AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಗಾಂಧಿ ಪಾತ್ರದಲ್ಲಿ ಕಿರಿಕ್ ನಟಿ ಕಂಗನಾ ರಣಾವತ್​; ಹೊಸ ಸಿನಿಮಾ ಹೆಸರು ‘ಎಮರ್ಜೆನ್ಸಿ’

Indira Gandhi | Emergency: ಮೊದಲಿನಿಂದಲೂ ಕಂಗನಾ ಅವರು ಬಿಜೆಪಿ ಪರವಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಈಗ ಅವರು ಕಾಂಗ್ರೆಸ್​ ನಾಯಕಿ ಇಂದಿರಾ ಗಾಂಧಿ ಬಗ್ಗೆ ಸಿನಿಮಾ ಮಾಡುತ್ತಿರುವುದರಿಂದ ವಿರೋಧ ವ್ಯಕ್ತವಾದರೂ ಅಚ್ಚರಿ ಏನಿಲ್ಲ.

ಇಂದಿರಾ ಗಾಂಧಿ ಪಾತ್ರದಲ್ಲಿ ಕಿರಿಕ್ ನಟಿ ಕಂಗನಾ ರಣಾವತ್​; ಹೊಸ ಸಿನಿಮಾ ಹೆಸರು ‘ಎಮರ್ಜೆನ್ಸಿ’
ಕಂಗನಾ ರಣಾವತ್​, ಇಂದಿರಾ ಗಾಂಧಿ
ಮದನ್​ ಕುಮಾರ್​
|

Updated on: Jun 24, 2021 | 9:33 AM

Share

ದಿನದಿಂದ ದಿನಕ್ಕೆ ನಟಿ ಕಂಗನಾ ರಣಾವತ್​ ಅವರ ಸಾಹಸ ಹೆಚ್ಚುತ್ತಲೇ ಇದೆ. ಒಂದು ಕಡೆ ವಿವಾದಗಳನ್ನು ನಿಭಾಯಿಸಿಕೊಳ್ಳುತ್ತ, ಇನ್ನೊಂದು ಕಡೆ ಸಿನಿಮಾಗಳನ್ನು ಮಾಡುತ್ತ ಅವರು ಮುಂದೆ ಸಾಗುತ್ತಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅದರ ನಡುವೆ ಒಂದು ಬಹುನಿರೀಕ್ಷಿತ ಚಿತ್ರಕ್ಕೆ ಅವರು ಚಾಲನೆ ನೀಡಲು ಸಜ್ಜಾಗಿದ್ದಾರೆ. ಆ ಸಿನಿಮಾ ಹೆಸರು ‘ಎಮರ್ಜೆನ್ಸಿ’. ಹೆಸರೇ ಸೂಚಿಸುವಂತೆ ಇದು ಇಂದಿರಾ ಗಾಂಧಿ ಅವರ ಕುರಿತ ಸಿನಿಮಾ!

ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಕಂಗನಾ ಮಾಹಿತಿ ನೀಡಿದ್ದಾರೆ. ಇಂದಿರಾ ಗಾಂಧಿ ಪಾತ್ರಕ್ಕಾಗಿ ಅವರು ಸಜ್ಜಾಗುತ್ತಿರುವ ಫೋಟೋವನ್ನು ಅಪ್​ಲೋಡ್​ ಮಾಡಿಕೊಂಡಿದ್ದಾರೆ. ಅಚ್ಚರಿ ಏನೆಂದರೆ, ಈ ಚಿತ್ರಕ್ಕೆ ಅವರೇ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಅವರು ‘ಮಣಿಕರ್ಣಿಕಾ’ ಚಿತ್ರವನ್ನು ನಿರ್ದೇಶಿಸಿದ್ದರು. ಈಗ ಅವರ ನಿರ್ದೇಶನದ ಎರಡನೇ ಚಿತ್ರವಾಗಿ ‘ಎಮರ್ಜೆನ್ಸಿ’ ಮೂಡಿಬರಲಿದೆ. ಅಲ್ಲದೆ, ನಿರ್ಮಾಣದ ಹೊಣೆಯನ್ನೂ ಅವರೇ ಹೊತ್ತುಕೊಂಡಿದ್ದಾರೆ.

‘ಮತ್ತೊಮ್ಮೆ ನಿರ್ದೇಶಕಿಯ ಕ್ಯಾಪ್​ ಧರಿಸಲು ಖುಷಿ ಎನಿಸುತ್ತದೆ. ಈ ಚಿತ್ರಕ್ಕಾಗಿ ಎರಡು ವರ್ಷಕ್ಕೂ ಅಧಿಕ ಸಮಯ ಕೆಲಸ ಮಾಡಿದ ಬಳಿಕ ಅನಿಸುತ್ತಿರುವುದು ಏನೆಂದರೆ, ಈ ಚಿತ್ರಕ್ಕೆ ನನ್ನ ಹೊರತಾಗಿ ಬೇರೆ ಯಾರೂ ಕೂಡ ಚೆನ್ನಾಗಿ ನಿರ್ದೇಶನ ಮಾಡಲು ಸಾಧ್ಯವಿಲ್ಲ. ಈ ಸಿನಿಮಾಗಾಗಿ ನನ್ನ ನಟನೆಯ ಕೆಲವು ಬೇರೆ ಪ್ರಾಜೆಕ್ಟ್​ಗಳನ್ನು ತ್ಯಾಗ ಮಾಡಬೇಕಾಗಿದೆ. ಆದರೂ ನಾನು ಈ ಚಿತ್ರ ಮಾಡಲು ನಿರ್ಧರಿಸಿದ್ದೇನೆ. ತುಂಬ ಎಗ್ಸೈಟ್​ ಆಗಿದ್ದೇನೆ. ಇದು ಒಂದು ಅದ್ಭುತ ಜರ್ನಿ ಆಗಿರಲಿದೆ’ ಎಂದು ಕಂಗನಾ ಹೇಳಿದ್ದಾರೆ.

ರಾಜಕಾರಣಿಯ ಪಾತ್ರ ಮಾಡುವುದು ಕಂಗನಾಗೆ ಹೊಸದೇನಲ್ಲ. ಈಗಾಗಲೇ ಅವರು ‘ತಲೈವಿ’ ಸಿನಿಮಾದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆದರೆ ಲಾಕ್​ಡೌನ್ ಮತ್ತು ಕೊರೊನಾ ವೈರಸ್​ ಎರಡನೇ ಅಲೆ ಕಾರಣದಿಂದ ಆ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ.

ಮೊದಲಿನಿಂದಲೂ ಕಂಗನಾ ಅವರು ಬಿಜೆಪಿ ಪರವಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಈಗ ಅವರು ಕಾಂಗ್ರೆಸ್​ ನಾಯಕಿ ಇಂದಿರಾ ಗಾಂಧಿ ಬಗ್ಗೆ ಸಿನಿಮಾ ಮಾಡುತ್ತಿರುವುದರಿಂದ ವಿರೋಧ ವ್ಯಕ್ತವಾದರೂ ಅಚ್ಚರಿ ಏನಿಲ್ಲ. ಅಲ್ಲದೆ, ಅವರು ಇಂದಿರಾ ಗಾಂಧಿಯ ಪಾತ್ರವನ್ನು ಯಾವ ರೀತಿ ಬಿಂಬಿಸಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಕೂಡ ಜನರಲ್ಲಿ ಮೂಡಿದೆ.

ಇದನ್ನೂ ಓದಿ:

‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾ ರಣಾವತ್​​ಗೆ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು

Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

Follow Us
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು