AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Introspection Meeting: ಬಿಜೆಪಿ ಆತ್ಮಾವಲೋಕನ ಸಭೆ; ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?

ಶಾಸಕಾಂಗ ಪಕ್ಷದ ನಾಯಕನ ನೇಮಕಕ್ಕೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯವನ್ನು ಅರುಣ್ ಸಿಂಗ್ ಸಂಗ್ರಹಿಸಿ ಕೇಂದ್ರ ನಾಯಕರಿಗೆ ಸಲ್ಲಿಸಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

BJP Introspection Meeting: ಬಿಜೆಪಿ ಆತ್ಮಾವಲೋಕನ ಸಭೆ; ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?
Ganapathi Sharma
|

Updated on:Jun 08, 2023 | 4:14 PM

Share

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ (Karnataka Assembly Election Results 2023)  ಕಾರಣಗಳ ಕುರಿತು ಚರ್ಚಿಸಲು ಬಿಜೆಪಿ (BJP) ನಾಯಕರು ಗುರುವಾರ ಆತ್ಮಾವಲೋಕನ ನಡೆಸಿದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕಾಂಗ ಪಕ್ಷದ ನಾಯಕನ ನೇಮಕದ ಕುರಿತು ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಬಿಜೆಪಿಯ ಉನ್ನತ ನಾಯಕರು ಮೊದಲು ಚುನಾಯಿತ ಶಾಸಕರೊಂದಿಗೆ ಸಭೆ ನಡೆಸಿ ನಂತರ ಪರಾಜಿತ ಅಭ್ಯರ್ಥಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಲೋಕಸಭೆಯ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದರು.

ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳು ಕಳೆದಿವೆ ಮತ್ತು ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳ ಕುರಿತು ಹೆಚ್ಚು ಜನರಿಗೆ ಮಾಹಿತಿ ತಲುಪುವಂತೆ ಮಾಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ನಾವು ಎಲ್ಲಿ ತಪ್ಪು ಮಾಡಿದೆವು ಮತ್ತು ಚುನಾವಣೆಯ ಸಮಯದಲ್ಲಿ ನಾವು ಏನು ಮಾಡಬಹುದಾಗಿತ್ತು ಎಂಬುದನ್ನು ನಾವು ಚರ್ಚಿಸಿದ್ದೇವೆ. ಪಕ್ಷದ ಬಲವರ್ಧನೆ ಮತ್ತು ಕಾಂಗ್ರೆಸ್ ವಿರುದ್ಧ ಹೋರಾಡುವ ಕಾರ್ಯತಂತ್ರವನ್ನು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?

ಶಾಸಕಾಂಗ ಪಕ್ಷದ ನಾಯಕನ ನೇಮಕಕ್ಕೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯವನ್ನು ಅರುಣ್ ಸಿಂಗ್ ಸಂಗ್ರಹಿಸಿ ಕೇಂದ್ರ ನಾಯಕರಿಗೆ ಸಲ್ಲಿಸಲಿದ್ದಾರೆ ಎಂದು ಮಾಜಿ ಸಿಎಂ ತಿಳಿಸಿದರು.

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಾತನಾಡಿ, ರಾಜ್ಯದ ಜನತೆ ಕಾಂಗ್ರೆಸ್ ‘ಗ್ಯಾರಂಟಿ’ಗಳನ್ನು ನಂಬಿ ಮತ ಹಾಕಿದ್ದಾರೆ. ನಾವು ನಮ್ಮ ಸೋಲಿಗೆ ಕಾರಣಗಳನ್ನು ಹುಡುಕಲು ಪ್ರಯತ್ನಿಸಿದ್ದೇವೆ. ಕೆಲವು ಸಂದರ್ಭಗಳಲ್ಲಿ ನಾವು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲಿಲ್ಲ. ಜನರು ಕಾಂಗ್ರೆಸ್ ಭರವಸೆಗಳನ್ನು ನಂಬಿ ಮತ ಹಾಕಿದರು ಆದರೆ ಈಗ ಕಾಂಗ್ರೆಸ್​ನವರು ಷರತ್ತುಗಳನ್ನು ವಿಧಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನ ಪಡೆದಿದ್ದವು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:10 pm, Thu, 8 June 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!