AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ ಕಮಿಟಿ ಸಭೆಗೆ ಬರಲೇ ಇಲ್ಲ ‘ಭಿನ್ನ’ ಶಾಸಕರು: ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ

ಹುಬ್ಬಳ್ಳಿ-ಧಾರವಾಡ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಕೆಲ ದಿನಗಳಿಂದ ಕಮಲದ ಮನೆ ಒಡೆದ ಮನೆಯಾಗಿದೆ. ಘಟಾನುಘಟಿ ನಾಯಕರೇ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ. ನಿನ್ನೆ(ಸೆಪ್ಟೆಂಬರ್ 11) ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಶೀತಲ ಸಮರಕ್ಕೆ ಸಾಕ್ಷಿಯಾಗಿದೆ. ಭಿನ್ನಮತ ಶಮನಕ್ಕೆ ಕರೆದ ಕೋರ್ ಕಮಿಟಿ ಸಭೆಗೆ ಭಿನಮತಿಯ ಶಾಸಕರು ಹಾಜರಾಗಲೇ ಇಲ್ಲ.

ಕೋರ್ ಕಮಿಟಿ ಸಭೆಗೆ ಬರಲೇ ಇಲ್ಲ ‘ಭಿನ್ನ’ ಶಾಸಕರು: ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ
ಹುಬ್ಬಳ್ಳಿ ಬಿಜೆಪಿ ಕೋರ್ ಕಮಿಟಿ ಸಭೆ
ಶಿವಕುಮಾರ್ ಪತ್ತಾರ್
| Updated By: ರಮೇಶ್ ಬಿ. ಜವಳಗೇರಾ|

Updated on: Sep 12, 2023 | 7:23 AM

Share

ಹುಬ್ಬಳ್ಳಿ, (ಸೆಪ್ಟೆಂಬರ್ 12): ಬಿಜೆಪಿ(BJP) ಹಿರಿಯ ನಾಯಕರೇ ಸ್ವಪಕ್ಷದ ವಿರುದ್ಧ ಬುಸುಗುಡುತ್ತಿದ್ದಾರೆ. ಭಿನ್ನಮತ ಶಮನಕ್ಕೆ ಎಂದು ಕರೆದ ಸಭೆಯಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಒಂದು ಕಾಲದಲ್ಲಿ ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿತ್ತು. ಇಲ್ಲಿ ಕಾಂಗ್ರೆಸ್ ಇದ್ದು ಇಲ್ಲದಂತಾಗಿತ್ತು. ಆದ್ರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರಿದ್ದೇ ಸೇರಿದ್ದು ಹುಬ್ಬಳ್ಳಿ-ಧಾರವಾಡ (Hubballi-Dharwad)ಬಿಜೆಪಿಯ ಕೋಟೆ ಒಡೆದ ಮನೆಯಂತಾಗಿದೆ. ಲೋಕಸಭೆ ಚುನಾವಣೆಗೆ ಶೆಟ್ಟರ್ ದಾಳ ಉರುಳಿಸಿದ್ದು, ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ ಶುರುವಾಗಿದೆ.

ಕೋರ್ ಕಮಿಟಿ ಸಭೆಗೆ ಬರಲೇ ಇಲ್ಲ ‘ಭಿನ್ನ’ ಶಾಸಕರು

15 ದಿನದ ಹಿಂದಷ್ಟೇ ಶೆಟ್ಟರ್ ಆಪ್ತ ಹಾಗೂ ಮಾಜಿ ಸಚಿವ ಮುನೇನಕೊಪ್ಪ ಸ್ವಪಕ್ಷ ಬಿಜೆಪಿ ವಿರುದ್ಧ ಕೆಂಡಕಾರಿದ್ದರು. ಅಷ್ಟೇ ಅಲ್ಲ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಬಿಜೆಪಿ ವಿರುದ್ಧ ನೇರವಾಗಿ ಅಸಮಾಧಾನ ಹೊರಹಾಕಿದ್ದರು. ಬಿಜೆಪಿಯಲ್ಲಿ ಹೇಳೋರು ಇಲ್ಲ ಕೇಳೋರು ಇಲ್ಲ ಎಂದು ಗುಡುಗಿದ್ರು. ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದ ಜಗದೀಶ್ ಶೆಟ್ಟರ್, ಬಿಜೆಪಿ ತೊರೆಯೋ ಲಿಂಗಾಯತ ನಾಯಕರ ಪಟ್ಟಿಯನ್ನೇ ತೆರೆದಿಟ್ಟಿದ್ದರು. ಇದರ ಬೆನ್ನಲ್ಲೇ ಅಲರ್ಟ್ ಆದ ಬಿಜೆಪಿ ನಾಯಕರು ನಿನ್ನೆ(ಸೆಪ್ಟೆಂಬರ್ 11) ಮಹತ್ವದ ಕೋರ್ ಕಮಿಟಿ ಸಭೆ ಕರೆದಿತ್ತು. ಭಿನ್ನಮತ ಶಮನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಖಾಸಗಿ ಹೋಟೆಲ್​ನಲ್ಲಿ ಕೋರ್ ಕಮಿಟಿ ಸಭೆ ಹಮ್ಮಿಕೊಂಡಿದ್ರು. ಆದ್ರೆ, ಸಭೆಗೆ ಅಹ್ವಾನ ಇದ್ರೂ ಪ್ರದೀಪ್ ಶೆಟ್ಟರ್, ಮುನೇನಕೊಪ್ಪ, ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಗೈರಾಗುವ ಮೂಲಕ ಬಿಜೆಪಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಮತ್ತೆ ಬಿಜೆಪಿ​ ಎಂಎಲ್​ಸಿ ಪ್ರದೀಪ್ ಶೆಟ್ಟರ್ ಕಡೆಗಣನೆ; ಶಾಸಕರ ಕಾರ್ಯಾಲಯ ಉದ್ಘಾಟನಾ ಪೋಸ್ಟರ್​ನಲ್ಲಿ ಫೋಟೋ ಮಿಸ್

ಇನ್ನು ಕೋರ್ ಕಮಿಟಿ ಸಭೆಯಲ್ಲಿ ಘಟಾನುಘಟಿ ನಾಯಕರು ಭಾಗಿಯಾಗಿದ್ರು. ಯಾರು ಏನೇ ಮಾತಾಡಿದ್ರು ನಮಗೆ ಕಾರ್ಯಕರ್ತರು ಮುಖ್ಯ. ಒಬ್ಬರು ಇಬ್ಬರು ಮಾತಾಡಿದರೆ ಅದು ಭಿನ್ನಮತ ಅಲ್ಲ. ಬಹಿರಂಗವಾಗಿ ಯಾರೂ ಪಕ್ಷದ ವಿರುದ್ಧ ಹೇಳಿಕೆ ಕೊಡಬಾರದು ಎಂದು ನಾಯಕರು ಖಡಕ್ ಸೂಚನೆ ಕೊಟ್ಟಿದ್ದಾರೆ. ಭಿನ್ನ ಶಾಸಕರು ಸಭೆಗೆ ಗೈರಾದ ಬಗ್ಗೆ ಬಿಜೆಪಿ ನಾಯಕರು ಕೊಟ್ಟ ಸ್ಪಷ್ಟನೆ ಇದು.

ಅಂತೂ ಇಂತೂ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನ ನಾಯಕರ ಗೈರು ಎತ್ತಿ ತೋರಿಸಿದ್ದು, ಇದನ್ನ ಪಕ್ಷದ ಹಿರಿಯ ನಾಯಕರು ಹೇಗೆ ಸರಿ ಮಾಡುತ್ತಾರೆ ಕಾದು ನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?