AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pre-Poll Survey: ಬಬಲೇಶ್ವರದಲ್ಲಿ ಎಂಬಿ ಪಾಟೀಲ್, ತಿಪಟೂರಿನಲ್ಲಿ ಬಿಸಿ ನಾಗೇಶ್ ಗೆಲುವಿನ ಸಾಧ್ಯತೆ; ಸಮೀಕ್ಷೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರದ ಬಬಲೇಶ್ವರದಲ್ಲಿ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹಾಗೂ ತುಮಕೂರಿನ ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆಲುವು ಸಾಧಿಸಬಹುದು ಎಂದು ‘ಲೋಕ್​ ಪೋಲ್ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.

Pre-Poll Survey: ಬಬಲೇಶ್ವರದಲ್ಲಿ ಎಂಬಿ ಪಾಟೀಲ್, ತಿಪಟೂರಿನಲ್ಲಿ ಬಿಸಿ ನಾಗೇಶ್ ಗೆಲುವಿನ ಸಾಧ್ಯತೆ; ಸಮೀಕ್ಷೆ
ಎಂಬಿ ಪಾಟೀಲ್
Ganapathi Sharma
|

Updated on: Mar 14, 2023 | 9:26 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರದ ಬಬಲೇಶ್ವರದಲ್ಲಿ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ (MB Patil) ಹಾಗೂ ತುಮಕೂರಿನ ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಗೆಲುವು ಸಾಧಿಸಬಹುದು ಎಂದು ‘ಲೋಕ್​ ಪೋಲ್ (Lok Poll)’ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆ (Pre-poll survey) ತಿಳಿಸಿದೆ. ಸಂಸ್ಥೆಯು ರಾಜ್ಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್​​ಗೆ ಸ್ಪಷ್ಟ ಬಹುಮತ ದೊರೆಯಲಿದೆ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ಇತ್ತೀಚೆಗೆ ತಿಳಿಸಿತ್ತು. ಇದೀಗ ಕೆಲವು ಕ್ಷೇತ್ರಗಳ ಸಂಭಾವ್ಯ ಗೆಲುವಿನ ವಿವರಗಳನ್ನೂ ಟ್ವೀಟ್ ಮಾಡಿದೆ.

ಬಬಲೇಶ್ವರದಲ್ಲಿ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಶೇ 55ರಷ್ಟು ಮತ ಹಂಚಿಕೆ ಪಡೆಯಲಿದ್ದರೆ, ಬಿಜೆಪಿ ಶೇ 39, ಜೆಡಿಎಸ್ ಶೇ 2 ಹಾಗೂ ಪಕ್ಷೇತರರು ಶೇ 4ರಷ್ಟು ಮತ ಹಂಚಿಕೆ ಪಡೆಯಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಮತ್ತೊಂದೆಡೆ, ತಿಪಟೂರಿನಲ್ಲಿ ಬಿಜೆಪಿಯ ಬಿಸಿ ನಾಗೇಶ್ ಶೇ 40ರಷ್ಟು ಮತಗಳು, ಕಾಂಗ್ರೆಸ್ ಶೇ 38, ಜೆಡಿಎಸ್ ಶೇ 16 ಹಾಗೂ ಪಕ್ಷೇತರರು ಶೇ 7ರಷ್ಟು ಮತ ಗಳಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಸ್​​ಟಿ ಸೋಮಶೇಖರ್ ಶೇ 35ರಷ್ಟು ಮತ ಗಳಿಸಲಿದ್ದಾರೆ. ಕಾಂಗ್ರೆಸ್​ಗೆ ಶೇ 30, ಜೆಡಿಎಸ್​ಗೆ ಶೇ 32 ಹಾಗೂ ಪಕ್ಷೇತರರಿಗೆ ಶೇ 03ರಷ್ಟು ಮತ ದೊರೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಮೇಲುಕೋಟೆಯಲ್ಲಿ ಜೆಡಿಎಸ್​ನ ಸಿಎಸ್​ ಪುಟ್ಟರಾಜು ಅವರಿಗೆ ಶೇ 45, ಕಾಂಗ್ರೆಸ್​ಗೆ ಶೇ 12, ಬಿಜೆಪಿಗೆ ಶೇ 03 ಹಾಗೂ ಪಕ್ಷೇತರರಿಗೆ ಶೇ 40ರಷ್ಟು ಮತ ದೊರೆಯಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಇದನ್ನೂ ಓದಿ: Pre-Poll Survey: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ಲಸ್; ಲೋಕ್​ ಪೋಲ್ ಸಮೀಕ್ಷೆ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸ್ಪಷ್ಟ ಬಹುಮತ ದೊರೆಯಲಿದೆ. ಆಡಳಿತಾರೂಢ ಬಿಜೆಪಿಯು 2018ರಲ್ಲಿ ಪಡೆದದ್ದಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್​​ಗೆ ಶೇ 39ರಿಂದ 42ರ ಮತ ಹಂಚಿಕೆಯೊಂದಿಗೆ 116ರಿಂದ 122 ಸ್ಥಾನ ದೊರೆಯಲಿದೆ. ಬಿಜೆಪಿಗೆ 77ರಿಂದ 83 ಹಾಗೂ ಜೆಡಿಎಸ್​​ 21ರಿಂದ 27 ಸ್ಥಾನ ಗಳಿಸಲಿವೆ. ಪಕ್ಷೇತರರು ಮತ್ತು ಸ್ವತಂತ್ರ ಅಭ್ಯರ್ಥಿಗಳು ಶೇ 6ರಿಂದ 9ರ ಮತ ಹಂಚಿಕೆಯೊಂದಿಗೆ 1ರಿಂದ 4 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿ ಇತ್ತೀಚೆಗೆ ತಿಳಿಸಿತ್ತು.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ