AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಂಪುಟ ಒಪ್ಪಿಗೆ: ಸಿಡಿದೆದ್ದ ಬಿಜೆಪಿ ನಾಯಕರು

ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ರಾಜ್ಯ ಸಚಿವ ಸಂಪುಟ, ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಇದು ಲೋಕಸಭೆ ಚುನಾವಣೆಯ ಗಿಮಿಕ್ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಂಪುಟ ಒಪ್ಪಿಗೆ: ಸಿಡಿದೆದ್ದ ಬಿಜೆಪಿ ನಾಯಕರು
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 18, 2024 | 6:13 PM

Share

ಬೆಂಗಳೂರು, (ಜನವರಿ 18): ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರ, ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಈ ಬಗ್ಗೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಚುನಾವಣೆ ಬಂದಾಗ ಕಾಂಗ್ರೆಸ್ ಪಕ್ಷ​ ಮೋಸದಾಟ ಆಡುತ್ತೆ. ಲೋಕಸಭಾ ಚುನಾವಣೆ ಇದೆ, ಹಾಗಾಗಿ ಈ ವಿಚಾರ ತಂದಿದ್ದಾರೆ. ಸಿಎಂ ಕಾನೂನು ಸಲಹೆಗಾರ ಯಾರು ಎಂದು ಗೊತ್ತಿಲ್ಲ. ಕ್ಯಾಬಿನೆಟ್​ಗೆ ತಂದು ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಲ್ಲಾ ರಾಜ್ಯಗಳೂ ಒಳಮೀಸಲಾತಿ ಕೊಡಬಹುದೆಂದು ಕೋರ್ಟ್ ಹೇಳಿತ್ತು

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಸಂಪುಟ ಒಪ್ಪಿಗೆ ನೀಡಿರುವ ಬಗ್ಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, ಹರಿಯಾಣ, ತಲಂಗಾಣದಲ್ಲೂ ಒಳಮೀಸಲಾತಿ ಘೋಷಣೆ ಆಗಿದೆ. 5 ರಾಜ್ಯಗಳಲ್ಲಿ ಒಳಮೀಸಲಾತಿ ಬಗ್ಗೆ ಆಯೋಗ ರಚನೆಯಾಗಿತ್ತು. ಎಲ್ಲರೂ ಒಳಮೀಸಲಾತಿ ಅಗತ್ಯ ಇದೆ ಎಂದು ಹೇಳಿದ್ದರು. 341ನೇ ವಿಧಿ ತಿದ್ದುಪಡಿ ಇಲ್ಲ ಎಂದು ನ್ಯಾ. ಅರುಣ್ ಮಿಶ್ರಾ ಹೇಳಿದ್ದರು. ಎಲ್ಲಾ ರಾಜ್ಯಗಳೂ ಒಳಮೀಸಲಾತಿ ಕೊಡಬಹುದು ಎಂದು ಕೋರ್ಟ್ ಆದೇಶ ಮಾಡಿ ಮೂರು ವರ್ಷ ಆಗಿದೆ. ಆ ಆದೇಶವನ್ನು ಇವರು ಯಾರೂ ತೆಗೆದು ನೋಡಿಲ್ಲ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯನವರ ಬಗ್ಗೆ ಅನುಕಂಪ ತೋರಿಸಬೇಕಾ? ಸಿದ್ದರಾಮಯ್ಯನವರೇ ನಿಮ್ಮ ಅಜ್ಞಾನದ ಬಗ್ಗೆ ಪ್ರಶ್ನಿಸಿಕೊಳ್ಳಿ. ಮಾನವೀಯತೆ, ಸಾಮಾಜಿಕ ಕಳಕಳಿ ಇದ್ದರೆ ಜಾರಿ ಮಾಡಿ. ಇವತ್ತೇ ಒಳಮೀಸಲಾತಿ ಜಾರಿಗೊಳಿಸಿ ಎಂದು ಸವಾಲು ಸವಾಲು ಹಾಕಿದರು.

ಇದನ್ನೂ ಓದಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು

ಅಸ್ಪ್ರಶ್ಯರಿಗೆ ಮೀಸಲಾತಿ ಕೊಡುವಾಗ ಚರ್ಚೆ ಮೇಲೆ‌ ಚರ್ಚೆ ಮಾಡುತ್ತಾರೆ. 341ನೇ ವಿಧಿ ತಿದ್ದುಪಡಿ ಆಗಬೇಕು ಎನ್ನುತ್ತಾರೆ. ಸಿದ್ದರಾಮಯ್ಯ ಚುನಾವಣೆಗೂ ಮುನ್ನ ನುಡಿದಂತೆ ನಡೆಯುತ್ತೇವೆ ಎನ್ನುತ್ತಾರೆ . ಸಾಮಾನ್ಯ ವ್ಯಕ್ತಿ ಚರ್ಚೆ ಮಾಡುವ ರೀತಿ ಕ್ಯಾಬಿನೆಟ್ ನಲ್ಲಿ ಒಳಮೀಸಲಾತಿ ವಿಚಾರ ಚರ್ಚೆ ಮಾಡುತ್ತಾರೆ. ರಾಜ್ಯ ಸರ್ಕಾರಕ್ಕೆ ನಾಚಿಕೆ ಆಗಬೇಕು. ಮಾನವೀಯತೆ, ಸಾಮಾಜಿಕ ಕಳಕಳಿ ಇದ್ದರೆ ಇವತ್ತೇ ಮತ್ತೆ ಕ್ಯಾಬಿನೆಟ್ ಸೇರಿ ಒಳಮೀಸಲಾತಿ ಜಾರಿ ಮಾಡಿ. ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದೇನೆ ಎನ್ನುವ ಮಾತು ಹಿಂದಕ್ಕೆ ಪಡೆಯಿರಿ. ಕಾಂಗ್ರೆಸ್ ‌ನ ದಲಿತ ಶಾಸಕರು, ಸಚಿವರು ಒಳಮೀಸಲಾತಿ ಬಗ್ಗೆ ಮಾತನಾಡಿ ಎಂದು ಒತ್ತಾಯಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!