AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಚಾಮರಾಜಪೇಟೆ ಮಾತ್ರ: ಬಿಜೆಪಿ ಟಾಂಗ್

ಕ್ಷೇತ್ರದ ಹುಡುಕಾಟದಲ್ಲಿರುವ ಸಿದ್ದರಾಮಯ್ಯನವರಿಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಇರುವುದು ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಕ್ಷೇತ್ರ ಮಾತ್ರ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಚಾಮರಾಜಪೇಟೆ ಮಾತ್ರ: ಬಿಜೆಪಿ ಟಾಂಗ್
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Nov 17, 2022 | 7:58 PM

Share

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭಾಗಿಯಾಗಿದ್ದಾರೆ ಎನ್ನುವ ಸಿದ್ದರಾಮಯ್ಯನವರ(siddaramaiah) ಆರೋಪಕ್ಕೆ ಬಿಜೆಪಿ(BJP) ತಿರುಗೇಟು ನೀಡಿದೆ.

ಮತದಾರರ ಮಾಹಿತಿ ಕಳವು ಪ್ರಕರಣ: ಕಚೇರಿ ಖಾಲಿ ಮಾಡಿದ ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ, ಕಾಂಗ್ರೆಸ್ ದೂರು

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ. ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ, ಬೇಗ ಜಾರಿ ಹೋಗುತ್ತದೆ. ಕಾಂಗ್ರೆಸ್ & ಕಂಪನಿಯದ್ದು ದಿನಕ್ಕೊಂದು ನಾಟಕ ಎಂದು ಜನತೆಗೆ ಚೆನ್ನಾಗಿ ಅರಿವಾಗಿದೆ. ನೀವು ಏನೇ ಕಸರತ್ತು ಮಾಡಿದರೂ ಮುಖ್ಯಮಂತ್ರಿಯೂ ಆಗುವುದಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ ಎಂದಿದೆ.

ಕುಂಕುಮಧಾರಿಗಳನ್ನು ಕಂಡರೇ ಭಯಪಡುವ ಸಿದ್ದರಾಮಯ್ಯನವರಿಗೆ ತಾಯಿ ಚಾಮುಂಡೇಶ್ವರಿಯನ್ನು ಕಂಡರೆ ಅದಿನ್ನೆಷ್ಟು ಭಯವಿರಬೇಡ ಪಾಪ. ಹಾಗಾಗಿ ಕ್ಷೇತ್ರದ ಹುಡುಕಾಟದಲ್ಲಿರುವ ಅವರಿಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಇರುವುದು ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಕ್ಷೇತ್ರ ಮಾತ್ರ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಚುನಾವಣಾ ಅಕ್ರಮವೆಸಗಿ ಆರು ವರ್ಷ ಅಲಹಾಬಾದ್ ಹೈಕೋರ್ಟ್‌ನಿಂದ ಇಂದಿರಾ ಗಾಂಧಿ ಶಿಕ್ಷೆಗೆ ಒಳಪಟ್ಟಿದ್ದರು. ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು. ಸಿದ್ದರಾಮಯ್ಯನವರೇ, ಈ ಚುನಾವಣಾ ಅಕ್ರಮಗಳನ್ನು ನೀವು ಎಂದಾದರೂ ಪ್ರಶ್ನಿಸಿದ್ದೀರಾ? ಎಂದು ಪ್ರಶ್ನಿಸಿದೆ.

ದೇಶದ ಎರಡನೇ ಲೋಕಸಭಾ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸೋಲಿಸುವ ಏಕಮಾತ್ರ ಕಾರಣಕ್ಕಾಗಿ ಬ್ಯಾಲೇಟ್ ಪೇಪರ್ ಬಣ್ಣ ಬದಲಿಸಿ, ಜನರ ಹಾದಿ ತಪ್ಪಿಸಿ ವಾಮಮಾರ್ಗದಲ್ಲಿ ಕಾಂಗ್ರೆಸ್ ಸೋಲಿಸಿತ್ತು. ಮಾನ್ಯ ಸಿದ್ದರಾಮಯ್ಯನವರೇ, ಈ ಚುನಾವಣಾ ಅಕ್ರಮದ ಬಗ್ಗೆ ತಿಳಿದಿದೆಯೇ? ಎಂದು ಬಿಜೆಪಿ ತಿವಿದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!