AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Nag: ಇಂದು ಸಂಜೆ ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್

ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Anant Nag: ಇಂದು ಸಂಜೆ ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್
ಅನಂತ್ ನಾಗ್ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
| Edited By: |

Updated on:Feb 22, 2023 | 9:57 AM

Share

ಬೆಂಗಳೂರು: ಹಿರಿಯ ಚಲನಚಿತ್ರ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ (Anant Nag) ಇಂದು (ಫೆಬ್ರವರಿ 22) ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ (BJP) ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ನಾಯಕರು ಕರ್ನಾಟಕದಲ್ಲಿ ಭಾರೀ ಪ್ರಚಾರದಲ್ಲಿ ತೊಡಗಿದ್ದಾರೆ. ನಡ್ಡಾ ಅವರು ಮಂಗಳೂರು, ಉಡುಪಿ, ಚಕ್ಕಮಗಳೂರು ಹಾಸನದ ಕಾರ್ಯಕ್ರಮಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾಗಿಯಾಗಿದ್ದರು. ಮುಂದಿನ ಸೋಮವಾರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ.

ಈ ಮಧ್ಯೆ, ಮಂಡ್ಯದಲ್ಲಿಂದು ಬಿಜೆಪಿ ಯುವ ಸಮಾವೇಶ ನಡೆಯಲಿದ್ದು, 50‌ ಸಾವಿರ‌ ಯುವಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:28 am, Wed, 22 February 23

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು