AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalyan Singh: ಅಯೋಧ್ಯೆ ರಾಮ ಮಂದಿರದ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರು; ರಾಮ ಭಕ್ತನಿಗೆ ಸರ್ಕಾರಿ ಗೌರವ

Kalyan Singh Funeral: ಉತ್ತರ ಪ್ರದೇಶದ ಅಯೋಧ್ಯೆ, ಲಕ್ನೋ ಸೇರಿದಂತೆ 6 ಜಿಲ್ಲೆಗಳ ರಸ್ತೆಗಳಿಗೆ ಕಲ್ಯಾಣ್ ಸಿಂಗ್ ಅವರ ಹೆಸರಿಡಬೇಕೆಂದು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

Kalyan Singh: ಅಯೋಧ್ಯೆ ರಾಮ ಮಂದಿರದ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರು; ರಾಮ ಭಕ್ತನಿಗೆ ಸರ್ಕಾರಿ ಗೌರವ
ಕಲ್ಯಾಣ್​ ಸಿಂಗ್ (ಸಂಗ್ರಹ ಚಿತ್ರ)
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 23, 2021 | 4:02 PM

ಲಕ್ನೋ: ಅನಾರೋಗ್ಯದಿಂದ ಸಾವನ್ನಪ್ಪಿರುವ ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (Kalyan Singh) ಅವರ ಅಂತ್ಯಸಂಸ್ಕಾರ ಇಂದು ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅಲಿಘಢ ವಿಮಾನ ನಿಲ್ದಾಣಕ್ಕೆ ಕಲ್ಯಾಣ್ ಸಿಂಗ್ ಅವರ ಹೆಸರನ್ನಿಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅದರ ಬದಲಾಗಿ ಉತ್ತರ ಪ್ರದೇಶದ ಅಯೋಧ್ಯೆ, ಲಕ್ನೋ ಸೇರಿದಂತೆ 6 ಜಿಲ್ಲೆಗಳ ರಸ್ತೆಗಳಿಗೆ ಕಲ್ಯಾಣ್ ಸಿಂಗ್ ಅವರ ಹೆಸರಿಡಬೇಕೆಂದು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಇಂದು ಘೋಷಣೆ ಮಾಡಿದ್ದಾರೆ. ಕಲ್ಯಾಣ್ ಸಿಂಗ್ ಮುಖ್ಯಮಂತ್ರಿಯಾಗಿದ್ದಾಗಲೇ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು. ಬಿಜೆಪಿಯ ಕ್ರಾಂತಿಕಾರಿ ನಾಯಕರಾಗಿದ್ದ ಕಲ್ಯಾಣ್ ಸಿಂಗ್ ಸ್ಮರಣಾರ್ಥ ಉತ್ತರ ಪ್ರದೇಶದ 6 ಜಿಲ್ಲೆಗಳ ಪ್ರಮುಖ ರಸ್ತೆಗಳಿಗೆ ಕಲ್ಯಾಣ್ ಸಿಂಗ್ ಹೆಸರನ್ನಿಡಲು ಸರ್ಕಾರ ತೀರ್ಮಾನಿಸಿದೆ.

ಅಯೋಧ್ಯೆಯ ರಾಮಜನ್ಮಭೂಮಿಗೆ ತೆರಳುವ ರಸ್ತೆ ಮಾರ್ಗಕ್ಕೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಲ್ಯಾಣ್ ಸಿಂಗ್ ಅವರೇ ನಮಗೆ ಸ್ಫೂರ್ತಿ. ರಾಮ ಮಂದಿರಕ್ಕಾಗಿ ಕಲ್ಯಾಣ್ ಸಿಂಗ್ ಮಾಡಿದ ತ್ಯಾಗ ಮರೆಯಲಾಗದು. ಅವರ ನೆನಪಿನಲ್ಲಿ ರಸ್ತೆಗಳಿಗೆ ಅವರ ಹೆಸರನ್ನಿಡಲಾಗುವುದು ಎಂದು ಉತ್ತರ ಪ್ರದೇಶದ ಡಿಸಿಎಂ ತಿಳಿಸಿದ್ದಾರೆ.

89 ವರ್ಷವಾಗಿದ್ದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ಸಾವನ್ನಪ್ಪಿದ್ದರು. ಅವರು ಲಕ್ನೋದಲ್ಲಿರುವ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್​ನಲ್ಲಿದ್ದ ಅವರಿಗೆ ಮೂತ್ರ ವಿಸರ್ಜನೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಡಯಾಲಿಸಿಸ್​ ಮಾಡಲಾಗುತ್ತಿತ್ತು. ಅದಾದ ಮರುದಿನವೇ ಅವರು ಮೃತಪಟ್ಟಿದ್ದರು. ಕಲ್ಯಾಣ್​ ಸಿಂಗ್​ ಅವರ ಅಂತ್ಯಕ್ರಿಯೆ ಇಂದು ನರೋರಾದಲ್ಲಿರುವ ಗಂಗಾ ನದಿಯ ದಡದಲ್ಲಿ ನಡೆಯಲಿದೆ.

ಕಲ್ಯಾಣ್ ಸಿಂಗ್ ಅವರ ರಕ್ತದೊತ್ತಡ ಕಡಿಮೆಯಾಗಿದ್ದು, ಮೂತ್ರ ವಿಸರ್ಜನೆ ಮಾಡಲು ಸಾಧ್ಯವಾಗುತ್ತಿರಲ್ಲ. ಹೀಗಾಗಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಹಲವು ದಿನಗಳಿಂದ ಕಲ್ಯಾಣ್ ಸಿಂಗ್ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಅನೇಕರು ಆಸ್ಪತ್ರೆಗೆ ತೆರಳಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದರು. ಕಲ್ಯಾಣ್ ಸಿಂಗ್ ಅವರನ್ನು ಮೊದಲು ದೆಹಲಿಯ ಆರ್​ಎಮ್​ಎಲ್ ಇನ್​ಸ್ಟಿಟ್ಯೂಟ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

89 ವರ್ಷದ ಕಲ್ಯಾಣ್ ಸಿಂಗ್ ಅವರ ದೇಹ ಇದ್ದಕ್ಕಿದ್ದಂತೆ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಲಕ್ನೋಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಕೂಡ ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನ ಪಡೆದಿದ್ದರು. ಬಾಬ್ರಿ ಮಸೀದಿ ಧ್ವಂಸದ ವೇಳೆ ಉತ್ತರ ಪ್ರದೇಶದ ಸಿಎಂ ಆಗಿದ್ದ ಕಲ್ಯಾಣ್ ಸಿಂಗ್ ಪ್ರಖರ ಹಿಂದೂವಾದಿ ಎಂದೇ ಹೆಸರಾಗಿದ್ದರು. ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Kalyan Singh: ಕಲ್ಯಾಣ್ ಸಿಂಗ್ ಅಂತಿಮ ದರ್ಶನ; ರಾಷ್ಟ್ರಧ್ವಜದ ಮೇಲೆ ಪಕ್ಷದ ಬಾವುಟ ಹೊದಿಸಿ ಟೀಕೆಗೀಡಾದ ಬಿಜೆಪಿ

Hindutva Icon Kalyan Singh: ಕರಸೇವಕರ ಮೇಲೆ ಗುಂಡು ಹಾರಿಸಲು ಅನುಮತಿಸದೆ CM ಕುರ್ಚಿ ಬಿಟ್ಟೆದ್ದಿದ್ದ ಕಲ್ಯಾಣ್​ ಸಿಂಗ್

(Ayodhya Ram Temple Road to be Renamed after Kalyan Singh Uttar Pradesh Government announces)

ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ