AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ನೂತನ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಮೊದಲ ಮಾತು, ಪಕ್ಷ ಸಂಘಟಿಸಲು ಪಣ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ತಮಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಹೆಚ್​ ಡಿ ಕುಮಾರಸ್ವಾಮಿ ಮಾತನಾಡಿದರು.

ಜೆಡಿಎಸ್​ ನೂತನ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಮೊದಲ ಮಾತು, ಪಕ್ಷ ಸಂಘಟಿಸಲು ಪಣ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Oct 19, 2023 | 2:02 PM

Share

ಬೆಂಗಳೂರು ಅ.19: ಇಂದು ನಡೆದ ಸಭೆಯಲ್ಲಿ ಜೆಡಿಎಸ್​ನ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. 18 ಶಾಸಕರ ಮತ್ತು ಪಕ್ಷದ ಪದಾಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ. ಪಕ್ಷ ಸಂಘಟನೆ ದೃಷ್ಟಿಯಿಂದ ದಸರಾ ನಂತರ ಹಲವಾರು ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಸಭೆಗೆ ಆಗಮಿಸಿ ಸಲಹೆ ನೀಡಿದರು. ಸರ್ವ ಸದಸ್ಯರ ಸಲಹೆ ಆಧರಿಸಿ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸುವೆ. ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಆಘಾತಕ್ಕೊಳಗಿದ್ದೆವು. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ನಿರ್ಧರಿಸಿದ್ದೇವೆ ಜೆಡಿಎಸ್​​ನ (JDS) ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ (H. D. Kumaraswamy) ಹೇಳಿದರು.

ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ನೇತೃತ್ವದಲ್ಲಿ ಇಂದು (ಅ.19) ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಲೋಪಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡುವೆ. ಸದನದ ಒಳಗೆ, ಹೊರಗೆ ಜೆಡಿಎಸ್ ಸಮರ್ಥವಾಗಿ ಹೋರಾಡಲಿದೆ ಎಂದರು.

ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿರುವುದು ಸಂಘಟನೆಗೆ ಸಹಾಯ ಆಗುತ್ತೆ

ಹೆಚ್​.ಡಿ.ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿರುವುದು ಸಂಘಟನೆಗೆ ಸಹಾಯ ಆಗುತ್ತೆ. ಇದು ಕುಟುಂಬದ್ದಲ್ಲ. ಇವತ್ತು ನಮಗೆ ಅನಿವಾರ್ಯತೆ ಇದೆ. ಅದೃಷ್ಟ ಯಾವಾಗ ಯಾರ ಬಾಗಿಲಿಗೆ ಹೋಗಿ ನಿಲ್ಲುತ್ತೆ ರಾಜಕಾರಣದಲ್ಲಿ ಗೊತ್ತಿಲ್ಲ. ಕಾದು ನೋಡೋಣ. ಕುಟುಂಬ ರಾಜಕಾರಣದ ಬಗ್ಗೆ ಮಾತಾಡೋಕೆ ಕಾಂಗ್ರೆಸ್​ಗೆ ಯಾವುದೇ ನೈತಿಕತೆ ಇಲ್ಲ. ನಮ್ಮ ಪಕ್ಷ ಬಹಳ ಸದೃಢವಾಗಿದೆ. ಬಿಜೆಪಿ‌, ಕಾಂಗ್ರೆಸ್​ನಲ್ಲಿ ಅರ್ಧಕ್ಕಿಂತ ಜಾಸ್ತಿ  ನಮ್ಮವರೇ ಇದ್ದಾರೆ ಎಂದು ಶಾಸಕ ಬಂಡೆಪ್ಪ ಕಾಶಂಪೂರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:54 pm, Thu, 19 October 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ