AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠಮಾನ್ಯಗಳ ಮೂಲಕ ಸೋಮಣ್ಣ ಮನವೊಲಿಕೆಗೆ ಯತ್ನ, ಹೈಕಮಾಂಡ್​ಗೆ ಒಂದು ಖಡಕ್ ಮಾತು ಹೇಳಿದ ಸ್ವಾಮೀಜಿ

ಬಿವೈ ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗುತ್ತಿದ್ದಂತೆಯೇ ಪಕ್ಷದ ಕೆಲ ನಾಯಕ ಸಿಟ್ಟು ಕುದಿಯುತ್ತಿದೆ. ಅಸಮಾಧಾನದ ಜ್ವಾಲೆ ಧಗಧಗಿಸುತ್ತಿದೆ. ಅದರಲ್ಲೂ ಮಾಜಿ ಸಚಿವ ವಿ ಸೋಮಣ್ಣ ಸಮರ, ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಬಿಜೆಪಿ ಪಡೆಗೆ ದೊಡ್ಡ ತಲೆನೋವಾಗಿದೆ. ಇದೀಗ ಡಿಸೆಂಬರ್ 7ಕ್ಕೆ ದೆಹಲಿಗೆ ಹೋಗುತ್ತೇನೆ ಎಂದಿರುವ ಸೋಮಣ್ಣ, ತಮ್ಮ ಸಿಟ್ಟನ್ನ ಹೈಕಮಾಂಡ್ ಮುಂದಿಡಲು ಸಜ್ಜಾಗಿದ್ದಾರೆ. ಆದ್ರೆ, ಇತ್ತ ರಾಜ್ಯ ಬಿಜೆಪಿ ನಾಯಕರು ಮೋದಿ ಪ್ರಧಾನಿಯಾಗ್ಬೇಕೆಂಬ ಅಸ್ತ್ರ ಮುಂದಿಟ್ಟು, ನಾಯಕರ ಮುನಿಸು ಶಮನಕ್ಕೆ ಮುಂದಾಗಿದ್ದಾರೆ.

ಮಠಮಾನ್ಯಗಳ ಮೂಲಕ ಸೋಮಣ್ಣ ಮನವೊಲಿಕೆಗೆ ಯತ್ನ, ಹೈಕಮಾಂಡ್​ಗೆ ಒಂದು ಖಡಕ್ ಮಾತು ಹೇಳಿದ ಸ್ವಾಮೀಜಿ
ವಿ ಸೋಮಣ್ಣ
ರಮೇಶ್ ಬಿ. ಜವಳಗೇರಾ
|

Updated on: Nov 27, 2023 | 9:16 AM

Share

ಬೆಂಗಳೂರು, (ನವೆಂಬರ್ 17): ಅಮಿತ್ ಶಾ ನನ್ನ ಮನೆಗೆ ಬಂದು ಎರಡ್ಮೂರು ಗಂಟೆ ಜೀವ ತೆಗೆದ್ರೆ, ನಾನೇನ್ ಮಾಡ್ಬೇಕು ಎಂದು ಬಿಜೆಪಿಯ ಹಿರಿಯ ನಾಯಕ ವಿ.ಸೋಮಣ್ಣ (V Somanna) ಸಿದ್ಧಗಂಗಾದ ಸಿದ್ದಲಿಂಗ ಶ್ರೀಗಳ ಎದುರಿನಲ್ಲೇ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಹೇಳಿದ ಮಾತು. ಹೈಕಮಾಂಡ್ ನಾಯಕರ ವಿರುದ್ಧ ಅಸಮಾಧಾನ ಗೊಂಡಿರುವ ವಿ.ಸೋಮಣ್ಣ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರ ಬಗ್ಗೆ ಶ್ರೀಗಳ ಮುಂದೆ ತಮ್ಮ ನೋವು ತೋಡಿಕೊಂಡಿದ್ದಾರೆ. ಅಲ್ಲದೇ ಬಿಜೆಪಿ ತೊರೆಯುವ ಚಿಂತನೆಯಲ್ಲಿದ್ದಾರೆ. ಆದ್ರೆಮ ಇತ್ತ ಬಿಜೆಪಿ ನಾಯಕರು ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಪ್ರತಿಷ್ಠಿತ ಮಠಮಾನ್ಯಗಳ ಮೂಲಕ ಸೋಮಣ್ಣ ಮನವೊಲಿಕೆಗೆ ಯತ್ನಿಸಿದ್ದಾರೆ.

ಸೋಮಣ್ಣ ಅವರನ್ನು ಸಮಾಧಾನಪಡಿಸಲು ರಾಜ್ಯ ಬಿಜೆಪಿ ನಾಯಕರು ಲಿಂಗಾಯಿತ ಮಠಾಧಿಪತಿಗಳನ್ನ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಹೈಕಮಾಂಡ್ ನಾಯಕರು ಸಹ ಸ್ವಾಮಿಜಿಗಳ ಜತೆ ಮಾತುಕತೆ ನಡೆಸಿದ್ದು, ಸೋಮಣ್ಣಗೆ ರಾಜಕೀಯವಾಗಿ ದುಡುಕಿನ ನಿರ್ಧಾರ ಮಾಡದಿರಲು ಹೇಳುವಂತೆ ಮನವಿ ಮಾಡಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ನಾಯಕರಿಗೆ ಹೆಚ್ಚಿನ ಪ್ರತಿಕ್ರಿಯೆ ನೀಡದ ಸ್ವಾಮೀಜಿಯೊಬ್ಬರು, ಸೋಮಣ್ಣಗೆ ಈಗ ನಾವು ಮಾತು ಹೇಳುವ ಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು, ಸೋಮಣ್ಣ ಹೇಳಿಕೆಯ ಹಿಂದಿನ ಗುಟ್ಟೇನು? 

ಇನ್ನೊಂದೆಡೆ ಚಿಕ್ಕಮಗಳೂರಿನ ಪೀಠದ ಮೂಲಕವು ಸೋಮಣ್ಣ ಮನವೊಲಿಕೆಗೆ ಯತ್ನ ನಡೆದಿದ್ದು, ಸೋಮಣ್ಣ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಡುವಿನ ಸಂಧಾನ ಸೂತ್ರ ಸಿದ್ಧವಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಸೋಮಣ್ಣರನ್ನು ಸಂಪರ್ಕಸಿದ್ದಾರೆ. ಡಿಕೆ ಶಿವಕುಮಾರ್ ಆಪ್ತರು ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದ್ರೆ, ಸೋಮಣ್ಣ ಅವರನ್ನು ಕಾಂಗ್ರೆಸ್​​ಗೆ ಸೇರಿಸಿಕೊಳ್ಳಲು ಪಕ್ಷದಲ್ಲೇ ಅಪಸ್ವರಗಳು ಕೇಳುಬಂದಿವೆ.

ಈ ಸಂಬಂಧ ಕೃಷ್ಣಪ್ಪ ಈಗಾಗಲೇ ಡಿಕೆ ಶಿವಕುಮಾರ್ ಹೊರತಾಗಿ ಇನ್ನಿತರ ಹಿರಿಯ ನಾಯಕರ ಜತೆ ಚರ್ಚೆ ಮಾಡಿದ್ದು, ಯಾವುದೇ ಕಾರಣಕ್ಕೂ ಸೋಮಣ್ಣ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದಿದ್ದಾರೆ. ಇನ್ನು ಡಿಸೆಂಬರ್ 6ರ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಸೋಮಣ್ಣ ಸೋಮಣ್ಣ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ನಾಯಕರ ಮನವೊಲಿಕೆಗೆ ಬಗ್ಗುತ್ತಾರಾ? ಅಥವಾ ಕಾಂಗ್ರೆಸ್ ಸೇರುತ್ತಾರಾ? ಎನ್ನುವುದು ಭಾರೀ ಕುತೂಹಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?