AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನಸಭೆ ಚುನಾವಣೆ 2023: ​ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಜೆಡಿಎಸ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದೆ. ಚಾಮುಂಡೇಶ್ವರಿ ಸನ್ನಿದಿಯಲ್ಲಿ ಜಿಟಿಡಿ, ಎಚ್​ಡಿಡಿ ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ 2023: ​ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಜೆಡಿಎಸ್
JDS
TV9 Web
| Edited By: |

Updated on: Oct 21, 2022 | 7:59 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಆರು ತಿಂಗಳು ಬಾಕಿ ಇರುವಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿವೆ. ಆದ್ರೆ, ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಶುಕ್ರವಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

Karnataka Politics: ದೊಡ್ಡಗೌಡ್ರ ಪ್ಲಾನ್ ಸಕ್ಸಸ್: ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್-ಬಿಜೆಪಿಗೆ ಜಿಟಿಡಿ ಶಾಕ್!

ಜೆಡಿಎಸ್‌ ಜೊತೆ ಮುನಿಸಿಕೊಂಡು ಪಕ್ಷ ತೊರೆಯಲು ಮುಂದಾಗಿದ್ಧ ಶಾಸಕ ಜಿ.ಟಿ.ದೇವೇಗೌಡರ ಅವರನ್ನು ಗುರುವಾರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಖುದ್ಧು ಭೇಟಿಯಾಗಿ ಮನವೊಲಿಸಿದ್ದರು. ಅವರು ನಡೆಸಿದ ಸಂಧಾನ ಯಶ್ವಸಿಯಾಗಿದ್ದು, ಜಿ.ಟಿ. ದೇವೇಗೌಡರು ಜೆಡಿಎಸ್‌ನಲ್ಲೇ ಉಳಿದಿದ್ದಾರೆ. ಇನ್ನೂ ಮೈಸೂರು ಚುನಾವಣಾ ಉಸ್ತುವಾರಿಯನ್ನು ಜಿ.ಟಿ ದೇವೇಗೌಡರಿಗೆ ನೀಡಲಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಮುಂದಿನ ಚುನಾವಣೆಗೆ ಚಾಮುಂಡೇಶ್ವರಿಯಿಂದಲೇ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಪುತ್ರ ಜಿ. ಟಿ. ಹರೀಶ್ ಗೌಡಗೆ ಸಹ ಟಿಕೆಟ್ ಪಡೆಯುವಲ್ಲಿ ಜಿಟಿಡಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ಜೆಡಿಎಸ್​ ತೊರೆಯಲು ನಿರ್ಧರಿಸಿದ್ದ ಜಿಟಿ ದೇವೇಗೌಡ ಅವರು ತಮಗೆ ಹಾಗೂ ತಮ್ಮ ಪುತ್ರನಿಗೆ ಟಿಕೆಟ್ ನೀಡಿದರೆ ಮಾತ್ರ ನಿಮ್ಮ ಪಕ್ಷಕ್ಕೆ ಸೇರುವುದಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರಿಗೆ ಹೇಳಿದ್ದರು.  ಆದ್ರೆ, ದೇವೇಗೌಡ್ರ ತಂತ್ರದಿಂದ ಜಿಟಿಡಿ ಜೆಡಿಎಸ್​ನಲ್ಲೇ ಉಳಿದುಕೊಂಡಿದ್ದಾರೆ. ಅಲ್ಲದೇ ತಮ್ಮ ಪುತ್ರನಿಗೂ ಟಿಕೆಟ್ ಕೊಡಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಆದ್ರೆ,  ಹುಣಸೂರು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಜಿಲ್ಲಾ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ

* ಚಾಮುಂಡೇಶ್ವರಿ – ಜಿ. ಟಿ. ದೇವೇಗೌಡ

* ಹುಣಸೂರು – ಜಿ. ಟಿ. ಹರೀಶ್ ಗೌಡ

* ಕೆ. ಆರ್. ನಗರ – ಸಾ. ರಾ. ಮಹೇಶ್

* ಪಿರಿಯಾಪಟ್ಟಣ – ಕೆ. ಮಹದೇವ್

* ಟಿ. ನರಸೀಪುರ – ಅಶ್ವಿನ್

* ಎಚ್. ಡಿ. ಕೋಟೆ – ಜಯಪ್ರಕಾಶ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್