AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ ಅಂತ್ಯ, ರಾಜ್ಯಸಭಾ ಅಭ್ಯರ್ಥಿ ಆಯ್ಕೆ ಬಗ್ಗೆ ಮಹತ್ವದ ತೀರ್ಮಾನ

Karnataka bjp meeting: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಸಂಬಂಧ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಅಂತ್ಯವಾಗಿದ್ದು, ರಾಜ್ಯಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಬಗ್ಗೆ ಸಭೆಯಲ್ಲಿ ಒಂದು ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಚೆರ್ಚೆಯಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ ಅಂತ್ಯ, ರಾಜ್ಯಸಭಾ ಅಭ್ಯರ್ಥಿ ಆಯ್ಕೆ ಬಗ್ಗೆ ಮಹತ್ವದ ತೀರ್ಮಾನ
ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ|

Updated on: Feb 02, 2024 | 9:41 PM

Share

ಬೆಂಗಳೂರು, (ಫೆಬ್ರವರಿ 02): ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Karnataka Rajya Sabha Election) ದಿನಾಂಕ ನಿಗದಿಯಾಗಿದೆ. ಇದೇ ಫೆಬ್ರವರಿ 27 ಮತದಾನ ನಡೆಯಲಿದ್ದು, ಅಂದೆ ಫಲಿತಾಂಶ ಪ್ರಕಟವಾಗಲಿದೆ. ಆಡಳಿತರೂಢ ಕಾಂಗ್ರೆಸ್​ ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಸುಲಭವಾಗಿ ಗೆಲ್ಲಬಹುದು. ಇನ್ನುಳಿಂದ ಬಿಜೆಪಿ ಒಂದು ಸ್ಥಾನದಲ್ಲಿ ಮಾತ್ರ ನಿರಾಯಾಸವಾಗಿ ಗೆಲ್ಲಬಹದು. ಈ ಸಂಬಂಧ ಚರ್ಚಿಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ( bjp core committee meeting)  ಮಾಡಿದ್ದು, ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ತಕ್ಷಣ ಯಾವುದೇ ಶಿಫಾರಸು ಮಾಡದಿರುವ ಬಗ್ಗೆ ತೀರ್ಮಾನವಾಗಿದೆ.

ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನ ಮಾತ್ರ ಬಿಜೆಪಿಗೆ ಗೆಲುವಿನ ಅವಕಾಶ, ಹಾಲಿ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರೇ ಮತ್ತೆ ಅಭ್ಯರ್ಥಿಯಾಗುವುದಾದರೆ ಇಲ್ಲಿ ಚರ್ಚೆ ಬೇಡ. ಒಂದು ವೇಳೆ ಬೇರೆಯವರು. ಅಭ್ಯರ್ಥಿಯಾಗುವುದು ಅಂತಾದರೆ ಆಗ ಮತ್ತೊಮ್ಮೆ ಚರ್ಚೆ ಮಾಡೋಣ. ಈ ಬಗ್ಗೆ ಮೊದಲು ರಾಜ್ಯಾಧ್ಯಕ್ಷರು ವರಿಷ್ಠರ ಜೊತೆ ಚರ್ಚಿಸಲಿ ಎಂದು ಸಭೆಯಲ್ಲಿ ಹಿರಿಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ: ಇಲ್ಲಿದೆ ರಾಜಕೀಯ ಲೆಕ್ಕಾಚಾರ

ಇನ್ನು ಎರಡನೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ತೀರ್ಮಾನವಾದರೆ ಯಾರು ಸಮರ್ಥರು ಎಂದು ಕೂಡಾ ವರಿಷ್ಠರ ಜೊತೆ ಚರ್ಚೆಯಾಗಲಿ. ವರಿಷ್ಠರ ಜೊತೆ ಚರ್ಚಿಸಿ ಸ್ಪಷ್ಟತೆ ಪಡೆದ ಬಳಿಕವೇ ರಾಜ್ಯಾಧ್ಯಕ್ಷರು ಸಂಭಾವ್ಯ ಹೆಸರುಗಳನ್ನು ಕಳುಹಿಸಲಿ ಎಂಬ ತೀರ್ಮಾನಕ್ಕೆ ಕೋರ್ ಕಮಿಟಿ ಸದಸ್ಯರು ಬಂದಿದ್ದಾರೆ.

ಕಳೆದ ಬಾರಿ ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿದ್ದ ಹೆಸರುಗಳನ್ನು ಬದಿಗೊತ್ತಿ ಹೈಕಮಾಂಡ್ ತನ್ನ ಆಯ್ಕೆ ಮಾಡಿತ್ತು. ಇದರಿಂದ ರಾಜ್ಯ ಬಿಜೆಪಿಗೆ ಭಾರೀ ಮುಜುಗರವನ್ನುಂಟು ಮಾಡಿತ್ತು. ಈ ಕಾರಣದಿಂದ ಮುಜುಗರದ ರೀತಿಯ ಸನ್ನಿವೇಶದಿಂದ ಪಾರಾಗಲು ಈ ಬಾರಿ ರಾಜ್ಯ ಬಿಜೆಪಿ ಎಚ್ಚರಿಕೆಯ ನಿಲುವು ತಳೆದಿದೆ.

ರಾಜ್ಯಸಭೆ ಚುನಾವಣೆ ದಿನಾಂಕ ವಿವರ

ಫೆಬ್ರವರಿ 8 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಫೆಬ್ರವರಿ 27 ರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಯಿಂದ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಹೇಗಿದೆ ಬಲಾಬಲ?

ರಾಜ್ಯ ವಿಧಾನಸಭೆಯಲ್ಲಿ ಹೆಚ್ಚಿನ ಸ್ಥಾನ ಹೊಂದಿರುವ ಪಕ್ಷವೇ ರಾಜ್ಯಸಭೆಯಲ್ಲಿ ಪಾರುಪತ್ಯ ಸಾಧಿಸುತ್ತದೆ. ಹೀಗಾಗಿ ರಾಜ್ಯಗಳಲ್ಲಿ ಬಹುಮತ ಸಾಧಿಸಿದ ಪಕ್ಷವೇ ಸಹಜವಾಗಿ ಹೆಚ್ಚು ಸದಸ್ಯರನ್ನು ತನ್ನ ಪಕ್ಷದಿಂದ ರಾಜ್ಯಸಭೆಗೆ ಕಳಿಸಬಹುದು,

ರಾಜ್ಯಸಭೆಯ ಸದಸ್ಯರನ್ನು ರಾಜ್ಯ ವಿಧಾನಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಓರ್ವ ರಾಜ್ಯಸಭಾ ಅಭ್ಯರ್ಥಿ ಗೆಲ್ಲಲು 45 ಬೇಕು. ಈಗಾಗಲೇ ಕಾಂಗ್ರೆಸ್​ ಕಾಂಗ್ರೆಸ್​ ಬಳಿ 136 ವಿಧಾನಸಭಾ ಸ್ಥಾನಗಳು ಇದ್ದರೆ, ಬಿಜೆಪಿ ಬಳಿ 66 ಹಾಗೂ ಜೆಡಿಎಸ್​ 16 ಸ್ಥಾನಗಳನ್ನು ಹೊಂದಿದೆ. ಹಾಗಾಗಿ ಕಾಂಗ್ರೆಸ್​ ಮತ್ತೆ ಮೂರು ಸ್ಥಾನ ಹಾಗೂ ಬಿಜೆಪಿ 1 ಸ್ಥಾನದಲ್ಲಿ ನಿರಾಯಾಸವಾಗಿ ಗೆಲ್ಲಲಿದೆ. ಒಂದು ವೇಳೆ ಐದನೇ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ ಚುನಾವಣೆ ನಡೆಯಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು