AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ‘ಗ್ಯಾರಂಟಿ’ ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ

ವಿಧಾನಸಭೆ ಅಧಿವೇಶನದಲ್ಲಿ ಇಂದು ಬಸವರಾಜ ಬೊಮ್ಮಾಯಿ ಅವರು ವಿದ್ಯುತ್ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದರು. ಇದು ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೆಜೆ ಜಾರ್ಜ್ ನಡುವೆ ಮಾತಿನ ಪ್ರಹಾರಕ್ಕೆ ಕಾರಣವಾಯಿತು.

ವಿಧಾನಸಭೆಯಲ್ಲಿ 'ಗ್ಯಾರಂಟಿ' ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ
ಬಸನಗೌಡ ಪಾಟೀಲ್ ಮತ್ತು ಕೆಜೆ ಜಾರ್ಜ್
ಕಿರಣ್​ ಹನಿಯಡ್ಕ
| Edited By: |

Updated on: Jul 10, 2023 | 5:31 PM

Share

ವಿಧಾನಸಭೆ: ಅಧಿವೇಶನದಲ್ಲಿ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿದ್ಯುತ್ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ (KJ George) ಆಕ್ಷೇಪ ವ್ಯಕ್ತಪಡಿಸಿದಾಗ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮಧ್ಯಪ್ರವೇಶಿಸಿ ಮಾತಿಗಿಳಿದರು. ಈ ವೇಳೆ ತನ್ನನ್ನು ಸುಮ್ಮನಾಗಿಸಲು ಬಂದ ಕೆಜೆ ಜಾರ್ಜ್ ವಿರುದ್ಧ ಯತ್ನಾಳ್ ಏಕವಚನದಲ್ಲೇ ಪ್ರಹಾರ ನಡೆಸಿದರು.

ವಿದ್ಯುತ್​ ದರ ಹೆಚ್ಚಳ ಕುರಿತು ಸದನದಲ್ಲಿ ಬೊಮ್ಮಾಯಿ ಪ್ರಸ್ತಾಪ ಮಾಡಿದಾಗ ಆಕ್ಷೇಪ ವ್ಯಕ್ತಪಡಿಸಿದ ಇಂಧನ ಸಚಿವ ಕೆಜೆ ಜಾರ್ಜ್, ನಿಮ್ಮ ಅವಧಿಯಲ್ಲಿ ವಿದ್ಯುತ್​ ದರ ಏರಿಕೆ ಆಗಿದ್ದು ಅಂತ ತಿರುಗೇಟು ನೀಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮಗೆ ಗೊತ್ತಿಲ್ಲ ಕುಳಿತುಕೊಳ್ಳಿ ಎಂದು ಕೆ.ಜೆ.ಜಾರ್ಜ್ ಹೇಳಿದರು.

ಕೆ.ಜೆ.ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್ ಏಕವಚನದಲ್ಲೇ ಆಕ್ರೋಶ ಹೊರಹಾಕಿದರು. ನೀನೇನು ಸರ್ವಜ್ಞನಾ, ಕುಳಿತುಕೊಳ್ಳಲು ಹೇಳಲು ನೀನ್ಯಾರು? ಮಂತ್ರಿ ‌ಮಾಡು ಅಂತಾ ನಾನೇನು ನಿಮ್ಮ ಮನೆಗೆ ಬಂದಿದ್ದೇನ ಎಂದು ಹರಿಹಾಯ್ದರು.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣದಲ್ಲಿ ಒಂದು ನಿರ್ದಿಷ್ಟ ಕೋಮಿನ ಆರೋಪಿಯನ್ನು ಕಾಂಗ್ರೆಸ್ ಸರ್ಕಾರ ಸಂರಕ್ಷಿಸುವ ಪ್ರಯತ್ನ ಮಾಡುತ್ತಿದೆ: ಬಸನಗೌಡ ಯತ್ನಾಳ್

ಸದನದಲ್ಲಿ ಗ್ಯಾರಂಟಿ ಜಟಾಪಟಿ, ಮಾತಿನಲ್ಲೇ ಯತ್ನಾಳ್ ಕಾಲೆಳೆದ ಜಾರ್ಜ್

ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಸರ್ಕಾರದ ಐದು ಗ್ಯಾರಂಟಿ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆಯಿತು. ಕೊಟ್ಟ ಮಾತು ಈಡೇರಿಸಿಲ್ಲ ಎಂದು ಬಿಜೆಪಿ ಸದಸ್ಯರು ಆರೋಪಿಸಿದರು. ಈ ವೇಳೆಯೂ ಯತ್ನಾಳ್ ಮತ್ತು ಜಾರ್ಜ್ ನಡುವೆ ಮಾತಿನ ಚಕಮಕಿ ನಡೆಯಿತು.

ವಿರೋಧ ಪಕ್ಷದ ನಾಯಕನಾಗಲು ಶಾಸಕ ಯತ್ನಾಳ್​ಗೆ ಆಸೆ ಇದೆ. ಹಾಗಾಗಿ ಪದೇಪದೆ ಎದ್ದು ಯತ್ನಾಳ್​ ಮಾತನಾಡುತ್ತಿದ್ದಾರೆ. ಎಷ್ಟೇ ಬಾಯಿ ಬಡಿದುಕೊಂಡರೂ ವಿಪಕ್ಷ ನಾಯಕರನ್ನಾಗಿ ಮಾಡಲ್ಲ ಎಂದು ಹೇಳುವ ಮೂಲಕ ಮಾತಿನಲ್ಲೇ ಯತ್ನಾಳ್​ ಅವರ ಕಾಲೆಳೆದರು. ಇದಕ್ಕೆ ಪ್ರತ್ಯುತ್ತರ ನೀಡಿದ ಯತ್ನಾಳ್, ನಾನು ಯಾವ ಹುದ್ದೆಗೂ ಆಸೆ ಪಡಲ್ಲ, ಆಸೆ ಪಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?