AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ಗೆ ಬಿಗ್​ ಶಾಕ್, ಸಾಮೂಹಿಕವಾಗಿ ಪಕ್ಷ ತೊರೆಯಲು ತೀರ್ಮಾನಿಸಿದ ಮುಸ್ಲಿಂ ನಾಯಕರು

ಕಳೆದ ಹಲವು ದಿನಗಳಿಂದ ರಾಜ್ಯದ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಲ್ಲಿದ್ದ ಬಿಜೆಪಿ (BJP)-ಜೆಡಿಎಸ್‌ (JDS) ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರ್ಪಡೆಯಾಗಿದೆ. ಇತ್ತ ಜೆಡಿಎಸ್​​ನಲ್ಲಿದ್ದ ನಾಯಕರು ಸಾಮೂಹಿಕವಾಗಿ ಪಕ್ಷ ನಿರ್ಧರಿಸಿದ್ದು, ಈ ಬಗ್ಗೆ ಇಂದು ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ಜೆಡಿಎಸ್​ಗೆ ಬಿಗ್​ ಶಾಕ್, ಸಾಮೂಹಿಕವಾಗಿ ಪಕ್ಷ ತೊರೆಯಲು ತೀರ್ಮಾನಿಸಿದ ಮುಸ್ಲಿಂ ನಾಯಕರು
ಜೆಡಿಎಸ್​ ಮುಸ್ಲಿಂ ನಾಯಕರ ಸಭೆ
Sunil MH
| Edited By: |

Updated on:Sep 24, 2023 | 4:32 PM

Share

ಬೆಂಗಳೂರು, (ಸೆಪ್ಟೆಂಬರ್ 24): ಮುಂಬರುವ ಲೋಕಸಭಾ ಚುನಾವಣೆಗೆ Loksabha Elections 2024) ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಜೆಡಿಎಸ್​ನ ಅಲ್ಪಸಂಖ್ಯಾತ ನಾಯಕರು ಪಕ್ಷ ತೊರೆಯಲು ತೀರ್ಮಾನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸನಲ್ಲಿ ಇಂದು (ಸೆ.24) ನಡೆದ ಜೆಡಿಎಸ್ ಅಲ್ಪಸಂಖ್ಯಾತ ನಾಯಕರ ಸಭೆ ಅಂತ್ಯವಾಗಿದ್ದು, ಮುಸ್ಲಿಂ ಮುಖಂಡರು ಜೆಡಿಎಸ್​ಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಜೆಡಿಎಸ್ ಕಾರ್ಯಾಧ್ಯಕ್ಷ ಎನ್ ಎಂ ನಬಿ, ಮುಖಂಡರಾದ ಮೋಹಿದ್ ಅಲ್ತಾಫ್,ನಾಸೀರ್ ಉಸ್ತಾದ್,ವಕ್ತಾರ ನೂರ್ ಅಹಮ್ಮದ್ ಸೇರಿದಂತೆದಾವಣಗೆರೆ, ಮೈಸೂರು, ರಾಮನಗರ, ರಾಯಚೂರು, ತುಮಕೂರು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದು, ರಾಜ್ಯದಲ್ಲಿ ಪ್ರವಾಸ ಮಾಡಿ ಸಾಮೂಹಿಕ ರಾಜೀನಾಮೆ ನೀಡಲು ನಿರ್ಣಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್​ ದೋಸ್ತಿ: ಜನತಾದಳದಿಂದ ದೂರ ಉಳಿಯಲು ಮುಸ್ಲಿಂ ಮುಖಂಡರ ನಿರ್ಧಾರ 

ಬಿಜೆಪಿ ಜೊತೆ ಜೆಡಿಎಸ್​​ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ದಳದಿಂದ ದೂರ ಉಳಿಯಲು ಮುಸ್ಲಿಂ ಮುಖಂಡರ ನಿರ್ಧರಿಸಿದ್ದಾರೆ. ಬಿಜೆಪಿ ಜೊತೆ​​ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ರಾಜ್ಯ ಕಚೇರಿ ಉಸ್ತುವಾರಿ ಸೈಯದ್ ಶಫಿಉಲ್ಲ ಸಾಹೇಬ್ ತಮ್ಮ ಹುದ್ದೆಗೆ ಈಗಾಗಲೇ ರಾಜಿನಾಮೆ ನೀಡಿದ್ದಾರೆ. ಇನ್ನುಳಿದಂತೆ ಮುಂದಿನ ದಿನಗಳಲ್ಲಿ ಎಲ್ಲಾ ಮುಸ್ಲಿಂ ನಾಯಕರು ಜೆಡಿಎಸ್​ಗೆ ಗುಡ್​ಬೈ ಹೇಳಲಿದ್ದಾರೆ. ಆದ್ರೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಆರ್​ಎಸ್​ಎಸ್​ ಹಾಗೂ ಬಿಜೆಪಿ ಸಿದ್ಧಾಂತಗಳನ್ನು ಇಬ್ರಾಹಿಂ ಟೀಕಿಸುತ್ತಾ ಬಂದಿದ್ದಾರೆ. ಆದ್ರೆ, ಇದೀಗ ಜೆಡಿಎಸ್​, ಎನ್​ಡಿಎ ಮೈತ್ರಿಕೂಟಕ್ಕೆ ಸೇರಿದ್ದು, ಇಬ್ರಾಹಿಂ ನಡೆ ತೀರ್ವ ಕುತೂಹಲಕ್ಕೆ ಕಾರಣವಾಗಿದೆ.

ಮೂಲಗಳ ಪ್ರಕಾರ ಇಬ್ರಾಹಿಂ ಸಹ ಜೆಡಿಎಸ್ ತೊರೆಯಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಕಾಂಗ್ರೆಸ್​ನಿಂದ ಆಚೆ ಬಂದಿರುವ ಇಬ್ರಾಹಿಂದ ಇದೀಗ ಜೆಡಿಎಸ್​ ತೊರೆದು ಯಾವ ಪಕ್ಷಕ್ಕೆ ಹೋಗಲಿದ್ದಾರೆ ಎನ್ನುವುದು ಕೌತುಕ. ಮತ್ತೆ ಅವರು ಕಾಂಗ್ರೆಸ್​ಗೆ ಮರಳುವ ಸಾಧ್ಯತೆಗಳು ಹೆಚ್ಚಿವೆ ಎಂದು ತಿಳಿದುಬಂದಿದೆ. ಮುಂಬರವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಸಹ ಇಬ್ರಾಹಿಂ ಅವರನ್ನು ಸೇರಿಸಿಕೊಳ್ಳಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಮತ್ತೊಂದೆಡೆ ಅವರು ಜೆಡಿಎಸ್​ಗೆ ರಾಜೀನಾಮೆ ನೀಡಿ ಯಾವುದೇ ಪಕ್ಷಕ್ಕೆ ಸೇರದ ರಾಜಕೀಯದಿಂದ ದೂರು ಉಳಿಯಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಒಟ್ಟಿನಲ್ಲಿ ಇಬ್ರಾಹಿಂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಅವರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Sun, 24 September 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ