AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ರೌಡಿಶೀಟರ್ ಜತೆಗಿನ ಬಿಜೆಪಿ ನಂಟು: ​ಪುರಸಭೆ ಸದಸ್ಯನಾಗಿ ರೌಡಿಯನ್ನು ನಾಮನಿರ್ದೇನ ಮಾಡಿದ ಸರ್ಕಾರ

ರೌಡಿಶೀಟರ್​ಗಳೊಂದಿಗೆ ಬಿಜೆಪಿಯ ನುಂಟು ಮುಂದುವರಿದಿದೆ. ಇದಕ್ಕೆ ಪೂರಕವೆಂಬಂತೆ ಪಕ್ಷ ಸೇರ್ಪಡೆಗೂ ಮುನ್ನ ರೌಡಿಶೀಟರ್​ಗೆ ಮಣೆ ಹಾಕಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಮುಂದುವರೆದ ರೌಡಿಶೀಟರ್ ಜತೆಗಿನ ಬಿಜೆಪಿ ನಂಟು: ​ಪುರಸಭೆ ಸದಸ್ಯನಾಗಿ ರೌಡಿಯನ್ನು ನಾಮನಿರ್ದೇನ ಮಾಡಿದ ಸರ್ಕಾರ
ಆನೇಕಲ್ ಪುರಸಭೆ ನಾಮನಿರ್ದೇಶಿತ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್​​​ ಆಯ್ಕೆ
TV9 Web
| Edited By: |

Updated on: Dec 02, 2022 | 4:50 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ  (Karnataka Assembly Election 2023) ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ಗಾಳಿ ಬೀಸುತ್ತಿದೆ. ಗದ್ದುಗೆಗಾಗಿ ನಾನಾ ತಂತ್ರಗಳು ಮೂರು ಪಕ್ಷಗಳಿಂದಲೂ ಶುರುವಾಗ್ತಿವೆ. ಇದರ ಮಧ್ಯೆ ರೌಡಿ ರಾಜಕೀಯ (Rowdy Politics) ಶುರುವಾಗಿದೆ. ಈಗಾಗಲೇ ಫೈಟರ್ ರವಿ ಕೇಸರಿ ಬಾವುಟ ಹಿಡಿದಾಗಿದೆ. ಬೆತ್ತನಗೆರೆ ಶಂಕರ ಕಮಲ ನಾಯಕರ ಬೆನ್ನ ಹಿಂದೆಯೇ ಓಡಾಡಿಕೊಂಡಿದ್ದಾನೆ. ಸೈಲೆಂಟ್ ಸುನೀಲ್ ಕೇಸರಿ ಶಾಲು ಹೊದ್ದು ಆಗಿದೆ. ಆದ್ರೆ ಇನ್ನೇನು ಬಾವುಟ ಹಿಡಿಯೋದು ಮಾತ್ರ ಸದ್ಯಕ್ಕೆ ಮಿಸ್ ಆಗಿದೆ. ಇದರ ಮಧ್ಯೆ ಇದೀಗ ಬಿಜೆಪಿ(BJP), ಮತ್ತೋರ್ವ ರೌಡಿಶೀಟರ್​ಗೆ ಮಣೆ ಹಾಕಿದೆ.

ಇದನ್ನೂ ಓದಿ: ಜಮೀರ್ ಹಣಿಯಲು ‘ಸೈಲೆಂಟ್’ ಅಸ್ತ್ರ: ಸೈಲೆಂಟ್ ಸುನೀಲ್ ಮೂಲಕ ಸೋಲಿಸಲು ರಣತಂತ್ರ…!

ಹೌದು…..ರೌಡಿಶೀಟರ್​ಗೆ ಆನೇಕಲ್ ಪುರಸಭೆ ನಾಮನಿರ್ದೇಶಿತ ಸದಸ್ಯನ ಪಟ್ಟ ನೀಡಿದೆ. ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಉಪ್ಪಿಯನ್ನು ಆನೇಕಲ್ ಪುರಸಭೆ ನಾಮನಿರ್ದೇಶಿತ ಸದಸ್ಯನಾಗಿ ಆಯ್ಕೆ ಮಾಡಿದೆ. ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಂಜುನಾಥ್ ಅಲಿಯಾಸ್ ಉಪ್ಪಿ ಪಕ್ಷಕ್ಕೆ ಸೇರ್ಪಡೆಗೂ ಮುನ್ನವೇ ಅಧಿಕಾರಿ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಮಡಿವಾಳ ಪೊಲೀಸ್ ಠಾಣೆಯ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಉಪ್ಪಿ, ನಖರಬಾಬು ಮರ್ಡರ್ ಕೇಸ್ ಪ್ರಮುಖ ಆರೋಪಿಯಾಗಿದ್ದಾನೆ. ಹೀಗಿದ್ದರೂ ಸಹ ಬಿಜೆಪಿ, ಬೆಂಗಳೂರು ಹೊರವಲಯದ ಆನೇಕಲ್ ಪುರಸಭೆಗೆ ನಾಮನಿರ್ದೇಶಿತ ಸದಸ್ಯನನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಮಂಜುನಾಥ್ ಅಲಿಯಾಸ್ ಉಪ್ಪಿ ಎಂಬಾತನಿಗೆ ಪುರಸಭೆ ನಾಮನಿರ್ದೇಶಿತ ಸದಸ್ಯನ ಪಟ್ಟ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೆ ರೌಡಿ ರಾಜಕೀಯ ಶುರುವಾಗುತ್ತಾ ಎನ್ನುವುದಕ್ಕೆ ಪುಷ್ಠಿ ನೀಡಿದಂತಿದೆ.

ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳು ಬಿಜೆಪಿಗೆ ರೌಡಿಗಳನ್ನ ಸೇರಿಸಿಕೊಂಡು ರಾಜಕೀಯ ಮಾಡುವ ದುಸ್ಥಿತಿ ಬಂತಾ ಅನ್ನೋ ಚರ್ಚೆ ಒಂದೆಡೆಯಾದ್ರೆ, ಮತ್ತೊಂದು ಲೆಕ್ಕಾಚಾರ ಬೇರೆಯದ್ದನ್ನೇ ಹೇಳುತ್ತಿದೆ.. ರೌಡಿಗಳಿಗೆ ಗಾಳ ಹಾಕಿರುವುದರ ಹಿಂದೆ ಸ್ಲಮ್ ಮತಗಳನ್ನು ಸೆಳೆಯುವ ತಂತ್ರ ಅಡಗಿದ್ಯಾ ಅನ್ನೋ ಅನುಮಾನ ಹುಟ್ಟಿಕೊಂಡಿದೆ.

ರೌಡಿ ರಾಜಕೀಯ ವಿಷಯ ಕಳೆದ ಐದಾರು ದಿನಗಳಿಂದ .ರಾಜ್ಯ ರಾಜಕಾರಣದಲ್ಲಿ ಸಖತ್​ ಸದ್ದು ಮಾಡುತ್ತಿದೆ. ಬೆಂಗಳೂರಿನ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ ಬಿಜೆಪಿ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದೆ ತಡ, ಬಿಜೆಪಿ ಜೊತೆ ನಂಟು ಹೊಂದಿರುವ ರೌಡಿಗಳ ಫೋಟೋಗಳು ಹರಿದಾಡುತ್ತಿವೆ. ಇನ್ನು ಬಿಜೆಪಿ ಸಂಗಡ ಸೇರಲು ಬೆಂಗಳೂರಿನ ಡಾನ್​ಗಳು ತುದಿಗಾಲಲ್ಲಿ ನಿಂತಿದ್ದಾರೆ ಅನ್ನೋ ಗುಮಾನಿ ಶುರುವಾಗಿದ್ದೇ ತಡ, ಕಾಂಗ್ರೆಸ್​ ನಾಯಕರು ಮೈಕೊಡವಿ ನಿಂತಿದ್ರೆ, ಬಿಜೆಪಿ ಕೂಡ ಬಾಯಿ ಮುಚ್ಚಿಸುವಂಥಾ ಬಾಣಗಳನ್ನ ತಮ್ಮ ಬತ್ತಳಿಕೆಯಿಂದ ಬಿಡುತ್ತಿದೆ. ಆದ್ರೆ, ಇದರ ಮಧ್ಯೆ ಬಿಜೆಪಿ ಒಬ್ಬೊಬ್ಬ ರೌಡಿ ಶೀಟರ್​ನನ್ನು ರಾಜಕಾರಣಕ್ಕೆ ಎಳೆದು ತರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ