AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತೀಶ್ ಕುಮಾರ್​​ನ್ನು ಉಪರಾಷ್ಟ್ರಪತಿ ಮಾಡಿ ಎಂದಿದ್ದರು ಜೆಡಿಯು ನಾಯಕರು: ಬಿಜೆಪಿ

ರಾಜ್ಯಸಭಾ ಸಂಸದರಾಗುವ ಮೊದಲು ನಿತೀಶ್ ಕುಮಾರ್ ಅವರ ಉಪ ಮುಖ್ಯಮಂತ್ರಿಯಾಗಿದ್ದ ಮೋದಿ, ಜನತಾ ದಳ (ಯುನೈಟೆಡ್) ನಾಯಕರು ಕುಮಾರ್ ಅವರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೋದರೆ ನೀವು ಬಿಹಾರ ಮುಖ್ಯಮಂತ್ರಿಯಾಗಬಹುದು ಎಂಬ...

ನಿತೀಶ್ ಕುಮಾರ್​​ನ್ನು ಉಪರಾಷ್ಟ್ರಪತಿ ಮಾಡಿ ಎಂದಿದ್ದರು ಜೆಡಿಯು ನಾಯಕರು: ಬಿಜೆಪಿ
ನಿತೀಶ್ ಕುಮಾರ್- ತೇಜಸ್ವಿ ಯಾದವ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 10, 2022 | 5:59 PM

Share

ಪಟನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಉಪರಾಷ್ಟ್ರಪತಿಯಾಗಬೇಕೆಂದು ಅವರ ಪಕ್ಷದ ಕೆಲವರು ಬಯಸಿದ್ದರು ಎಂದು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ (Sushil Kumar Modi) ಹೇಳಿದ್ದಾರೆ. ರಾಜ್ಯಸಭಾ ಸಂಸದರಾಗುವ ಮೊದಲು ನಿತೀಶ್ ಕುಮಾರ್ ಅವರ ಉಪ ಮುಖ್ಯಮಂತ್ರಿಯಾಗಿದ್ದ ಮೋದಿ, ಜನತಾ ದಳ (ಯುನೈಟೆಡ್) (Janata Dal (United) ನಾಯಕರು ಕುಮಾರ್ ಅವರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೋದರೆ ನೀವು ಬಿಹಾರ ಮುಖ್ಯಮಂತ್ರಿಯಾಗಬಹುದು ಎಂಬ ಯೋಜನೆಯೊಂದಿಗೆ ನನ್ನನ್ನು ಸಂಪರ್ಕಿಸಿದ್ದರು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ ಹೇಳಿದ್ದಾರೆ. ಆದಾಗ್ಯೂ ಮೋದಿಯವರ ಈ ಆರೋಪಗಳಿಗೆ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಇನ್ನೂ ಪ್ರತಿಕ್ರಿಯಿಸಿಲ್ಲ. ಕೆಲವು ಜೆಡಿಯು ನಾಯಕರು ಬಂದು, ನಿತೀಶ್ ಕುಮಾರ್ ಅವರನ್ನು ಉಪ ರಾಷ್ಟ್ರಪತಿಯನ್ನಾಗಿ ಮಾಡಿ. ಹಾಗಾದರೆ ನೀವು ಬಿಹಾರದಲ್ಲಿ ಅಧಿಕಾರಕ್ಕೇರಬಹುದು ಎಂದು ಹೇಳಿರುವುದಾಗಿ ಮೋದಿ ಹೇಳಿದ್ದಾರೆ. ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮೋದಿ ಈ ಮಾತನ್ನು ಹೇಳಿದ್ದಾರೆ.

ಯಾವುದೇ ರಾಷ್ಟ್ರೀಯ ಮಹತ್ವಾಕಾಂಕ್ಷೆಯನ್ನು ಹೊಂದಿಲ್ಲ ಎಂದು ಹೇಳಿದ ನಿತೀಶ್ ಕುಮಾರ್, ಬಿಜೆಪಿಯ ತಂತ್ರದಿಂದ ತಮ್ಮ ಪಕ್ಷವನ್ನು ಉಳಿಸಲು ಈ ರೀತಿ ಮಾಡಿದ್ದೇನೆ ಎಂದು ಹೇಳಿದ್ದಾರೆ. “ನಾನು ಇರುತ್ತೇನೆ ಅಥವಾ ಬಿಡುತ್ತೇನೆ, ಜನರು ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, 2014 ರಲ್ಲಿ ಬಂದವರು 2024 ರಲ್ಲಿ ಗೆಲ್ಲುತ್ತಾರೆಯೇ ಎಂಬುದು ಪ್ರಶ್ನೆ. ಕಳೆದ ಒಂದೂವರೆ ತಿಂಗಳಲ್ಲಿ ನಾನು ಮಾಧ್ಯಮಗಳೊಂದಿಗೆ ಮಾತನಾಡುವುದನ್ನು ನಿಲ್ಲಿಸಿದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಎನ್‌ಡಿಎಗೆ ಮತ ಹಾಕಿದ ಬಿಹಾರದ ಜನತೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಅವಮಾನಿಸಿದ್ದಾರೆ ಎಂದು ಮೋದಿ ಹೇಳಿದರು. “ತೇಜಸ್ವಿ (ಯಾದವ್) ಅವರು ಉಪ ಮುಖ್ಯಮಂತ್ರಿಯಾಗಿ ಬಿಹಾರದ ಹೊಸ ಸರ್ಕಾರವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನಾವು ನೋಡಲು ಬಯಸುತ್ತೇವೆ. ಮುಂದಿನ ಚುನಾವಣೆಯ ಮೊದಲು ಸರ್ಕಾರವು ಪತನವಾಗಲಿದೆ ಎಂದಿದ್ದಾರೆ ಮೋದಿ.

ಇದನ್ನೂ ಓದಿ
Image
Big News: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ
Image
ಬಿಹಾರದ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್​​ ಪ್ರಮಾಣವಚನ ಸ್ವೀಕಾರ; ತೇಜಸ್ವಿ ಯಾದವ್​ಗೆ ಡಿಸಿಎಂ ಪಟ್ಟ
Image
Nitish Kumar: ನಿತೀಶ್ ಕುಮಾರ್​ಗೆ ಪ್ರಧಾನಿ ಗಾದಿಯ ಕನಸು; ‘ಪಲ್ಟಿ ರಾಮ’ನ ನಂಬಲು ಪ್ರತಿಪಕ್ಷಗಳಿಗೆ ಭಯ
Image
ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಪತನ; ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಮಹಾರಾಷ್ಟ್ರದಲ್ಲಿ ಶಿವಸೇನಾಯನ್ನು ವಿಭಜಿಸಲು ನಾವು ಪ್ರಯತ್ನಿಸಲಿಲ್ಲ ಎಂದು ಹೇಳಿದ ಮೋದಿ, ಜೆಡಿಯುವನ್ನು ವಿಭಜಿಸಲು ಬಿಜೆಪಿ ಕೆಲಸ ಮಾಡುತ್ತಿದೆ ಎಂಬ ಜೆಡಿಯು ಆರೋಪಗಳನ್ನು ನಿರಾಕರಿಸಿದರು. ನಿತೀಶ್ ಅವರು ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ)ವನ್ನು ತೊಡೆದುಹಾಕುತ್ತಾರೆ ಮತ್ತು ಲಾಲು ಯಾದವ್ ಅವರ ಅನಾರೋಗ್ಯದ ಲಾಭವನ್ನು ಪಡೆದುಕೊಂಡು ಅದನ್ನು ವಿಭಜಿಸಲು ಪ್ರಯತ್ನಿಸುತ್ತಾರೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ.

ಆರ್‌ಜೆಡಿಯ ತೇಜಸ್ವಿ ಯಾದವ್ ನಿತೀಶ್ ಕುಮಾರ್ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ. 2020ರ ಫಲಿತಾಂಶದ ನಂತರ ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ. ಆದರೆ ನನ್ನ ಮೇಲೆ ಒತ್ತಡ ಹೇರಲಾಯಿತು. ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಪಕ್ಷದ ಜನರನ್ನು ಕೇಳಿ. ನಂತರ ಏನಾಯಿತು ಎಂದು ನೀವು ನೋಡುತ್ತೀರಿ. ನಾನು ಎರಡು ತಿಂಗಳಿನಿಂದ ನಿಮ್ಮೊಂದಿಗೆ ಮಾತನಾಡಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾಧ್ಯಮವರ ಜತೆ ಮಾತನಾಡಿದ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ