಿದ ಎಲ್ಲಾ ಕೆಲಸವನ್ನು ಡಿ.ಕೆ.ಶಿವಕುಮಾರ್​​ ಮಾಡಿಕೊಡುತ್ತಾರೆ. ವಿಧಾನಸೌದದಲ್ಲಿ ಡಿಸಿಎಂ ಡಿಕೆ ಚೇಂಬರ್​​ಗೆ ಹೋಗಿ ಮಾತಾಡ್ತೇನೆ. ಕಾಂಗ್ರೆಸ್​ಗೆ ಹೋಗುವಂತಹದ್ದು ಏನಿದೆ ಹೇಳಿ. ಕಾಂಗ್ರೆಸ್​ನಲ್ಲೇ 136 ಶಾಸಕರಿದ್ದು ಓವರ್​ ಲೋಡ್​ ಆಗಿ ಬಿಟ್ಟಿದೆ. ಸರ್ಕಾರ ಬಿದ್ದು ಹೋಗಲ್ಲ. ಬದಲಿಗೆ ಪಂಚರ್ ಆಗಿ ಮೂಲೆ‌ಯಲ್ಲಿ ನಿಂತಿಕೊಳ್ಳುತ್ತೆ ಎಂದು ಲೇವಡಿ ಮಾಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ