AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂಬಿ ಪಾಟೀಲ್​

ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡಿಲ್ಲ. ವಾರ್ನ್  ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂ.ಬಿ.ಪಾಟೀಲ್​​ ಹೇಳಿದರು.

ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂಬಿ ಪಾಟೀಲ್​
ಎಂ.ಬಿ ಪಾಟೀಲ್
ಗಂಗಾಧರ​ ಬ. ಸಾಬೋಜಿ
|

Updated on:May 24, 2023 | 2:43 PM

Share

ಬೆಂಗಳೂರು: ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡಿಲ್ಲ. ವಾರ್ನ್  ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂ.ಬಿ.ಪಾಟೀಲ್ (MB Patil)​ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 6 ಬಾರಿ ಶಾಸಕನಾಗಿದ್ದೇನೆ, ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ-ತಾಯಿನೇ ಒಂದೂ ದಿನ ನನಗೆ ವಾರ್ನ್ ಮಾಡಿಲ್ಲ. ವಾರ್ನಿಂಗ್ ಎಂಬ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ವಾರ್ನಿಂಗ್ ಕೊಡ್ತೇವೆ ವಿನಃ ನಾವು ತೆಗೆದುಕೊಳ್ಳಲ್ಲ. ಎಂ.ಬಿ.ಪಾಟೀಲ್​ ಯಾರಿಗೂ ಹೆದರಲ್ಲ, ನಾನು ವಿಜಯಪುರದವನು ಎಂದಿದ್ದಾರೆ.

ವಿಧಾನಸೌಧದಲ್ಲಿ ಬಹಳ ಪ್ರೀತಿಯಿಂದ ಎಂ.ಬಿ.ಪಾಟೀಲ್​ರೇ ಅಂತಾ ಸಂಸದ ಡಿ.ಕೆ.ಸುರೇಶ್ ಕರೆದಿದ್ದು ನಿಜ. ಅವರ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಕಚೇರಿಯೊಳಗೆ ಬನ್ನಿ ಮಾತಾಡೋಣ ಅಂತಾ ಹೇಳಿ ಹೋದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಎದುರಿಗೆ ಸಿಕ್ಕ ಎಂ.ಬಿ. ಪಾಟೀಲ್​ಗೆ ಗುರಾಯಿಸಿ ವಾರ್ನ್ ಮಾಡಿದ ಡಿಕೆ ಸುರೇಶ್: ಏನ್ರೀ ಇದು ರೌಡಿಸಂ ಎಂದ ಶಾಸಕರು

ಸಚಿವ ಎಂ.ಬಿ.ಪಾಟೀಲ್​ಗೆ ಡಿಕೆ ಸುರೇಶ್ ಖಡಕ್ ಎಚ್ಚರಿಕೆ 

ಐದು ವರ್ಷ ಸಿದ್ದರಾಮಯ್ಯರೇ ಸಿಎಂ, ಡಿಕೆ ಶಿವಕುಮಾರ್​ ಡಿಸಿಎಂ. ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ಎನ್ನುವ ಮಾತೇ ಇಲ್ಲ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಸಚಿವ ಎಂ.ಬಿ ಪಾಟೀಲ್  ಆಡಿದ ಈ ಮಾತುಗಳು ಕಾಂಗ್ರೆಸ್​ನಲ್ಲಿ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಸಂಸದ ಡಿಕೆ ಸುರೇಶ್ ಅವರು ಎಂಬಿ ಪಾಟೀಲ್​ಗೆ ನೇರವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಇಂದು(ಮೇ 23) ಮಾಧ್ಯಮಗಳ ಜೊತೆ ಮಾಡಿದ ಡಿಕೆ ಸುರೇಶ್, ಇದೆಲ್ಲ ಬೇಡ ಅಂತ ಸಚಿವ ಎಂ.ಬಿ.ಪಾಟೀಲ್​ಗೆ ಹೇಳಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಎನ್ನುವ ಎಂಬಿ ಪಾಟೀಲ್​ ಹೇಳಿಕೆಗೆ ಖಡಕ್​ ಎಚ್ಚರಿಕೆ ನೀಡಿದ ಡಿಕೆ ಸುರೇಶ್​

ಎಂ.ಬಿ.ಪಾಟೀಲ್​ಗೆ ಹೇಳಿಕೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಅಂದ್ರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಿ. ಎಂ.ಬಿ.ಪಾಟೀಲ್​ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ನೀಡಲು ಬರುತ್ತೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು. ಈ ಮೂಲಕ ಬಹಿರಂಗವಅಗಿಯೇ ಎಂಬಿ ಪಾಟೀಲ್​ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದರು.

ಎಂ.ಬಿ ಪಾಟೀಲ್ ವಿರುದ್ಧ ಸಂಸದ ಡಿ.ಕೆ ಸುರೇಶ್ ಕಿಡಿ

ಎಂ.ಬಿ.ಪಾಟೀಲ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದ್ದು, M.B.ಪಾಟೀಲ್ ಕೂಡ ಸಿಎಂ ಆಗಲಿ, ಯಾರೂ ಬೇಡ ಎಂದಿಲ್ಲ. ಈ ಹಿಂದೆ ಸಿದ್ದರಾಮಯ್ಯ 5 ವರ್ಷ ರಾಜ್ಯದ ಸಿಎಂ ಆಗಿದ್ದರು. ಈಗ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಐದು ವರ್ಷ ಬೇಕಾದರೂ ಸಿದ್ದರಾಮಯ್ಯ ಸಿಎಂ ಆಗಿರಲಿ. ಮತ್ತೆ 5 ವರ್ಷ ಕಾಲ ಸಿಎಂ ಆಗಿ, ಯಾರೂ ಬೇಡ ಎಂದಿಲ್ಲ. ಎಂ.ಬಿ.ಪಾಟೀಲ್ ಕೂಡ ಸಿಎಂ ಆಗಲಿ ಬಿಡಿ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:41 pm, Wed, 24 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್