AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಮಾತುಗಳಿಗೆಲ್ಲ ಸೊಪ್ಪು ಹಾಕುವ ಹಂತದಲ್ಲಿ ನಾನಿಲ್ಲ; ಡಿಕೆ ಶಿವಕುಮಾರ್​ ತಿರುಗೇಟು

ಎಲ್ಲ ಮುಖ್ಯಮಂತ್ರಿಗಳು ಕೆಲವು ಸಂಘಟನೆಗಳ ಅಧ್ಯಕ್ಷರಾಗಿದ್ದರು, ನನಗೂ ಅವಕಾಶ ಒದಗಿ ಬಂದಿತ್ತು. ರಾಜಕಾರಣ ಮಾಡುವವರು ಮಾಡಲಿ. ಅವರಿಗೆ ಒಳ್ಳೆದಾಗಲಿ. ಬರಗಾಲದಲ್ಲಿ ಹೇಗೆ ಕೆಲಸ ಮಾಡಬೇಕು ಅನ್ನುವುದು ನಮಗೆ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಕುಮಾರಸ್ವಾಮಿ ಮಾತುಗಳಿಗೆಲ್ಲ ಸೊಪ್ಪು ಹಾಕುವ ಹಂತದಲ್ಲಿ ನಾನಿಲ್ಲ; ಡಿಕೆ ಶಿವಕುಮಾರ್​ ತಿರುಗೇಟು
ಡಿಸಿಎಂ ಡಿಕೆ ಶಿವಕುಮಾರ್​
Malatesh Jaggin
| Updated By: ವಿವೇಕ ಬಿರಾದಾರ|

Updated on: Oct 21, 2023 | 2:43 PM

Share

ಬೆಂಗಳೂರು ಅ.21: ರಾಜ್ಯ ರಾಜಕಾರಣದಲ್ಲಿ ಜೆಡಿಎಸ್​ (JDS) ಮತ್ತು ಕಾಂಗ್ರೆಸ್ (Congress)​ ನಾಯಕರ ಮಧ್ಯೆ ವಾಗ್ಯುದ್ಧ ನಡೆದಿದೆ. ನಮ್ಮ ಹತ್ತಿರ ಬಂದು ತಿಂದು ಉಂಡು ಮಜಾ ಮಾಡಿಕೊಂಡಿರುವವರು ಅವರು, ಸಾಲ ತೀರಿಸಿಕೊಂಡು ಕುತ್ತಿಗೆ ಕುಯ್ಯಿಸಿಕೊಂಡು ಸಾಯುತ್ತಿರುವವರು ನಾವು ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರ ಮಾತುಗಳಿಗೆಲ್ಲ ಸೊಪ್ಪು ಹಾಕುವ ಹಂತದಲ್ಲಿ ನಾನಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ದೇಶದ ಆಸ್ತಿ, ಜನರು ಬದುಕು ಮತ್ತು ನಮ್ಮ ಸಂಸ್ಕೃತಿ. ಅವರ ಮಗ ನಟನೆ ಮಾಡುತ್ತಾನೆ, ಇವರು ದೇವಾಲಯಗಳು‌, ಚರ್ಚ್, ಮಸೀದಿ ಮತ್ತು ಕ್ರೀಡೆ ಅಂತ ಸಿನಿಮಾ ತಯಾರು ಮಾಡುತ್ತಾರೆ. ಎಲ್ಲ ಮುಖ್ಯಮಂತ್ರಿಗಳು ಕೆಲವು ಸಂಘಟನೆಗಳ ಅಧ್ಯಕ್ಷರಾಗಿದ್ದರು. ನನಗೂ ಬಂದಿತ್ತು. ರಾಜಕಾರಣ ಮಾಡುವವರು ಮಾಡಲಿ. ಅವರಿಗೆ ಒಳ್ಳೆದಾಗ್ಲಿ. ಬರಗಾಲದಲ್ಲಿ ಹೇಗೆ ಕೆಲಸ ಮಾಡಬೇಕು ಅನ್ನುವುದು ನಮಗೆ ಗೊತ್ತಿದೆ ಎಂದರು.

ದುಡ್ಡು ಮಾಡುವುದು, ಕೃತಕ ವಿದ್ಯುತ್ ಅಭಾವ ಸೃಷ್ಟಿ ಬಗ್ಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಹೆಚ್ಚಿನ ವಿದ್ಯುತ್​ ಉತ್ಪಾದನೆ ಮಾಡಿಲ್ಲ. ಪ್ರತೀ ವರ್ಷ ಶೇ 10 ರಿಂದ 15 ಹೆಚ್ಚಿಗೆ ಉತ್ಪಾದನೆ ಮಾಡಬೇಕು. ಅವರಿಗೇನಾದರು ರೈತರ ಬಗ್ಗೆ ಕಾಳಜಿ ಇದ್ದಿದ್ದರೇ ಅವರಿಗೆ ಗೊತ್ತಾಗುತ್ತಿತ್ತು. 192 ತಾಲೂಕುಗಳನ್ನು ಸುಮ್ಮನೇ ಘೋಷಣೆ ಮಾಡುತ್ತಿದ್ವಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸರ್ಕಾರದಿಂದ ಕೊಡುವ ಪ್ರಶಸ್ತಿಗಳಿಗೆ ಸಾಧಕರ ಆಯ್ಕೆಗೆ ಸಮಿತಿ ರಚನೆ; ಡಿಕೆ ಶಿವಕುಮಾರ್

ಯಾವ ಶಾಸಕರೂ ಪಕ್ಷದ ವಿಚಾರ ಪ್ರೆಸ್​ ಮುಂದೆ ಮಾತಾಡಬಾರದದು

ನಮ್ಮ ಪಕ್ಷದ ಯಾವ ಶಾಸಕರೂ ಕೂಡ ಪಕ್ಷದ ವಿಚಾರವನ್ನು ಪ್ರೆಸ್​ ಮುಂದೆ ಮಾತಾಡಬಾರದು. ಅಲ್ಲದೆ ಯಾವುದೇ ಬೆಂಬಲ, ಯಾರ ಬೆಂಬಲ ವಿಚಾರವನ್ನೂ ಕೂಡ ಮಾತನಾಡಬಾರದು. ನಾನಿದ್ದೀನಿ, ಮುಖ್ಯಮಂತ್ರಿಗಳಿದ್ದಾರೆ ಎಂದು ಸ್ವಪಕ್ಷದ ಶಾಸಕರಿಗೆ ಖಡಕ್​ ಸಂದೇಶ ರವಾನಿಸಿದರು.

2.5 ವರ್ಷದಲ್ಲಿ ಕ್ಯಾಬಿನೆಟ್ ಪುನರ್ ರಚನೆ ವಿಚಾರವಾಗಿ ಮಾತನಾಡಿದ ಅವರು ನಾನು ಒಂದು ದೊಡ್ಡ ಸಂಕಟದಲ್ಲಿ ತಗಲಾಗಿಕೊಂಡಿದ್ದೇನೆ. ಪಕ್ಷದ ವಿಚಾರವಾಗಿ ಏನ್ ಬೇಕು ಅದು ಚರ್ಚೆಯಾಗಿದೆ. ಕಲವೊಂದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಕ್ಕೆ ಆಗುವುದಿಲ್ಲ. ಸದ್ಯಕ್ಕೆ ಆ ರೀತಿಯ ಮಾಹಿತಿ ನನ್ನ ಬಳಿ ಇಲ್ಲ ಎಂದು ಜಾರಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿನಿಕ್​  

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ