AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪರನ್ನ ಸಿಎಂ ಮಾಡಿದ್ದು ಸಿದ್ದರಾಮಯ್ಯ: ಸಿ.ಎಂ. ಇಬ್ರಾಹಿಂ ಗಂಭೀರ ಆರೋಪ

ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ 14ತಿಂಗಳಲ್ಲಿ ಶಾಸಕರನ್ನ ಮುಂಬೈಗೆ ಕಳಿಸಿ ಯಡಿಯುರಪ್ಪನ ತಂದಿದ್ದು ಸಿದ್ದರಾಮಯ್ಯ ಎಂದು ಸಿ.ಎಂ. ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

ಯಡಿಯೂರಪ್ಪರನ್ನ ಸಿಎಂ ಮಾಡಿದ್ದು ಸಿದ್ದರಾಮಯ್ಯ: ಸಿ.ಎಂ. ಇಬ್ರಾಹಿಂ ಗಂಭೀರ ಆರೋಪ
Siddaramaiah And Yediyurappa
TV9 Web
| Edited By: |

Updated on: Nov 20, 2022 | 9:20 PM

Share

ಬೆಳಗಾವಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೇರಿದೆ. ಯಡಿಯೂರಪ್ಪ (BS Yediyurappa) ಎರಡು ವರ್ಷ ಸಿಎಂ ಆಗಿ ಕೆಳಗಿಳಿದಿದ್ದಾಯ್ತು. ಆದ್ರೆ, ಇದೀಗ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ(C.M. Ibrahim) ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿ(Belagavi) ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಇಂದು(ನ.20) ಮಾತನಾಡಿದ ಇಬ್ರಾಹಿಂ, ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು H.D.ದೇವೇಗೌಡರ ಕಾಲಿಗೆ ಬಿದ್ದಿದ್ದರು. ಸಿಎಂ ಮಾಡಿದ 14 ತಿಂಗಳಲ್ಲೇ ಶಾಸಕರನ್ನ ಮುಂಬೈಗೆ ಕಳಿಸಿದ್ರು. ಮುಂಬೈಗೆ ಕಳಿಸಿ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಹೇಳಿದರು.

ದಿಗ್ವಿಜಯ ಸಿಂಗ್, ಅಶೋಕ್ ಗೆಹ್ಲೋಟ್ ದೇವೆಗೌಡರ ಕಾಲಿಗೆ ಬಿದ್ದು ನಿಮ್ಮ ಮಗನೆ ಮುಖ್ಯಮಂತ್ರಿ ಆಗಲಿ ಎಂದಿದ್ದರು. ಮುಖ್ಯಮಂತ್ರಿ ಮಾಡಿದ 14ತಿಂಗಳಲ್ಲಿ ಶಾಸಕರನ್ನ ಮುಂಬೈಗೆ ಕಳಿಸಿ ಯಡಿಯುರಪ್ಪನ ತಂದಿದ್ದು ಸಿದ್ದರಾಮಯ್ಯ ಎಂದರು.

ಕುಪ್ಪೇಂದ್ರ ರೆಡ್ಡಿಯವರನ್ನ ರಾಜ್ಯಸಭೆಗೆ ಕಳಿಸುವಾಗ ನಮ್ಮ ಎರಡು ಜನ ಶಾಸಕರಿಗೆ 10 ಕೋಟಿ ರೂ. ಕೊಟ್ಟು ವೋಟು ಹಾಕಿಸಿಕೊಂಡಿಲ್ವಾ. ನೀವು ಹಿಂದಗಡೆ ಬಾಗಿಲಿನಿಂದ ಹೋಗಿ ವೇಶ್ಯಾವಾಟಿಕೆ ಮಾಡುತ್ತೀರಿ. ನಾವು ಏನಿದ್ದರೂ ಎದುರಾಬದುರ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು.

ಕದ್ದು ಮುಚ್ಚಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ಸಿದ್ದರಾಮಯ್ಯಗೆ ಚುನಾವಣೆಗೆ ನಿಲ್ಲಲು ಈವರೆಗೂ ಕ್ಷೇತ್ರ ಸಿಗುತ್ತಿಲ್ಲ. ಸಿದ್ದರಾಮಯ್ಯನವರು ಈಗಲೂ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಚಿಮ್ಮನಕಟ್ಟಿಯವರು ಯಾರ ಬರ್ತಾರೆ ಬರಲಿ ಅಂತಾ ಕುಳಿತಿದ್ದಾರೆ. ಅಂದು ಚಿಮ್ಮನಕಟ್ಟಿ ಒಪ್ಪಿಸಿ ನಾನೇ ಅವನ ಮನೆ ಹಾಳು ಮಾಡಿದೆ. ಬಾದಾಮಿ ಕ್ಷೇತ್ರದಲ್ಲಿ ಚಿಮ್ಮನಕಟ್ಟಿಯನ್ನು ನಾನೇ ಮನವೊಲಿಸಿದ್ದೆ ಎಂದು ತಿಳಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?