AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪರವಾಗಿ ಜಮೀರ್ ಬ್ಯಾಟಿಂಗ್ ಮಾಡುವ ಅಗತ್ಯವಿಲ್ಲ; ಜೆಡಿಎಸ್ ಎಂಎಲ್​ಸಿ ಬಿಎಂ ಫಾರೂಕ್

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಮುಸ್ಲಿಂ ಮುಖಂಡರ ಮೋಸದಿಂದ ಸೋಲು ಅನುಭವಿಸಿದ್ದೆವು. ನಾವು 30-35 ಕ್ಷೇತ್ರಗಳನ್ನು ಕಳೆದುಕೊಂಡೆವು.

ನನ್ನ ಪರವಾಗಿ ಜಮೀರ್ ಬ್ಯಾಟಿಂಗ್ ಮಾಡುವ ಅಗತ್ಯವಿಲ್ಲ; ಜೆಡಿಎಸ್ ಎಂಎಲ್​ಸಿ ಬಿಎಂ ಫಾರೂಕ್
ಜಮೀರ್ ಅಹ್ಮದ್
TV9 Web
| Edited By: |

Updated on:Oct 23, 2021 | 3:57 PM

Share

ಬೆಂಗಳೂರು: ನನ್ನ ಪರವಾಗಿ ಜಮೀರ್ ಬ್ಯಾಟಿಂಗ್ ಮಾಡುವ ಅಗತ್ಯವಿಲ್ಲ ಅಂತ ಜೆಡಿಎಸ್ ಎಂಎಲ್​ಸಿ ಬಿಎಂ ಫಾರೂಕ್ (BM Farooq) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ದೇವರು ಇಚ್ಛಿಸಿದರೆ ನಾನು ಎಂದಾದರೂ ಸಚಿವನಾಗುತ್ತೇನೆ. ಅದಕ್ಕಾಗಿ ಪಕ್ಷಾಂತರ, ಸುಳ್ಳು ಹೇಳುವುದು ನನಗೆ ಬರಲ್ಲ. ರಾಜ್ಯಸಭೆ ಟಿಕೆಟ್ ಕೊಡಲು ಹೆಚ್​ಡಿಕೆ ನನ್ನನ್ನ ಕರೆಸಿದ್ದರು. ಮುಂಬೈನಲ್ಲಿದ್ದ ನನ್ನನ್ನು ಫೋನ್ ಮಾಡಿ ಕರೆಸಿಕೊಂಡಿದ್ದರು. ಜಮೀರ್, ಇತರರು ನನಗೆ ದೋಖಾ ಮಾಡಿ ಹೋದರು ಅಂತ ಫಾರೂಕ್ ಕಿಡಿಕಾರಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಮುಸ್ಲಿಂ ಮುಖಂಡರ ಮೋಸದಿಂದ ಸೋಲು ಅನುಭವಿಸಿದ್ದೆವು. ನಾವು 30-35 ಕ್ಷೇತ್ರಗಳನ್ನು ಕಳೆದುಕೊಂಡೆವು. ಐಎಎಸ್ ಮತ್ತು ಕೆಲವು ನಿವೃತ್ತ ಅಧಿಕಾರಿಗಳ ಜೊತೆಗೂಡಿ ಸಿದ್ದರಾಮಯ್ಯ ಇದಕ್ಕೆ ಪಿತೂರಿ ನಡೆಸಿದ್ದರು. ಸಿದ್ದರಾಮಯ್ಯ ಅಲ್ಪಸಂಖ್ಯಾತರನ್ನು ತಪ್ಪು ದಾರಿಗೆ ಎಳೆದರು. ಇದರಿಂದಾಗಿ ಬಿಜೆಪಿಗೆ 105 ಸ್ಥಾನ ಗೆಲ್ಲಲು ಕಾರಣವಾಯಿತು ಅಂತ ಜೆಡಿಎಸ್ ಎಂಎಲ್​ಸಿ ಫಾರೂಕ್ ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೆಖಿಸಿದ್ದಾರೆ.

ಕಾಂಗ್ರೆಸ್, ಬಿಜೆಪಿ ಡಬಲ್ ಗೇಮ್​ನಿಂದ ಮುಸ್ಲಿಮರು ಅತಂತ್ರವಾಗಿದ್ದಾರೆ ಎಂದು ಆರೋಪ ಮಾಡಿದ ಫಾರೂಕ್, ಮುಸ್ಲಿಮರ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್, ಬಿಜೆಪಿ ವಿಫಲವಾಗಿದೆ. ಕಾಂಗ್ರೆಸ್ ಮುಸ್ಲಿಮರನ್ನ ಎತ್ತಿಕಟ್ಟಿ ರಾಜಕೀಯ ಮಾಡುತ್ತಿದೆ. ಕೋಮು ಶಕ್ತಿಗಳನ್ನ ಮುಸ್ಲಿಮರ ವಿರುದ್ಧ ಬಿಜೆಪಿ ಎತ್ತಿ ಕಟ್ಟುತ್ತಿದೆ. ಬಿಜೆಪಿ, ಕಾಂಗ್ರೆಸ್ ನಡುವೆ ಯಾವುದೇ ರೀತಿ ವ್ಯತ್ಯಾಸ ಇಲ್ಲ. ಆರ್​ಎಸ್​​ಎಸ್​ ಬೆಳೆದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ. ಆರ್​ಎಸ್​ಎಸ್​ ಇಲ್ಲ ಅಂದ್ರೆ ಕಾಂಗ್ರೆಸ್​ಗೆ ಬೆಲೆಯೇ ಇಲ್ಲ. ಆರ್​ಎಸ್​ಎಸ್​ ಗುಮ್ಮ ತೋರಿಸಿ ಕಾಂಗ್ರೆಸ್ ಮುಸ್ಲಿಮರ ಮತ ಪಡೆಯುತ್ತದೆ. ಕಾಂಗ್ರೆಸ್ ಕೂಡ ಆರ್​ಎಸ್​ಎಸ್​ಗೆ ಪರೋಕ್ಷ ಬೆಂಬಲ ಕೊಡುತ್ತಿದೆ ಅಂತ ಫಾರೂಕ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ

ನನ್ನ ಗುರಿ ಇರುವುದು ಏನಿದ್ದರೂ 2023ರ ಚುನಾವಣೆಗೆ; ಐದು ವರ್ಷ ಅಧಿಕಾರ ಮಾಡಲು ಅವಕಾಶ ನೀಡಿ: ಹೆಚ್​ಡಿ ಕುಮಾರಸ್ವಾಮಿ

ಮುದ್ದಿಸುವ, ತಬ್ಬಿಕೊಳ್ಳುವ ದೃಶ್ಯಗಳನ್ನು ಟಿವಿಯಲ್ಲಿ ತೋರಿಸುವಂತಿಲ್ಲ; ಪಾಕಿಸ್ತಾನಿ ಕಿರುತೆರೆಗೆ ಸೆನ್ಸಾರ್​ ಬರೆ

Published On - 3:42 pm, Sat, 23 October 21

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ