AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಹೇಳಿದಂತೆ ತಿನ್ನೋದೂ ಇಲ್ಲ, ತಿನ್ನುಲು ಬಿಡುವುದು ಇಲ್ಲ: ಡಿಕೆಶಿಗೆ ಸಚಿವ ಅಶೋಕ್ ತಿರುಗೇಟು

ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಮತ್ತು ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದೇ ತಡ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಮೇಲೆ ಟೀಕಾಪ್ರಹಾರ ನಡೆಸುತ್ತಿದ್ದು, ಮಾರ್ಚ್ 9ರಂದು ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರೆ ನೀಡಿದೆ. ಇದಕ್ಕೆ ಸಚಿವರಾದ ಸುಧಾಕರ್, ಅಶೋಕ್ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ತಿನ್ನೋದೂ ಇಲ್ಲ, ತಿನ್ನುಲು ಬಿಡುವುದು ಇಲ್ಲ: ಡಿಕೆಶಿಗೆ ಸಚಿವ ಅಶೋಕ್ ತಿರುಗೇಟು
ಆರ್.ಅಶೋಕ್ ಮತ್ತು ಡಿ.ಕೆ.ಶಿವಕುಮಾರ್
Rakesh Nayak Manchi
Rakesh Nayak Manchi|

Updated on:Mar 05, 2023 | 5:18 PM

Share

ಆನೇಕಲ್: ಕಾಂಗ್ರೆಸ್ ಏನೇ ಕರೆ ಕೊಟ್ಟರೂ ಅದಕ್ಕೆ ಮೂರು ಪೈಸೆ ಬೆಲೆ ಇರಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ (R.Ashok) ಹೇಳಿದ್ದಾರೆ. ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ (Madal Virupakshappa) ಮತ್ತು ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದೇ ತಡ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಅಲ್ಲದೆ, ಮಾರ್ಚ್ 9ರಂದು ರಾಜ್ಯಾದ್ಯಂತ 2 ಗಂಟೆ ಬಂದ್​ (Karnataka Bandh For 2 Hours) ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಕರೆ ನೀಡಿದ್ದಾರೆ. ಈ ಬಗ್ಗೆ ಆನೇಕಲ್​ನಲ್ಲಿ ಪ್ರತಿಕ್ರಿಯಿಸಿದ ಸಚಿವ ಅಶೋಕ್, ಕಾಂಗ್ರೆಸ್​ನವರು​ 14 ಸಾವಿರ ಕೋಟಿಯ 2ಜಿ ಹಗರಣ ಮಾಡಿದ್ದಾರೆ. ಎಂದರು.

ಶಾಸಕ ಮಾಡಾಳ್​ ವಿರೂಪಾಕ್ಷಪ್ಪರನ್ನು ನಾವು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಒಬ್ಬರ ಮೇಲೂ ದಾಳಿ ಆಗಲಿಲ್ಲ. ಆದರೆ ನಾವು ‌ಪಾರದರ್ಶಕವಾಗಿದ್ದೇವೆ, ಪ್ರಧಾನಿ ಮೋದಿ ಪಾರದರ್ಶಕವಾಗಿದ್ದಾರೆ. ಮೋದಿ ಹೇಳಿದಂತೆ ಯಾರನ್ನೂ ತಿನ್ನಲು ಬಿಡಲ್ಲ, ತಿನ್ನೋದೂ ಇಲ್ಲ, ಲೋಕಾಯುಕ್ತ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಸಚಿವ ಅಶೋಕ್ ಹೇಳಿದರು.

ಕಾಂಗ್ರೆಸ್ ಹದಿನಾಲ್ಕು ಸಾವಿರ ಕೋಟಿಯ 2ಜಿ,‌ ಹಗರಣ‌ ಮಾಡಿದ್ದರು. ಕೋಲ್‌ ಹಗರಣ, ಫಿರಂಗಿ ಹಗರಣ ಲಕ್ಷ ಲಕ್ಷ ಕೋಟಿ ಮಾಡಿಕೊಂಡರು. ಮಾಡಾಳ್ ಕೂಡ ಮಾಡಿದ್ದಾರೆ, ಅದು ತಪ್ಪು, ಅದನ್ನು ನಾವು ಸಮರ್ಥನೆ ಮಾಡಲ್ಲ. ಕಾಂಗ್ರೆಸ್ ಇದ್ದಾಗ ಎಪ್ಪತ್ತು‌‌ ಕಂಪ್ಲೇಂಟ್ ಹೋಗಿತ್ತು. ಒಬ್ಬರು ಮೇಲೆ‌ ದಾಳಿ ಆಗಲಿಲ್ಲ, ಎಲ್ಲಾ ಮುಚ್ಚಿ ಹಾಕಿದ್ದರು. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಬಿಜೆಪಿ ಆಗಲಿ,‌ ಕಾಂಗ್ರೆಸ್ ಆಗಲಿ, ಜೆಡಿಎಸ್ ಆಗಲಿ ಅಥವಾ ಯಾರೇ ಆಗಲಿ. ಅವರನ್ನು ಶಿಕ್ಷಿಸುವವರೆಗೂ ಕೆಲಸ ಮಾಡುತ್ತಾರೆ ಎಂದರು. ಇವರು (ಸಿದ್ದರಾಮಯ್ಯ) ವಾಚ್ ಕಟ್ಟಿದ್ದರಲ್ಲ, ಎಲ್ಲಿಂದ ಬಂತು ವಾಚ್? ಸಿದ್ರಾಮಯ್ಯ ಕಟ್ಟಿದ್ದ ಫಾರಿನ್ ವಾಚ್, ಅವಗ ಯಾಕೆ ತನಿಖೆ ಮಾಡಿಲ್ಲ? ರಿಡೂ ಬಗ್ಗೆ ಯಾಕೆ ತನಿಖೆ ಆಗಲಿಲ್ಲ? ಆವಾಗ ತನಿಖೆ ಮಾಡಿದ್ದರೆ ಇದೇನು‌ ಇದಕ್ಕಿಂತ‌ ನೂರು ಕೋಟಿ ಹೊರಗೆ‌ ಬರುತ್ತಿತ್ತು ಎಂದರು.

ಇದನ್ನೂ ಓದಿ: ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ಭ್ರಷ್ಟಾಚಾರದ ದಾಖಲೆ ಸಿಕ್ಕಿದ್ದಕ್ಕೆ ಡಿಕೆಶಿ ಜೈಲಿಗೆ ಹೋಗಿದ್ದು; ಕಟೀಲ್ ​

ಈ ಹಿಂದೆ ಕಾಂಗ್ರೆಸ್, ಜೆಡಿಎಸ್ ಸೇರಿ​​​ ಸರ್ಕಾರ ರಚಿಸಿಕೊಂಡಿದ್ದರು. ಆದರೆ 14 ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಚಟ್ಟ ಕಟ್ಟಿಕೊಂಡು ಹೋಯಿತು. ಹೆಣ ಹೋರಲೂ ಈ ಮೈತ್ರಿ ಸರ್ಕಾರದವರಿಗೆ ಜನ ಇರಲಿಲ್ಲ. ಇದ್ದವರೆಲ್ಲಾ ನಮ್ಮ ಮುನಿರತ್ನ ಗ್ಯಾಂಗ್​. ಕೊಟ್ಟ ಕುದುರೆ ಏರಲು ಆಗಲಿಲ್ಲ. ಚುನಾವಣೆ ಗೆಲ್ಲಲಾಗಲ್ಲ ಎಂದು ಮಾಟಮಂತ್ರದ ಮೊರೆ ಹೋಗಿದ್ದಾರೆ ಎಂದು ಕಾಂಗ್ರೆಸ್​, ಜೆಡಿಎಸ್ ನಾಯಕರ​ ವಿರುದ್ಧ ವಾಗ್ದಾಳಿ ಅಶೋಕ್ ನಡೆಸಿದರು.

ಕಾಂಗ್ರೆಸ್​ನವರಿಗೆ ಎರಡು‌ ಟೀಂ ಮಾಡೋಕು ಜನ ಇಲ್ಲ: ಅಶೋಕ್

ವಿಜಯಸಂಕಲ್ಪ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಗುತ್ತಿದೆ. ಈ ವಿಜಯ‌ಯಾತ್ರೆ ಆದಮೇಲೆ ಕಾಂಗ್ರೆಸ್ ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗುವುದು ಗ್ಯಾರಂಟಿ. 15‌ದಿನಗಳ ಕಾಲ‌ ನಾಲ್ಕು ಯಾತ್ರೆ ನಾವು ಮಾಡುತ್ತಾ ಇದ್ದೇವೆ. ನಾವು ನಾಲ್ಕು ಟೀಂ ಮಾಡಿದ್ದೇವೆ. ಒಂದೊಂದು ತಂಡದಲ್ಲೂ ಐದೈದು ಮಂತ್ರಿಗಳು ಇದ್ದು, ನಮ್ಮ ರಾಷ್ಟ್ರೀಯ ನಾಯಕರು ಕೂಡ ಬರುತ್ತಿದ್ದಾರೆ. ನಾಳೆ‌ ಬೆಂಗಳೂರಿನ ಕಾರ್ಯಕ್ರಮ ಕೇಂದ್ರದ ನಾಯಕರು ಬರಲಿದ್ದಾರೆ. ಅಂದರೆ ನಾವು ಈ ಯಾತ್ರೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಆದರೆ ಕಾಂಗ್ರೆಸ್​ನವರಿಗೆ ಎರಡು‌ ಟೀಂ ಮಾಡಲೂ ಜನ ಇಲ್ಲ. ಅದಕ್ಕೆ‌‌ ಸಿದ್ರಾಮಯ್ಯ, ಡಿ.ಕೆ ಶಿವಕುಮಾರ್ ಒದ್ದಾಡುತ್ತಾ ಇದ್ದಾರೆ ಎಂದರು.

ಭ್ರಷ್ಟಾಚಾರ ನಿಯಂತ್ರಣಕ್ಕೆ ಚಾಲನೆ ನೀಡಿದ್ದೇ ಸಿಎಂ ಬೊಮ್ಮಾಯಿ: ಸುಧಾಕರ್

ಚಿಕ್ಕಬಳ್ಳಾಪುರ: 2 ಗಂಟೆ ಕಾಲ ಕರ್ನಾಟಕ ಬಂದ್​​ಗೆ ಡಿ.ಕೆ.ಶಿವಕುಮಾರ್​ ಕರೆ ನೀಡಿದ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಭ್ರಷ್ಟಾಚಾರ ನಿಯಂತ್ರಣಕ್ಕೆ ಚಾಲನೆ ನೀಡಿದ್ದೇ ಸಿಎಂ ಬೊಮ್ಮಾಯಿ. ಕಾಂಗ್ರೆಸ್​ ಅವಧಿಯಲ್ಲಿ ಹಾವಿನ ಹಲ್ಲು ಕಿತ್ತು ಬುಟ್ಟಿಯಲ್ಲಿ ಇಟ್ಟಿದ್ದರು. ಆದರೆ ನಾವು ಒಳ್ಳೆಯ ಹಾವನ್ನು ಮತ್ತೆ ಬುಟ್ಟಿಯಲ್ಲಿ ಇಟ್ಟಿದ್ದೇವೆ. ಕಾಂಗ್ರೆಸ್​​ನವರಂತೆ ಬಿ ರಿಪೋರ್ಟ್​​​ ಅಥವಾ ಕೇಸ್​​ ಮುಚ್ಚಿ ಹಾಕಿಲ್ಲ. ಸತ್ಯತೋರಿಸಲು ಮುಂದಾಗಿರುವ ಮುಖ್ಯಮಂತ್ರಿಗೆ ಅಭಿನಂದನೆ ಹೇಳಿ. ಕಾಂಗ್ರೆಸ್ ನಾಯಕರಿಗೆ ಸೌಜನ್ಯ ಇದ್ದರೆ ಸಿಎಂಗೆ ಅಭಿನಂದನೆ ಹೇಳಲಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Sun, 5 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ