AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಕ್ಕೆ ಕಾರಣವಾಯ್ತೇ ಶಾಸಕರ ತರಬೇತಿ ಶಿಬಿರ? ಸಂಪನ್ಮೂಲ ವ್ಯಕ್ತಿಗಳ ಮರುಪರಿಶೀಲನೆಗೆ ಆಗ್ರಹ

ಶಿಬಿರದ ವಿಚಾರವಾಗಿ ಸ್ಪೀಕರ್ ಯುಟಿ ಖಾದರ್​​ಗೆ ಈ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದು, ಸಂಪನ್ಮೂಲ ವ್ಯಕ್ತಿಗಳನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ವಿವಾದಕ್ಕೆ ಕಾರಣವಾಯ್ತೇ ಶಾಸಕರ ತರಬೇತಿ ಶಿಬಿರ? ಸಂಪನ್ಮೂಲ ವ್ಯಕ್ತಿಗಳ ಮರುಪರಿಶೀಲನೆಗೆ ಆಗ್ರಹ
ಸ್ಪೀಕರ್ ಯುಟಿ ಖಾದರ್
ಗಣಪತಿ ಶರ್ಮಾ
|

Updated on: Jun 22, 2023 | 6:08 PM

Share

ಬೆಂಗಳೂರು: ಹೊಸಾಗಿ ಈ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ತರಬೇತಿ ನೀಡುವುದಕ್ಕಾಗಿ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ (UT Khader)​ ಹಮ್ಮಿಕೊಂಡಿರುವ ಮೂರು ದಿನಗಳ ತರಬೇತಿ ಶಿಬಿರ ಇದೀಗ ಚರ್ಚೆಗೆ ಗ್ರಾಸವಾಗಿದೆ. ಶಿಬಿರಕ್ಕೆ ಕರೆಸಲಾಗುತ್ತಿರುವ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ಕೇಳಿಬಂದಿದ್ದು, ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರಿಗೆ ಸ್ಪೀಕರ್ ಅವಕಾಶ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳನ್ನು ಮರು ಪರಿಶೀಲಿಸುವಂತೆ ಆಗ್ರಹ ವ್ಯಕ್ತವಾಗಿದೆ.

ಶಿಬಿರದ ವಿಚಾರವಾಗಿ ಸ್ಪೀಕರ್ ಯುಟಿ ಖಾದರ್​​ಗೆ ಈ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದು, ಸಂಪನ್ಮೂಲ ವ್ಯಕ್ತಿಗಳನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ತರಬೇತಿ ಶಿಬಿರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಮೊಹಮ್ಮದ್ ಕುಂಞ, ಗುರುರಾಜ್ ಕರ್ಜಗಿ, ರವಿಶಂಕರ್ ಗುರೂಜಿ ಅವರನ್ನು ಯುಟಿ ಖಾದರ್ ಆಯ್ಕೆ ಮಾಡಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ಚರ್ಚೆ ಆರಂಭವಾಗಿದೆ. ಹಲವರು ಸಂಪನ್ಮೂಲ ವ್ಯಕ್ತಿಗಳ ಆಯ್ಕೆಯನ್ನು ಸಮರ್ಥಿಸಿದ್ದರೆ ಇನ್ನು ಅನೇಕರು ರಾಜಕೀಯ ಮತ್ತು ಆಡಳಿತಾತ್ಮಕ ವಿಚಾರಗಳ ಬಗ್ಗೆ ತರಬೇತಿ ನೀಡುವುದಕ್ಕೆ ರಾಜಕಾರಣ ಹಾಗೂ ಆಡಳಿತದಲ್ಲಿ ಮಾಗಿದ ಹಿರಿಯ ರಾಜಕಾರಣಿಗಳು ಸಿಗಲಿಲ್ಲವೇ ಎಂದೂ ಪ್ರಶ್ನಿಸಿದ್ದಾರೆ.

ಸ್ಪೀಕರ್ ಆದವರು ಪಕ್ಷ ಹಾಗೂ ಒಂದು ಪಕ್ಷದ ಸಿದ್ಧಾಂತವನ್ನಷ್ಟೇ ನೋಡಿಕೊಂಡು ಇರಲಾಗುವುದಿಲ್ಲ. ರಾಜಕಾರಣದಲ್ಲಿ ಧರ್ಮವನ್ನು ಬೆರೆಸಲಾಗದು ಎಂದು ಇನ್ನು ಕೆಲವು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜು 03ರಿಂದ ಅಧಿವೇಶನ ಆರಂಭ, ಜೂ 26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯುಟಿ ಖಾದರ್‌

ಎಲ್ಲಿ ನಡೆಯಲಿದೆ ಶಾಸಕರಿಗೆ ತರಬೇತಿ?

ನೆಲಮಂಗಲದ ಸಮೀಪ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ. ಜೂನ್ 26ಕ್ಕೆ ಆರಂಭಗೊಂಡು ಜೂನ್ 28ರ ವರೆಗೆ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳು ಮಾತ್ರವಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಮಂದಿ ಹಿರಿಯ ರಾಜಕಾರಣಿಗಳೂ ಶಿಬಿರಾರ್ಥಿಗಳ ಜತೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ