AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ: ಜೆಡಿಎಸ್ ಆರೋಪಕ್ಕೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

ಬೆಂಗಳೂರಿನ ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ ಎನ್ನವ ಜೆಡಿಎಸ್ ಆರೋಪಕ್ಕೆ ಬಿಜೆಪಿ ಸಾಕ್ಷಿ ಸಮೇತ ತಿರುಗೇಟು ನೀಡಿದೆ.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ: ಜೆಡಿಎಸ್ ಆರೋಪಕ್ಕೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ
HD Devegowda
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 11, 2022 | 10:06 PM

ಬೆಂಗಳೂರು: ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆ (Kempegowda statue) ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ (HD Devegowda) ಅವರನ್ನು ಆಹ್ವಾನಿಸಿಲ್ಲ ಎನ್ನುವ ಜೆಡಿಎಸ್​ ಆರೋಪಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ಅಲ್ಲದೇ ದೇವೇಗೌಡರಿಗೆ ಆಹ್ವಾನ ಕೊಟ್ಟಿರುವುದಕ್ಕೆ ಸಾಕ್ಷಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಲೆಟರ್ ಹೆಡ್​​ ಮೂಲಕ ಕೆಂಪೇಗೌಡರ ಪ್ರಗತಿ ಪ್ರತಿಮೆ (Kempegowda statue) ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ದೇವೇಗೌಡ್ರಿಗೆ ಆಹ್ವಾನ ಕೊಟ್ಟಿದ್ದ ಪತ್ರವನ್ನು ಬಿಡುಗಡೆಗೊಳಿಸಿದೆ.

HD Devegowda: ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಅದ್ದೂರಿ ಅನಾವರಣ: ಆದರೆ ಮಾಜಿ ಪಿಎಂ ದೇವೇಗೌಡರ ಕಡೆಗಣನೆ- ಜೆಡಿಎಸ್​ ಕಿಡಿಕಿಡಿ

ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬಿಮ್ಮಾಯಿ ಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ತಿರುಗೇಟು ಕೊಟ್ಟಿದೆ.

ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ಬಿಜೆಪಿ ಟ್ವೀಟ್ ಮೂಲಕ ತಿವಿದಿದೆ.

ಜೆಡಿಎಸ್ ಸರಣಿ ಟ್ವೀಟ್ ಮಾಡಿತ್ತು

ಕೆಂಪೇಗೌಡರ ಬಳಿಕ ಬೆಂಗಳೂರು ಅಭಿವೃದ್ಧಿಗೆ ಕೊಡುಗೆ ನೀಡಿದ್ದು ದೇವೇಗೌಡರು. ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ H.D.ದೇವೇಗೌಡರು. ದೇವೇಗೌಡರನ್ನು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ. ಪ್ರತಿಮೆ ಕಾಮಗಾರಿಗೆ ದೇವೇಗೌಡರನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರವು ಪ್ರತಿಮೆ ಅನಾವರಣ ಸಮಾರಂಭಕ್ಕೆ ಯಾಕೆ ಆಹ್ವಾನ ಮಾಡಲಿಲ್ಲ?

ಸ್ಥಳೀಯ ಕಾರ್ಯಕ್ರಮ ಆಗಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಪ್ರಧಾನಿಗಳೇ ಬರುತ್ತಾರೆ ಅಂದ್ರೆ ಹೆಮ್ಮೆಯ ಮಾಜಿ ಪ್ರಧಾನಿಯನ್ನೂ ಅಧಿಕೃತವಾಗಿ ಕರೆಯಲೇಬೇಕಿತ್ತು. ಬಿಜೆಪಿಯವರು ರಾಜಕೀಯಕ್ಕಾಗಿ ಮಾಜಿ ಪ್ರಧಾನಿ ಕಡೆಗಣಿಸಿದ್ದಾರೆ. ಇದು ಮಾಜಿ ಪ್ರಧಾನಿಗೆ ಮಾತ್ರವಲ್ಲ, ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೆ ಮಾಡಿದ ಅಪಮಾನ ಎಂದು ಸರಣಿ ಟ್ವೀಟ್​ ಮೂಲಕ ಜೆಡಿಎಸ್​ ಕಿಡಿಕಾರಿತ್ತು.

Published On - 9:49 pm, Fri, 11 November 22

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ