AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಸಂಚು; ಸಹಾಯವಾಣಿ ಆರಂಭಿಸಿ ತೇಜಸ್ವಿ ಸೂರ್ಯ ಆರೋಪ

ಬಿಜೆಪಿ ಹೊಸದಾಗಿ ಆರಂಭಿಸಿರುವ ಸಹಾಯವಾಣಿ ಸಂಖ್ಯೆ 18003091907 ಆಗಿದ್ದು, ಕಾರ್ಯಕರ್ತರು ಇದರ ನೆರವು ಪಡೆದುಕೊಳ್ಳಬೇಕು ಎಂದು ತೇಜಸ್ವಿ ಸೂರ್ಯ ಮನವಿ ಮಾಡಿದರು.

ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಸಂಚು; ಸಹಾಯವಾಣಿ ಆರಂಭಿಸಿ ತೇಜಸ್ವಿ ಸೂರ್ಯ ಆರೋಪ
ಕರ್ನಾಟಕ ಬಿಜೆಪಿ ಕಾರ್ಯಕರ್ತರಿಗಾಗಿ ಆರಂಭಿಸಿರುವ ಸಹಾಯವಾಣಿಗೆ ಶನಿವಾರ ಚಾಲನೆ ನೀಡಲಾಯಿತು
Ganapathi Sharma
|

Updated on: Jun 10, 2023 | 5:21 PM

Share

ಬೆಂಗಳೂರು: ಬಿಜೆಪಿ, ಆರ್​ಎಸ್​ಎಸ್ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ (Tejasvi Surya) ಆರೋಪಿಸಿದ್ದಾರೆ. ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ಪಕ್ಷದ ರಾಜ್ಯ ಘಟಕದ ವತಿಯಿಂದ ಆರಂಭಿಸಲಾಗಿರುವ ಸಹಾಯವಾಣಿಗೆ (BJP Helpline) ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆಯೂ ಕಾಂಗ್ರೆಸ್ ಪಕ್ಷವು ಅನೇಕ ಸುಳ್ಳು ಪ್ರಕರಣಗಳನ್ನು ಹಾಕಿ ಹಿಂದೂ ಸಂಘಟನೆಗಳ ಬಾಯಿ ಮುಚ್ಚಿಸಿದ ಇತಿಹಾಸವನ್ನು ಹೊಂದಿದೆ. ಸುಳ್ಳು ಪ್ರಕರಣಗಳ ವಿರುದ್ಧ ಹೋರಾಡಲು, ನಾವು ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ನಮ್ಮ ಪಕ್ಷದ ಸದಸ್ಯರಿಗೆ ಅಗತ್ಯವಾದ ಕಾನೂನು ಬೆಂಬಲದೊಂದಿಗೆ ನಾವು ಸಂಪೂರ್ಣವಾಗಿ ಸಜ್ಜಾಗಿದ್ದೇವೆ ಎಂದು ಹೇಳಿದರು.

ಬಿಜೆಪಿ ಹೊಸದಾಗಿ ಆರಂಭಿಸಿರುವ ಸಹಾಯವಾಣಿ ಸಂಖ್ಯೆ 18003091907 ಆಗಿದ್ದು, ಕಾರ್ಯಕರ್ತರು ಇದರ ನೆರವು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಪಕ್ಷವು ರಾಜ್ಯಾದ್ಯಂತ ಸುಮಾರು 100 ವಕೀಲರನ್ನು ಹೊಂದಿದ್ದು, ಇವರು ಕಾರ್ಯಕರ್ತರಿಗೆ ನೆರವಾಗಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ, ದೌರ್ಜನ್ಯ, ಭಯಭೀತಿ ಉಂಟು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ. ನಕಲಿ ಕೇಸ್‌ ದಾಖಲು, ದೌರ್ಜನ್ಯ, ದಬ್ಬಾಳಿಕೆ ನಡೆದಲ್ಲಿ ಕಾನೂನು ಸಹಾಯವಾಣಿಗೆ ಕರೆ ಮಾಡಿ, ನೆರವು ಪಡೆಯಬಹುದು ಮತ್ತು ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಲು ಕಾನೂನು ತಜ್ಞರ ತಂಡ ಸದಾ ಸಿದ್ಧವಾಗಿರುತ್ತದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​​ನ ಹಿಟ್ಲರ್ ಸರ್ಕಾರ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Odisha Train Accident: ಪ್ರಧಾನಿ ಮೋದಿಗೆ ಖರ್ಗೆ ಬರೆದ ಪತ್ರಕ್ಕೆ ತೇಜಸ್ವಿ ಸೂರ್ಯ ಸೇರಿ ಬಿಜೆಪಿಯ ನಾಲ್ವರು ಸಂಸದರಿಂದ ತಿರುಗೇಟು

ಬಿಜೆಪಿ ಕಾರ್ಯಕರ್ತರ ಪಕ್ಷ, ಬಿಜೆಪಿಯ ಕಾರ್ಯಕರ್ತ ಎದೆಗುಂದುವವನಲ್ಲ. ರಾಷ್ಟ್ರಪರ ಕಾರ್ಯಗಳಲ್ಲಿ ಸಕ್ರಿಯರಾಗಿರುವ ನಮ್ಮ ಸಮಸ್ತ ಕಾರ್ಯಕರ್ತರ ಪರವಾಗಿ ಪಕ್ಷವೂ ಸದಾ ನಿಲ್ಲುತ್ತದೆ ಮತ್ತು ಅವಶ್ಯಕವಾದಲ್ಲಿ ಕಾನೂನಾತ್ಮಕವಾಗಿಯೂ ಹೋರಾಟ ನಡೆಸಲಿದೆ. ದೇಶವಿರೋಧಿಗಳ ವಿರುದ್ಧ, ನಾಡಿಗೆ ಕೇಡು ಬಗೆಯುವವರ ವಿರುದ್ಧ, ರಾಜ್ಯ ಸರಕಾರದ ಜನವಿರೋಧಿ ನಡೆಗಳ ವಿರುದ್ಧ, ಎದೆಗುಂದದೆ ಹೋರಾಡಿ, ನಿಮ್ಮೊಂದಿಗೆ ಪಕ್ಷವಿದೆ, ಪಕ್ಷದಿಂದ ನಿಯೋಜನೆಗೊಂಡಿರುವ ಕಾನೂನು ತಜ್ಞರ ಸಮಿತಿ ಸದಾ ಸಿದ್ದವಿದೆ ಎಂದು ಅವರು ಭರವಸೆ ನೀಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್