AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂಬಿ ಪಾಟೀಲ್​

ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡಿಲ್ಲ. ವಾರ್ನ್  ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂ.ಬಿ.ಪಾಟೀಲ್​​ ಹೇಳಿದರು.

ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂಬಿ ಪಾಟೀಲ್​
ಎಂ.ಬಿ ಪಾಟೀಲ್
ಗಂಗಾಧರ​ ಬ. ಸಾಬೋಜಿ
|

Updated on:May 24, 2023 | 2:43 PM

Share

ಮುಖ್ಯಾಂಶಗಳು

  • ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡಿಲ್ಲ
  • ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ಎಂ.ಬಿ.ಪಾಟೀಲ್
  • ಎಂ.ಬಿ.ಪಾಟೀಲ್​ರೇ ಬನ್ನಿ ಅಂತಾ ಡಿ.ಕೆ.ಸುರೇಶ್ ಕರೆದಿದ್ದು ನಿಜ

ಬೆಂಗಳೂರು: ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡಿಲ್ಲ. ವಾರ್ನ್  ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂ.ಬಿ.ಪಾಟೀಲ್ (MB Patil)​ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 6 ಬಾರಿ ಶಾಸಕನಾಗಿದ್ದೇನೆ, ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ-ತಾಯಿನೇ ಒಂದೂ ದಿನ ನನಗೆ ವಾರ್ನ್ ಮಾಡಿಲ್ಲ. ವಾರ್ನಿಂಗ್ ಎಂಬ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ವಾರ್ನಿಂಗ್ ಕೊಡ್ತೇವೆ ವಿನಃ ನಾವು ತೆಗೆದುಕೊಳ್ಳಲ್ಲ. ಎಂ.ಬಿ.ಪಾಟೀಲ್​ ಯಾರಿಗೂ ಹೆದರಲ್ಲ, ನಾನು ವಿಜಯಪುರದವನು ಎಂದಿದ್ದಾರೆ.

ವಿಧಾನಸೌಧದಲ್ಲಿ ಬಹಳ ಪ್ರೀತಿಯಿಂದ ಎಂ.ಬಿ.ಪಾಟೀಲ್​ರೇ ಅಂತಾ ಸಂಸದ ಡಿ.ಕೆ.ಸುರೇಶ್ ಕರೆದಿದ್ದು ನಿಜ. ಅವರ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಕಚೇರಿಯೊಳಗೆ ಬನ್ನಿ ಮಾತಾಡೋಣ ಅಂತಾ ಹೇಳಿ ಹೋದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಎದುರಿಗೆ ಸಿಕ್ಕ ಎಂ.ಬಿ. ಪಾಟೀಲ್​ಗೆ ಗುರಾಯಿಸಿ ವಾರ್ನ್ ಮಾಡಿದ ಡಿಕೆ ಸುರೇಶ್: ಏನ್ರೀ ಇದು ರೌಡಿಸಂ ಎಂದ ಶಾಸಕರು

ಸಚಿವ ಎಂ.ಬಿ.ಪಾಟೀಲ್​ಗೆ ಡಿಕೆ ಸುರೇಶ್ ಖಡಕ್ ಎಚ್ಚರಿಕೆ 

ಐದು ವರ್ಷ ಸಿದ್ದರಾಮಯ್ಯರೇ ಸಿಎಂ, ಡಿಕೆ ಶಿವಕುಮಾರ್​ ಡಿಸಿಎಂ. ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ಎನ್ನುವ ಮಾತೇ ಇಲ್ಲ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಸಚಿವ ಎಂ.ಬಿ ಪಾಟೀಲ್  ಆಡಿದ ಈ ಮಾತುಗಳು ಕಾಂಗ್ರೆಸ್​ನಲ್ಲಿ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಸಂಸದ ಡಿಕೆ ಸುರೇಶ್ ಅವರು ಎಂಬಿ ಪಾಟೀಲ್​ಗೆ ನೇರವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಇಂದು(ಮೇ 23) ಮಾಧ್ಯಮಗಳ ಜೊತೆ ಮಾಡಿದ ಡಿಕೆ ಸುರೇಶ್, ಇದೆಲ್ಲ ಬೇಡ ಅಂತ ಸಚಿವ ಎಂ.ಬಿ.ಪಾಟೀಲ್​ಗೆ ಹೇಳಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಎನ್ನುವ ಎಂಬಿ ಪಾಟೀಲ್​ ಹೇಳಿಕೆಗೆ ಖಡಕ್​ ಎಚ್ಚರಿಕೆ ನೀಡಿದ ಡಿಕೆ ಸುರೇಶ್​

ಎಂ.ಬಿ.ಪಾಟೀಲ್​ಗೆ ಹೇಳಿಕೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಅಂದ್ರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಿ. ಎಂ.ಬಿ.ಪಾಟೀಲ್​ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ನೀಡಲು ಬರುತ್ತೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು. ಈ ಮೂಲಕ ಬಹಿರಂಗವಅಗಿಯೇ ಎಂಬಿ ಪಾಟೀಲ್​ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದರು.

ಎಂ.ಬಿ ಪಾಟೀಲ್ ವಿರುದ್ಧ ಸಂಸದ ಡಿ.ಕೆ ಸುರೇಶ್ ಕಿಡಿ

ಎಂ.ಬಿ.ಪಾಟೀಲ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದ್ದು, M.B.ಪಾಟೀಲ್ ಕೂಡ ಸಿಎಂ ಆಗಲಿ, ಯಾರೂ ಬೇಡ ಎಂದಿಲ್ಲ. ಈ ಹಿಂದೆ ಸಿದ್ದರಾಮಯ್ಯ 5 ವರ್ಷ ರಾಜ್ಯದ ಸಿಎಂ ಆಗಿದ್ದರು. ಈಗ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಐದು ವರ್ಷ ಬೇಕಾದರೂ ಸಿದ್ದರಾಮಯ್ಯ ಸಿಎಂ ಆಗಿರಲಿ. ಮತ್ತೆ 5 ವರ್ಷ ಕಾಲ ಸಿಎಂ ಆಗಿ, ಯಾರೂ ಬೇಡ ಎಂದಿಲ್ಲ. ಎಂ.ಬಿ.ಪಾಟೀಲ್ ಕೂಡ ಸಿಎಂ ಆಗಲಿ ಬಿಡಿ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:41 pm, Wed, 24 May 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ