AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ: ಜೆಡಿಎಸ್ ಆರೋಪಕ್ಕೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

ಬೆಂಗಳೂರಿನ ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ ಎನ್ನವ ಜೆಡಿಎಸ್ ಆರೋಪಕ್ಕೆ ಬಿಜೆಪಿ ಸಾಕ್ಷಿ ಸಮೇತ ತಿರುಗೇಟು ನೀಡಿದೆ.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ: ಜೆಡಿಎಸ್ ಆರೋಪಕ್ಕೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ
HD Devegowda
TV9 Web
| Edited By: |

Updated on:Nov 11, 2022 | 10:06 PM

Share

ಬೆಂಗಳೂರು: ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆ (Kempegowda statue) ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ (HD Devegowda) ಅವರನ್ನು ಆಹ್ವಾನಿಸಿಲ್ಲ ಎನ್ನುವ ಜೆಡಿಎಸ್​ ಆರೋಪಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ಅಲ್ಲದೇ ದೇವೇಗೌಡರಿಗೆ ಆಹ್ವಾನ ಕೊಟ್ಟಿರುವುದಕ್ಕೆ ಸಾಕ್ಷಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಲೆಟರ್ ಹೆಡ್​​ ಮೂಲಕ ಕೆಂಪೇಗೌಡರ ಪ್ರಗತಿ ಪ್ರತಿಮೆ (Kempegowda statue) ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ದೇವೇಗೌಡ್ರಿಗೆ ಆಹ್ವಾನ ಕೊಟ್ಟಿದ್ದ ಪತ್ರವನ್ನು ಬಿಡುಗಡೆಗೊಳಿಸಿದೆ.

HD Devegowda: ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಅದ್ದೂರಿ ಅನಾವರಣ: ಆದರೆ ಮಾಜಿ ಪಿಎಂ ದೇವೇಗೌಡರ ಕಡೆಗಣನೆ- ಜೆಡಿಎಸ್​ ಕಿಡಿಕಿಡಿ

ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬಿಮ್ಮಾಯಿ ಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ತಿರುಗೇಟು ಕೊಟ್ಟಿದೆ.

ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ಬಿಜೆಪಿ ಟ್ವೀಟ್ ಮೂಲಕ ತಿವಿದಿದೆ.

ಜೆಡಿಎಸ್ ಸರಣಿ ಟ್ವೀಟ್ ಮಾಡಿತ್ತು

ಕೆಂಪೇಗೌಡರ ಬಳಿಕ ಬೆಂಗಳೂರು ಅಭಿವೃದ್ಧಿಗೆ ಕೊಡುಗೆ ನೀಡಿದ್ದು ದೇವೇಗೌಡರು. ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ H.D.ದೇವೇಗೌಡರು. ದೇವೇಗೌಡರನ್ನು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ. ಪ್ರತಿಮೆ ಕಾಮಗಾರಿಗೆ ದೇವೇಗೌಡರನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರವು ಪ್ರತಿಮೆ ಅನಾವರಣ ಸಮಾರಂಭಕ್ಕೆ ಯಾಕೆ ಆಹ್ವಾನ ಮಾಡಲಿಲ್ಲ?

ಸ್ಥಳೀಯ ಕಾರ್ಯಕ್ರಮ ಆಗಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಪ್ರಧಾನಿಗಳೇ ಬರುತ್ತಾರೆ ಅಂದ್ರೆ ಹೆಮ್ಮೆಯ ಮಾಜಿ ಪ್ರಧಾನಿಯನ್ನೂ ಅಧಿಕೃತವಾಗಿ ಕರೆಯಲೇಬೇಕಿತ್ತು. ಬಿಜೆಪಿಯವರು ರಾಜಕೀಯಕ್ಕಾಗಿ ಮಾಜಿ ಪ್ರಧಾನಿ ಕಡೆಗಣಿಸಿದ್ದಾರೆ. ಇದು ಮಾಜಿ ಪ್ರಧಾನಿಗೆ ಮಾತ್ರವಲ್ಲ, ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೆ ಮಾಡಿದ ಅಪಮಾನ ಎಂದು ಸರಣಿ ಟ್ವೀಟ್​ ಮೂಲಕ ಜೆಡಿಎಸ್​ ಕಿಡಿಕಾರಿತ್ತು.

Published On - 9:49 pm, Fri, 11 November 22

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್