AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ಹೆಚ್​ಸಿ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಏನಿದು ಪ್ರಕರಣ?

HC Balakrishna Statement: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎನ್ನುವ ಅರ್ಥದಲ್ಲಿ ಹೇಳಿದ್ದ ಕಾಂಗ್ರೆಸ್​ ಶಾಸಕ ಹೆಚ್​ಸಿ ಬಾಲಕೃಷ್ಣಗೆ ಇದೀಗ ಸಂಕಷ್ಟ ಎದುರಾಗಿದೆ. ಮತದಾರರಿಗೆ ಬ್ಲ್ಯಾಕ್ ಮೇಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಾಲಕೃಷ್ಣ ವಿರುದ್ಧ ಜೆಡಿಎಸ್ ದೂರು ನೀಡಿದೆ.

ಕಾಂಗ್ರೆಸ್ ಶಾಸಕ ಹೆಚ್​ಸಿ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಏನಿದು ಪ್ರಕರಣ?
ಬಾಲಕೃಷ್ಣ ವಿರುದ್ಧ ದೂರು
TV9 Web
| Edited By: |

Updated on:Feb 02, 2024 | 3:30 PM

Share

ಬೆಂಗಳೂರು, (ಫೆಬ್ರವರಿ 02): ಲೋಕಸಭಾ ಚುನಾವಣೆಯಲ್ಲಿ  (Loksabha Elections 2024) ಕಾಂಗ್ರೆಸ್‌ಗೆ ಮತ ಹಾಕಿದ್ರೆ ಗ್ಯಾರಂಟಿಗಳು ಇರುತ್ತೆ. ಇಲ್ಲದಿದ್ದರೆ ಇಲ್ಲ ಎನ್ನುವ ಅರ್ಥದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ (HC Balakrishna) ನೀಡಿರುವ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇದೀಗ ಜೆಡಿಎಸ್​ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಶೇಷಾದ್ರಿಪುರಂ ರಸ್ತೆಯಲ್ಲಿರುವ ಮುಖ್ಯ ಚುನಾವಣಾ ಆಯೋಗ ಕಚೇರಿ ತೆರಳಿ ದೂರು ನೀಡಿರುವ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ಗೆ ಮತ ಹಾಕಿದ್ರೆ ಗ್ಯಾರಂಟಿಗಳು ಇರುತ್ತೆ. ಒಂದು ವೇಳೆ ಕಾಂಗ್ರೆಸ್​​ಗೆ ಮತ ಹಾಕಿಲ್ಲ ಅಂದರೆ ಗ್ಯಾರಂಟಿ ಇರಲ್ಲ ಎನ್ನುವ ಅರ್ಥದಲ್ಲಿ ಕಾಂಗ್ರೆಸ್​ ಶಾಸಕ ಹೆಚ್​ಸಿ ಬಾಲಕೃಷ್ಣ ಹೇಳಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಮತ ಹಾಕದಿದ್ದರೆ ಗ್ಯಾರಂಟಿಗಳು ರದ್ದು: ಮಾಗಡಿ ಶಾಸಕ ಬಾಲಕೃಷ್ಣ ಎಚ್ಚರಿಕೆಗೆ ವಿಜಯೇಂದ್ರ ತಿರುಗೇಟು

ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಹೀಗಾಗಿ ರಾಜ್ಯದ ಜನರು ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ರು . ಆದ್ರೆ, ಈಗ ಗ್ಯಾರಂಟಿ ಸಂಬಂಧ ಕಾಂಗ್ರೆಸ್ ನವರು ಬಹಿರಂಗ ವೇದಿಕೆಯಲ್ಲಿ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಗ್ಯಾರಂಟಿಗಳನ್ನ ಮುಂದಿಟ್ಟುಕೊಂಡು ಬ್ಲಾಕ್ ಮೈಲ್ ಸಂಸ್ಕೃತಿ ಅನುಸರಿಸುತ್ತಿದ್ದಾರೆ. ಮತ ಹಾಕಲಿಲ್ಲ ಅಂದ್ರೆ ಗ್ಯಾರಂಟಿಗಳನ್ನ ನಿಲ್ಲಿಸೋದಾಗಿ ಹೆದರಿಸುತ್ತಿದ್ದಾರೆ. ಇದು ಖಂಡನೀಯ, ಹೀಗಾಗಿ ಅವರ ವಿರುದ್ಧ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್​​ ದೂರಿನಲ್ಲೇನಿದೆ?

ಕರ್ನಾಟಕ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ 5 ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಶಾಸಕರು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ಅವರ ಶಾಸಕತ್ವವನ್ನು ರದ್ದು ಮಾಡಬೇಕು ಹಾಗೂ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನೂ ರದ್ದುಪಡಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾಗೆ ಮನವಿ ಸಲ್ಲಿಸಲಾಗಿದೆ.

 ಬಾಲಕೃಷ್ಣ ಏನು ಹೇಳಿದ್ದರು ?

ಕಳೆದ ಜನವರಿ 30ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ್ದ ಬಾಲಕೃಷ್ಣ, ಬಿಜೆಪಿಯವರು ಮಂದಿರದ ಹೆಸರಿನಲ್ಲಿ ಅಕ್ಷತೆ ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಉಚಿತ ಗ್ಯಾರಂಟಿಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಸ್ಥಾನ ದೊರೆಯುವಂತೆ ಮಾಡದಿದ್ದರೆ ಗ್ಯಾರಂಟಿಗಳ ಬಗ್ಗೆ ಜನರಿಗೆ ಒಲವಿಲ್ಲ ಎಂಬ ಸಂದೇಶ ರವಾನೆಯಾಗುತ್ತದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದರು.

ಸರ್ಮರ್ಥಿಸಿಕೊಂಡಿದ್ದ ಬಾಲಕೃಷ್ಣ

ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳಿಗೆ ಮತ ನೀಡಬೇಕೇ ಹೊರತು ಬಿಜೆಪಿಯವರ ಅಕ್ಷತೆಗಲ್ಲ ಎಂಬುದಷ್ಟೇ ನಮ್ಮ ಉದ್ದೇಶ. ಮತ ಹಾಕಲೇಬೇಕು, ಗ್ಯಾರಂಟಿ ಯೋಜನೆ ರದ್ದುಮಾಡಿಯೇ ಬಿಡುತ್ತೇವೆ ಎಂದು ಹೇಳಿಲ್ಲ. ನಮ್ಮದು ಬ್ಲ್ಯಾಕ್​​ಮೇಲ್ ಸಂಸ್ಕೃತಿ ಅಲ್ಲ. ನಾವು ಕೆಲಸ ಮಾಡಿದ್ದೇವೆ, ನಮಗೆ ಮತ ನೀಡಿ ಎಂದು ಕೇಳುತ್ತಿದ್ದೇವಷ್ಟೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Fri, 2 February 24

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ