AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pre-Poll Survey: ಬಬಲೇಶ್ವರದಲ್ಲಿ ಎಂಬಿ ಪಾಟೀಲ್, ತಿಪಟೂರಿನಲ್ಲಿ ಬಿಸಿ ನಾಗೇಶ್ ಗೆಲುವಿನ ಸಾಧ್ಯತೆ; ಸಮೀಕ್ಷೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರದ ಬಬಲೇಶ್ವರದಲ್ಲಿ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹಾಗೂ ತುಮಕೂರಿನ ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆಲುವು ಸಾಧಿಸಬಹುದು ಎಂದು ‘ಲೋಕ್​ ಪೋಲ್ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.

Pre-Poll Survey: ಬಬಲೇಶ್ವರದಲ್ಲಿ ಎಂಬಿ ಪಾಟೀಲ್, ತಿಪಟೂರಿನಲ್ಲಿ ಬಿಸಿ ನಾಗೇಶ್ ಗೆಲುವಿನ ಸಾಧ್ಯತೆ; ಸಮೀಕ್ಷೆ
ಎಂಬಿ ಪಾಟೀಲ್
ಗಣಪತಿ ಶರ್ಮಾ
|

Updated on: Mar 14, 2023 | 9:26 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರದ ಬಬಲೇಶ್ವರದಲ್ಲಿ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ (MB Patil) ಹಾಗೂ ತುಮಕೂರಿನ ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಗೆಲುವು ಸಾಧಿಸಬಹುದು ಎಂದು ‘ಲೋಕ್​ ಪೋಲ್ (Lok Poll)’ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆ (Pre-poll survey) ತಿಳಿಸಿದೆ. ಸಂಸ್ಥೆಯು ರಾಜ್ಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್​​ಗೆ ಸ್ಪಷ್ಟ ಬಹುಮತ ದೊರೆಯಲಿದೆ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ಇತ್ತೀಚೆಗೆ ತಿಳಿಸಿತ್ತು. ಇದೀಗ ಕೆಲವು ಕ್ಷೇತ್ರಗಳ ಸಂಭಾವ್ಯ ಗೆಲುವಿನ ವಿವರಗಳನ್ನೂ ಟ್ವೀಟ್ ಮಾಡಿದೆ.

ಬಬಲೇಶ್ವರದಲ್ಲಿ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಶೇ 55ರಷ್ಟು ಮತ ಹಂಚಿಕೆ ಪಡೆಯಲಿದ್ದರೆ, ಬಿಜೆಪಿ ಶೇ 39, ಜೆಡಿಎಸ್ ಶೇ 2 ಹಾಗೂ ಪಕ್ಷೇತರರು ಶೇ 4ರಷ್ಟು ಮತ ಹಂಚಿಕೆ ಪಡೆಯಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಮತ್ತೊಂದೆಡೆ, ತಿಪಟೂರಿನಲ್ಲಿ ಬಿಜೆಪಿಯ ಬಿಸಿ ನಾಗೇಶ್ ಶೇ 40ರಷ್ಟು ಮತಗಳು, ಕಾಂಗ್ರೆಸ್ ಶೇ 38, ಜೆಡಿಎಸ್ ಶೇ 16 ಹಾಗೂ ಪಕ್ಷೇತರರು ಶೇ 7ರಷ್ಟು ಮತ ಗಳಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಸ್​​ಟಿ ಸೋಮಶೇಖರ್ ಶೇ 35ರಷ್ಟು ಮತ ಗಳಿಸಲಿದ್ದಾರೆ. ಕಾಂಗ್ರೆಸ್​ಗೆ ಶೇ 30, ಜೆಡಿಎಸ್​ಗೆ ಶೇ 32 ಹಾಗೂ ಪಕ್ಷೇತರರಿಗೆ ಶೇ 03ರಷ್ಟು ಮತ ದೊರೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಮೇಲುಕೋಟೆಯಲ್ಲಿ ಜೆಡಿಎಸ್​ನ ಸಿಎಸ್​ ಪುಟ್ಟರಾಜು ಅವರಿಗೆ ಶೇ 45, ಕಾಂಗ್ರೆಸ್​ಗೆ ಶೇ 12, ಬಿಜೆಪಿಗೆ ಶೇ 03 ಹಾಗೂ ಪಕ್ಷೇತರರಿಗೆ ಶೇ 40ರಷ್ಟು ಮತ ದೊರೆಯಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಇದನ್ನೂ ಓದಿ: Pre-Poll Survey: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ಲಸ್; ಲೋಕ್​ ಪೋಲ್ ಸಮೀಕ್ಷೆ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸ್ಪಷ್ಟ ಬಹುಮತ ದೊರೆಯಲಿದೆ. ಆಡಳಿತಾರೂಢ ಬಿಜೆಪಿಯು 2018ರಲ್ಲಿ ಪಡೆದದ್ದಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್​​ಗೆ ಶೇ 39ರಿಂದ 42ರ ಮತ ಹಂಚಿಕೆಯೊಂದಿಗೆ 116ರಿಂದ 122 ಸ್ಥಾನ ದೊರೆಯಲಿದೆ. ಬಿಜೆಪಿಗೆ 77ರಿಂದ 83 ಹಾಗೂ ಜೆಡಿಎಸ್​​ 21ರಿಂದ 27 ಸ್ಥಾನ ಗಳಿಸಲಿವೆ. ಪಕ್ಷೇತರರು ಮತ್ತು ಸ್ವತಂತ್ರ ಅಭ್ಯರ್ಥಿಗಳು ಶೇ 6ರಿಂದ 9ರ ಮತ ಹಂಚಿಕೆಯೊಂದಿಗೆ 1ರಿಂದ 4 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿ ಇತ್ತೀಚೆಗೆ ತಿಳಿಸಿತ್ತು.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ